Latest

12 ಮಹಿಳೆಯರನ್ನು ಮದುವೆಯಾಗಿ ವಂಚಿಸಿದ ಪುಂಗಿದಾಸ ಮಹೇಶ!

ವಿಧವೆಯರು, ಅವಿವಾಹಿತ ಮಹಿಳೆಯರಿಗೆ ಆನ್​ಲೈನ್​ನಲ್ಲಿ ಗಾಳ ಹಾಕಿ ಬೆಣ್ಣೆಯಂತಹ ಮಾತುಗಳಿಂದ ಮರುಳು ಮಾಡಿ, ಮದುವೆಯಾಗಿ ಹಣ ಮತ್ತು ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್​ ಆಸಾಮಿಯನ್ನು ಮೈಸೂರು ಪೊಲೀಸರು ಕಳೆದ ಭಾನುವಾರ ಬಂಧಿಸಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗುತ್ತಿವೆ.
ಮಹೇಶ್ (35) ಬಂಧಿತ ಆರೋಪಿ. ಈತ ಬೆಂಗಳೂರಿನ ಬನಶಂಕರಿ ಬಡಾವಣೆಯ ನಿವಾಸಿ. ಮೈಸೂರಿನ ಕುವೆಂಪುನಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮಹಾವಂಚಕನನ್ನು ಕಾನೂನಿನ ಬಲೆಗೆ ಬೀಳಿಸಿದ್ದಾರೆ. ಮದುವೆಯಾಗಿ, ಮಕ್ಕಳು ಮಾಡಿ, ನಗ- ನಾಣ್ಯ ದೋಚಿ ನಾಪತ್ತೆಯಾದರೂ ದೂರು ಕೊಡಲು ಮಹಿಳೆಯರು ಹಿಂದೇಟು ಹಾಕಿದ್ದರು. ಕೊನೆಗೂ ಮೈಸೂರಿನ ಓರ್ವ ಸಂತ್ರಸ್ತ ಮಹಿಳೆ ಮುಂದೆ ಬಂದು ದೂರು ನೀಡಿದ ಬಳಿಕ ಮಹೇಶ್​ನನ್ನು ಬಂಧಿಸಲಾಗಿದೆ.
ಶೋಕಿ ಜೀವನ ನಡೆಸುತ್ತಿದ್ದ ಮಹೇಶ್​, ಆನ್​ಲೈನ್​ನಲ್ಲಿ ಸಿರಿವಂತ ಮಹಿಳೆಯರಿಗೆ ಗಾಳ ಹಾಕುತ್ತಿದ್ದ. ತನ್ನ ಮರಳು ಮಾತುಗಳಿಂದಲೇ ಪ್ರೀತಿಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಬಳಿಕ ಮದುವೆಯಾಗುವ ನಾಟಕವಾಡಿ ವಂಚನೆ ಮಾಡುತ್ತಿದ್ದ. ಮದುವೆ ಆಗಲು ಡೈರೆಕ್ಟರ್ ಸ್ಪೆಷಲ್ ಸಿನಿಮಾ ಮಾದರಿಯನ್ನು ಅನುಸರಿಸುತ್ತಿದ್ದ. 5 ಸಾವಿರ ರೂಪಾಯಿ ಕೊಟ್ಟರೆ ಬಾಡಿಗೆಗೆ ತಂದೆ-ತಾಯಿ, ಬಂಧು ಬಳಗ ಬರುತ್ತಿದ್ದರು. ಈ ಪ್ರಳಯಾಂತಕ ಒಂದೊಂದು ಮದುವೆಗೂ ಒಂದೊಂದು ಬಳಗವನ್ನು ಫಿಕ್ಸ್ ಮಾಡುತ್ತಿದ್ದ.
ವರ್ಷಕ್ಕೆ 20 ಲಕ್ಷ ರೂ. ಸಂಗ್ರಹ. ವಿಚಾರಣೆಗೆ ವೇಳೆ ಒಟ್ಟು 12 ಮದುವೆ ಆಗಿರುವುದಾಗಿ ಹೇಳಿಕೆ ನೀಡಿದ್ದಾನೆ. ಈ ಪೈಕಿ 6 ಮಹಿಳೆಯರಿಗೆ ಮಕ್ಕಳಿದ್ದಾರೆ. ಸುಲಭವಾಗಿ ಹಣ ಗಳಿಸಬಹುದು ಎನ್ನುವ ಕಾರಣಕ್ಕೆ ಮದುವೆಯನ್ನು ಆಯ್ಕೆ ಮಾಡಿಕೊಂಡಿದ್ದ. ಸಿರಿವಂತ ಮಹಿಳೆಯರೇ ಈತನ ಟಾರ್ಗೆಟ್​. ವರ್ಷಕ್ಕೆ ಸರಾಸರಿ 20 ಲಕ್ಷ ರೂ. ಹಣ ಸಂಗ್ರಹಿಸುತ್ತಿದ್ದ. ಯಾವುದೇ ಆಸ್ತಿ ಮಾಡಿಲ್ಲ. ವಂಚಿಸಿದ ಹಣವನೆಲ್ಲ ಶೋಕಿಗಾಗಿ ಹಣವನ್ನು ಖರ್ಚು ಮಾಡಿ ಇದೀಗ ಜೈಲು ಪಾಲಾಗಿದ್ದಾನೆ.
ಮಹೇಶ್​ ಸಿಕ್ಕಿಬಿದ್ದಿದ್ಹೇಗೆ?
ಆರೋಪಿ ಮಹೇಶ್​ಗೆ ಶಾದಿ ಡಾಟ್​ ಕಂನಲ್ಲಿ ಮೈಸೂರಿನ ನಿವಾಸಿ ಹೇಮಲತಾ ಎಂಬುವರು ಪರಿಚಯವಾಗಿದ್ದರು. ತಾನೊಬ್ಬ ಡಾಕ್ಟರ್​ ಎಂದು ಸುಳ್ಳು ಹೇಳಿ, ಆಕೆಯನ್ನು ನಂಬಿಸಿ, ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಮದುವೆಯಾಗಿದ್ದ. ಇದಾದ ಬಳಿಕ ತನ್ನ ವರಸೆ ಶುರು ಮಾಡಿದ್ದ. ತಾನೊಂದು ಕ್ಲಿನಿಕ್​ ತೆರೆಯಬೇಕೆಂದು ಅಂದುಕೊಂಡಿದ್ದೇನೆ. ಇದಕ್ಕಾಗಿ 70 ಲಕ್ಷ ರೂ. ಬೇಕಿದ್ದು, ಸಾಲ ಕೊಡಿಸು ಎಂದು ಹೇಮಲತಾಳನ್ನು ಒತ್ತಾಯಿಸುತ್ತಿದ್ದ. ಆದರೆ, ಸಾಲ ಕೊಡಿಸಲು ಹೇಮಲತಾ ಹಿಂದೇಟು ಹಾಕಿದರು. ಈಕೆ ತನ್ನ ದಾರಿಗೆ ಬರುತ್ತಿಲ್ಲ ಅಂತ ತಿಳಿದ ಬಳಿಕ ಆಕೆಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, 15 ಲಕ್ಷ ರೂ. ಹಣ ಹಾಗೂ ಚಿನ್ನಾಭರಣವನ್ನು ಕದ್ದು ಮಹೇಶ್​ ಪರಾರಿಯಾಗಿದ್ದ. ಇದಾದ ಬಳಿಕ ಹೇಮಲತಾ ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಆರೋಪಿ ಮಹೇಶನ ಎಡೆಮುರಿಯನ್ನು ಕಟ್ಟಿದ್ದಾರೆ. ಬಳಿಕ ವಿಚಾರಣೆ ವೇಳೆ ಈತ ತಾನು ಡಾಕ್ಟರ್, ಇಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಹೀಗೆ ಹಲವು ಪ್ರತಿಷ್ಠಿತ ಸ್ಥಾನಗಳ ಹೆಸರಲ್ಲಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈತ ವಿಧವೆ ಮತ್ತು ಅವಿವಾಹಿತ ಮಹಿಳೆಯರನ್ನೇ ಟಾರ್ಗೆಟ್​ ಮಾಡುತ್ತಿದ್ದ. ಅವರೆಲ್ಲರಿಗೂ ಕೈಕೊಟ್ಟಿರುವ ಸಂಗತಿ ಬಯಲಾಗಿದೆ.
ಬಂಧಿತ ಮಹೇಶ್​ನಿಂದ 2 ಲಕ್ಷ ನಗದು, 2 ಕಾರು, ಒಂದು ಬ್ರೇಸ್​ಲೆಟ್, ಒಂದು ಉಂಗುರ, ಎರಡು ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್​ಗಳನ್ನ ವಶಕ್ಕೆ ಪಡೆಯಲಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago