Latest

ಪುಡಿ ರೌಡಿಯ ಹಂಗಾಮಾ: ಸಿಗರೇಟ್‌ಗಾಗಿ ಲಾಂಗ್‌, ತೋರಿಸಿದ ವಿಡಿಯೋ ವೈರಲ್

ಬೆಂಗಳೂರು, ಫೆಬ್ರವರಿ 8: ನಗರದ ಕೋರಮಂಗಲದಲ್ಲಿ ಪುಡಿ ರೌಡಿಯೊಬ್ಬನ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಪ್ರಕರಣವು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಟೀ ಶಾಪ್‌ನಲ್ಲಿ ಹಂಗಾಮಾ
ಘಟನೆ ಕಳೆದ ರಾತ್ರಿ ಕೋರಮಂಗಲದ ಒಂದು ಚಹಾ ಅಂಗಡಿಯಲ್ಲಿ ನಡೆದಿದೆ. 25 ವರ್ಷದ ಗೌತಮ್‌ ಎಂಬಾತ, ಕೈಯಲ್ಲಿ ಲಾಂಗ್‌ ಹಿಡಿದು ಅಂಗಡಿಗೆ ನುಗ್ಗಿ, ಮಾಲೀಕನಿಗೆ ಬೆದರಿಕೆ ಹಾಕಿ ಬಿಟ್ಟಿ ಸಿಗರೇಟ್‌ ಪಡೆದುಕೊಂಡಿದ್ದಾನೆ. ಈ ದ್ರುಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶೀಘ್ರವೇ ವೈರಲ್‌ ಆಗಿ ಪೊಲೀಸರ ಗಮನಕ್ಕೆ ಬಂದಿದೆ.

ಪೊಲೀಸರ ತ್ವರಿತ ಕಾರ್ಯಾಚರಣೆ
ಪೊಲೀಸರು ಸಿಸಿಟಿವಿ ದೃಶ್ಯ ಮತ್ತು ಸ್ಥಳೀಯರ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ತಮ್ಮ ಸಾಂಪ್ರದಾಯಿಕ ಶೈಲಿಯಲ್ಲಿ, ಬೆಂಗಳೂರಿನ ಪೊಲೀಸರು ಈ ಪ್ರಕರಣದ ಕುರಿತು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಹಾಸ್ಯ ಶೈಲಿಯ ಪ್ರತಿಕ್ರಿಯೆ
ಪೊಲೀಸರ ಹಂಚಿದ ವಿಡಿಯೊದಲ್ಲಿ ಮೊದಲು ಆರೋಪಿಯ ಅವಾಜ್‌ ದೃಶ್ಯವಿದ್ದು, ನಂತರ ಜನಪ್ರಿಯ ಕನ್ನಡ ಚಿತ್ರ ‘ಸೂರ್ಯವಂಶ’ದ ಡೈಲಾಗ್‌ – “ಈ ಫಿಗರ್‌ನ ಎಲ್ಲೋ ನೋಡ್ದಂಗಯ್ತಲ್ಲ!” – ಎಂಬ ಹಾಸ್ಯಭರಿತ ಸಂಭಾಷಣೆ ಸೇರಿಸಲಾಗಿದೆ. ಅಂತಿಮವಾಗಿ, ಎಫ್‌ಐಆರ್‌ ಪ್ರತಿಯನ್ನು ತೋರಿಸಿ, ಪ್ರಕರಣಕ್ಕೆ ಸೀರಿಯಸ್‌ ಟಚ್‌ ನೀಡಿದ್ದಾರೆ.

ಈ ಘಟನೆಯಿಂದ ಕೋರಮಂಗಲದ ಸಾರ್ವಜನಿಕರಲ್ಲಿ ಭಯ ಮೂಡಿದ್ದರೂ, ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದು, ಇದೀಗ ಆರೋಪಿಯ ಕತೆ ಅದೆಷ್ಟೋ ಮೆಮೇ ಪೇಜ್‌ಗಳಲ್ಲಿ ಹಾಸ್ಯಕ್ಕಾಗಿ ಬಳಸಲ್ಪಡುತ್ತಿದೆ!

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

12 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

12 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

12 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

12 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago