Latest

ಪುಡಿ ರೌಡಿಯ ಹಂಗಾಮಾ: ಸಿಗರೇಟ್‌ಗಾಗಿ ಲಾಂಗ್‌, ತೋರಿಸಿದ ವಿಡಿಯೋ ವೈರಲ್

ಬೆಂಗಳೂರು, ಫೆಬ್ರವರಿ 8: ನಗರದ ಕೋರಮಂಗಲದಲ್ಲಿ ಪುಡಿ ರೌಡಿಯೊಬ್ಬನ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಪ್ರಕರಣವು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಟೀ ಶಾಪ್‌ನಲ್ಲಿ ಹಂಗಾಮಾ
ಘಟನೆ ಕಳೆದ ರಾತ್ರಿ ಕೋರಮಂಗಲದ ಒಂದು ಚಹಾ ಅಂಗಡಿಯಲ್ಲಿ ನಡೆದಿದೆ. 25 ವರ್ಷದ ಗೌತಮ್‌ ಎಂಬಾತ, ಕೈಯಲ್ಲಿ ಲಾಂಗ್‌ ಹಿಡಿದು ಅಂಗಡಿಗೆ ನುಗ್ಗಿ, ಮಾಲೀಕನಿಗೆ ಬೆದರಿಕೆ ಹಾಕಿ ಬಿಟ್ಟಿ ಸಿಗರೇಟ್‌ ಪಡೆದುಕೊಂಡಿದ್ದಾನೆ. ಈ ದ್ರುಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶೀಘ್ರವೇ ವೈರಲ್‌ ಆಗಿ ಪೊಲೀಸರ ಗಮನಕ್ಕೆ ಬಂದಿದೆ.

ಪೊಲೀಸರ ತ್ವರಿತ ಕಾರ್ಯಾಚರಣೆ
ಪೊಲೀಸರು ಸಿಸಿಟಿವಿ ದೃಶ್ಯ ಮತ್ತು ಸ್ಥಳೀಯರ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ತಮ್ಮ ಸಾಂಪ್ರದಾಯಿಕ ಶೈಲಿಯಲ್ಲಿ, ಬೆಂಗಳೂರಿನ ಪೊಲೀಸರು ಈ ಪ್ರಕರಣದ ಕುರಿತು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಹಾಸ್ಯ ಶೈಲಿಯ ಪ್ರತಿಕ್ರಿಯೆ
ಪೊಲೀಸರ ಹಂಚಿದ ವಿಡಿಯೊದಲ್ಲಿ ಮೊದಲು ಆರೋಪಿಯ ಅವಾಜ್‌ ದೃಶ್ಯವಿದ್ದು, ನಂತರ ಜನಪ್ರಿಯ ಕನ್ನಡ ಚಿತ್ರ ‘ಸೂರ್ಯವಂಶ’ದ ಡೈಲಾಗ್‌ – “ಈ ಫಿಗರ್‌ನ ಎಲ್ಲೋ ನೋಡ್ದಂಗಯ್ತಲ್ಲ!” – ಎಂಬ ಹಾಸ್ಯಭರಿತ ಸಂಭಾಷಣೆ ಸೇರಿಸಲಾಗಿದೆ. ಅಂತಿಮವಾಗಿ, ಎಫ್‌ಐಆರ್‌ ಪ್ರತಿಯನ್ನು ತೋರಿಸಿ, ಪ್ರಕರಣಕ್ಕೆ ಸೀರಿಯಸ್‌ ಟಚ್‌ ನೀಡಿದ್ದಾರೆ.

ಈ ಘಟನೆಯಿಂದ ಕೋರಮಂಗಲದ ಸಾರ್ವಜನಿಕರಲ್ಲಿ ಭಯ ಮೂಡಿದ್ದರೂ, ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದು, ಇದೀಗ ಆರೋಪಿಯ ಕತೆ ಅದೆಷ್ಟೋ ಮೆಮೇ ಪೇಜ್‌ಗಳಲ್ಲಿ ಹಾಸ್ಯಕ್ಕಾಗಿ ಬಳಸಲ್ಪಡುತ್ತಿದೆ!

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

2 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

2 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

2 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

2 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

2 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

2 hours ago