Latest

12 ಮಹಿಳೆಯರನ್ನು ಮದುವೆಯಾಗಿ ವಂಚಿಸಿದ ಪುಂಗಿದಾಸ ಮಹೇಶ!

ವಿಧವೆಯರು, ಅವಿವಾಹಿತ ಮಹಿಳೆಯರಿಗೆ ಆನ್​ಲೈನ್​ನಲ್ಲಿ ಗಾಳ ಹಾಕಿ ಬೆಣ್ಣೆಯಂತಹ ಮಾತುಗಳಿಂದ ಮರುಳು ಮಾಡಿ, ಮದುವೆಯಾಗಿ ಹಣ ಮತ್ತು ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್​ ಆಸಾಮಿಯನ್ನು ಮೈಸೂರು ಪೊಲೀಸರು ಕಳೆದ ಭಾನುವಾರ ಬಂಧಿಸಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗುತ್ತಿವೆ.
ಮಹೇಶ್ (35) ಬಂಧಿತ ಆರೋಪಿ. ಈತ ಬೆಂಗಳೂರಿನ ಬನಶಂಕರಿ ಬಡಾವಣೆಯ ನಿವಾಸಿ. ಮೈಸೂರಿನ ಕುವೆಂಪುನಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮಹಾವಂಚಕನನ್ನು ಕಾನೂನಿನ ಬಲೆಗೆ ಬೀಳಿಸಿದ್ದಾರೆ. ಮದುವೆಯಾಗಿ, ಮಕ್ಕಳು ಮಾಡಿ, ನಗ- ನಾಣ್ಯ ದೋಚಿ ನಾಪತ್ತೆಯಾದರೂ ದೂರು ಕೊಡಲು ಮಹಿಳೆಯರು ಹಿಂದೇಟು ಹಾಕಿದ್ದರು. ಕೊನೆಗೂ ಮೈಸೂರಿನ ಓರ್ವ ಸಂತ್ರಸ್ತ ಮಹಿಳೆ ಮುಂದೆ ಬಂದು ದೂರು ನೀಡಿದ ಬಳಿಕ ಮಹೇಶ್​ನನ್ನು ಬಂಧಿಸಲಾಗಿದೆ.
ಶೋಕಿ ಜೀವನ ನಡೆಸುತ್ತಿದ್ದ ಮಹೇಶ್​, ಆನ್​ಲೈನ್​ನಲ್ಲಿ ಸಿರಿವಂತ ಮಹಿಳೆಯರಿಗೆ ಗಾಳ ಹಾಕುತ್ತಿದ್ದ. ತನ್ನ ಮರಳು ಮಾತುಗಳಿಂದಲೇ ಪ್ರೀತಿಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಬಳಿಕ ಮದುವೆಯಾಗುವ ನಾಟಕವಾಡಿ ವಂಚನೆ ಮಾಡುತ್ತಿದ್ದ. ಮದುವೆ ಆಗಲು ಡೈರೆಕ್ಟರ್ ಸ್ಪೆಷಲ್ ಸಿನಿಮಾ ಮಾದರಿಯನ್ನು ಅನುಸರಿಸುತ್ತಿದ್ದ. 5 ಸಾವಿರ ರೂಪಾಯಿ ಕೊಟ್ಟರೆ ಬಾಡಿಗೆಗೆ ತಂದೆ-ತಾಯಿ, ಬಂಧು ಬಳಗ ಬರುತ್ತಿದ್ದರು. ಈ ಪ್ರಳಯಾಂತಕ ಒಂದೊಂದು ಮದುವೆಗೂ ಒಂದೊಂದು ಬಳಗವನ್ನು ಫಿಕ್ಸ್ ಮಾಡುತ್ತಿದ್ದ.
ವರ್ಷಕ್ಕೆ 20 ಲಕ್ಷ ರೂ. ಸಂಗ್ರಹ. ವಿಚಾರಣೆಗೆ ವೇಳೆ ಒಟ್ಟು 12 ಮದುವೆ ಆಗಿರುವುದಾಗಿ ಹೇಳಿಕೆ ನೀಡಿದ್ದಾನೆ. ಈ ಪೈಕಿ 6 ಮಹಿಳೆಯರಿಗೆ ಮಕ್ಕಳಿದ್ದಾರೆ. ಸುಲಭವಾಗಿ ಹಣ ಗಳಿಸಬಹುದು ಎನ್ನುವ ಕಾರಣಕ್ಕೆ ಮದುವೆಯನ್ನು ಆಯ್ಕೆ ಮಾಡಿಕೊಂಡಿದ್ದ. ಸಿರಿವಂತ ಮಹಿಳೆಯರೇ ಈತನ ಟಾರ್ಗೆಟ್​. ವರ್ಷಕ್ಕೆ ಸರಾಸರಿ 20 ಲಕ್ಷ ರೂ. ಹಣ ಸಂಗ್ರಹಿಸುತ್ತಿದ್ದ. ಯಾವುದೇ ಆಸ್ತಿ ಮಾಡಿಲ್ಲ. ವಂಚಿಸಿದ ಹಣವನೆಲ್ಲ ಶೋಕಿಗಾಗಿ ಹಣವನ್ನು ಖರ್ಚು ಮಾಡಿ ಇದೀಗ ಜೈಲು ಪಾಲಾಗಿದ್ದಾನೆ.
ಮಹೇಶ್​ ಸಿಕ್ಕಿಬಿದ್ದಿದ್ಹೇಗೆ?
ಆರೋಪಿ ಮಹೇಶ್​ಗೆ ಶಾದಿ ಡಾಟ್​ ಕಂನಲ್ಲಿ ಮೈಸೂರಿನ ನಿವಾಸಿ ಹೇಮಲತಾ ಎಂಬುವರು ಪರಿಚಯವಾಗಿದ್ದರು. ತಾನೊಬ್ಬ ಡಾಕ್ಟರ್​ ಎಂದು ಸುಳ್ಳು ಹೇಳಿ, ಆಕೆಯನ್ನು ನಂಬಿಸಿ, ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಮದುವೆಯಾಗಿದ್ದ. ಇದಾದ ಬಳಿಕ ತನ್ನ ವರಸೆ ಶುರು ಮಾಡಿದ್ದ. ತಾನೊಂದು ಕ್ಲಿನಿಕ್​ ತೆರೆಯಬೇಕೆಂದು ಅಂದುಕೊಂಡಿದ್ದೇನೆ. ಇದಕ್ಕಾಗಿ 70 ಲಕ್ಷ ರೂ. ಬೇಕಿದ್ದು, ಸಾಲ ಕೊಡಿಸು ಎಂದು ಹೇಮಲತಾಳನ್ನು ಒತ್ತಾಯಿಸುತ್ತಿದ್ದ. ಆದರೆ, ಸಾಲ ಕೊಡಿಸಲು ಹೇಮಲತಾ ಹಿಂದೇಟು ಹಾಕಿದರು. ಈಕೆ ತನ್ನ ದಾರಿಗೆ ಬರುತ್ತಿಲ್ಲ ಅಂತ ತಿಳಿದ ಬಳಿಕ ಆಕೆಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, 15 ಲಕ್ಷ ರೂ. ಹಣ ಹಾಗೂ ಚಿನ್ನಾಭರಣವನ್ನು ಕದ್ದು ಮಹೇಶ್​ ಪರಾರಿಯಾಗಿದ್ದ. ಇದಾದ ಬಳಿಕ ಹೇಮಲತಾ ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಆರೋಪಿ ಮಹೇಶನ ಎಡೆಮುರಿಯನ್ನು ಕಟ್ಟಿದ್ದಾರೆ. ಬಳಿಕ ವಿಚಾರಣೆ ವೇಳೆ ಈತ ತಾನು ಡಾಕ್ಟರ್, ಇಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಹೀಗೆ ಹಲವು ಪ್ರತಿಷ್ಠಿತ ಸ್ಥಾನಗಳ ಹೆಸರಲ್ಲಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈತ ವಿಧವೆ ಮತ್ತು ಅವಿವಾಹಿತ ಮಹಿಳೆಯರನ್ನೇ ಟಾರ್ಗೆಟ್​ ಮಾಡುತ್ತಿದ್ದ. ಅವರೆಲ್ಲರಿಗೂ ಕೈಕೊಟ್ಟಿರುವ ಸಂಗತಿ ಬಯಲಾಗಿದೆ.
ಬಂಧಿತ ಮಹೇಶ್​ನಿಂದ 2 ಲಕ್ಷ ನಗದು, 2 ಕಾರು, ಒಂದು ಬ್ರೇಸ್​ಲೆಟ್, ಒಂದು ಉಂಗುರ, ಎರಡು ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್​ಗಳನ್ನ ವಶಕ್ಕೆ ಪಡೆಯಲಾಗಿದೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago