Latest

12 ಮಹಿಳೆಯರನ್ನು ಮದುವೆಯಾಗಿ ವಂಚಿಸಿದ ಪುಂಗಿದಾಸ ಮಹೇಶ!

ವಿಧವೆಯರು, ಅವಿವಾಹಿತ ಮಹಿಳೆಯರಿಗೆ ಆನ್​ಲೈನ್​ನಲ್ಲಿ ಗಾಳ ಹಾಕಿ ಬೆಣ್ಣೆಯಂತಹ ಮಾತುಗಳಿಂದ ಮರುಳು ಮಾಡಿ, ಮದುವೆಯಾಗಿ ಹಣ ಮತ್ತು ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್​ ಆಸಾಮಿಯನ್ನು ಮೈಸೂರು ಪೊಲೀಸರು ಕಳೆದ ಭಾನುವಾರ ಬಂಧಿಸಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗುತ್ತಿವೆ.
ಮಹೇಶ್ (35) ಬಂಧಿತ ಆರೋಪಿ. ಈತ ಬೆಂಗಳೂರಿನ ಬನಶಂಕರಿ ಬಡಾವಣೆಯ ನಿವಾಸಿ. ಮೈಸೂರಿನ ಕುವೆಂಪುನಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮಹಾವಂಚಕನನ್ನು ಕಾನೂನಿನ ಬಲೆಗೆ ಬೀಳಿಸಿದ್ದಾರೆ. ಮದುವೆಯಾಗಿ, ಮಕ್ಕಳು ಮಾಡಿ, ನಗ- ನಾಣ್ಯ ದೋಚಿ ನಾಪತ್ತೆಯಾದರೂ ದೂರು ಕೊಡಲು ಮಹಿಳೆಯರು ಹಿಂದೇಟು ಹಾಕಿದ್ದರು. ಕೊನೆಗೂ ಮೈಸೂರಿನ ಓರ್ವ ಸಂತ್ರಸ್ತ ಮಹಿಳೆ ಮುಂದೆ ಬಂದು ದೂರು ನೀಡಿದ ಬಳಿಕ ಮಹೇಶ್​ನನ್ನು ಬಂಧಿಸಲಾಗಿದೆ.
ಶೋಕಿ ಜೀವನ ನಡೆಸುತ್ತಿದ್ದ ಮಹೇಶ್​, ಆನ್​ಲೈನ್​ನಲ್ಲಿ ಸಿರಿವಂತ ಮಹಿಳೆಯರಿಗೆ ಗಾಳ ಹಾಕುತ್ತಿದ್ದ. ತನ್ನ ಮರಳು ಮಾತುಗಳಿಂದಲೇ ಪ್ರೀತಿಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಬಳಿಕ ಮದುವೆಯಾಗುವ ನಾಟಕವಾಡಿ ವಂಚನೆ ಮಾಡುತ್ತಿದ್ದ. ಮದುವೆ ಆಗಲು ಡೈರೆಕ್ಟರ್ ಸ್ಪೆಷಲ್ ಸಿನಿಮಾ ಮಾದರಿಯನ್ನು ಅನುಸರಿಸುತ್ತಿದ್ದ. 5 ಸಾವಿರ ರೂಪಾಯಿ ಕೊಟ್ಟರೆ ಬಾಡಿಗೆಗೆ ತಂದೆ-ತಾಯಿ, ಬಂಧು ಬಳಗ ಬರುತ್ತಿದ್ದರು. ಈ ಪ್ರಳಯಾಂತಕ ಒಂದೊಂದು ಮದುವೆಗೂ ಒಂದೊಂದು ಬಳಗವನ್ನು ಫಿಕ್ಸ್ ಮಾಡುತ್ತಿದ್ದ.
ವರ್ಷಕ್ಕೆ 20 ಲಕ್ಷ ರೂ. ಸಂಗ್ರಹ. ವಿಚಾರಣೆಗೆ ವೇಳೆ ಒಟ್ಟು 12 ಮದುವೆ ಆಗಿರುವುದಾಗಿ ಹೇಳಿಕೆ ನೀಡಿದ್ದಾನೆ. ಈ ಪೈಕಿ 6 ಮಹಿಳೆಯರಿಗೆ ಮಕ್ಕಳಿದ್ದಾರೆ. ಸುಲಭವಾಗಿ ಹಣ ಗಳಿಸಬಹುದು ಎನ್ನುವ ಕಾರಣಕ್ಕೆ ಮದುವೆಯನ್ನು ಆಯ್ಕೆ ಮಾಡಿಕೊಂಡಿದ್ದ. ಸಿರಿವಂತ ಮಹಿಳೆಯರೇ ಈತನ ಟಾರ್ಗೆಟ್​. ವರ್ಷಕ್ಕೆ ಸರಾಸರಿ 20 ಲಕ್ಷ ರೂ. ಹಣ ಸಂಗ್ರಹಿಸುತ್ತಿದ್ದ. ಯಾವುದೇ ಆಸ್ತಿ ಮಾಡಿಲ್ಲ. ವಂಚಿಸಿದ ಹಣವನೆಲ್ಲ ಶೋಕಿಗಾಗಿ ಹಣವನ್ನು ಖರ್ಚು ಮಾಡಿ ಇದೀಗ ಜೈಲು ಪಾಲಾಗಿದ್ದಾನೆ.
ಮಹೇಶ್​ ಸಿಕ್ಕಿಬಿದ್ದಿದ್ಹೇಗೆ?
ಆರೋಪಿ ಮಹೇಶ್​ಗೆ ಶಾದಿ ಡಾಟ್​ ಕಂನಲ್ಲಿ ಮೈಸೂರಿನ ನಿವಾಸಿ ಹೇಮಲತಾ ಎಂಬುವರು ಪರಿಚಯವಾಗಿದ್ದರು. ತಾನೊಬ್ಬ ಡಾಕ್ಟರ್​ ಎಂದು ಸುಳ್ಳು ಹೇಳಿ, ಆಕೆಯನ್ನು ನಂಬಿಸಿ, ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಮದುವೆಯಾಗಿದ್ದ. ಇದಾದ ಬಳಿಕ ತನ್ನ ವರಸೆ ಶುರು ಮಾಡಿದ್ದ. ತಾನೊಂದು ಕ್ಲಿನಿಕ್​ ತೆರೆಯಬೇಕೆಂದು ಅಂದುಕೊಂಡಿದ್ದೇನೆ. ಇದಕ್ಕಾಗಿ 70 ಲಕ್ಷ ರೂ. ಬೇಕಿದ್ದು, ಸಾಲ ಕೊಡಿಸು ಎಂದು ಹೇಮಲತಾಳನ್ನು ಒತ್ತಾಯಿಸುತ್ತಿದ್ದ. ಆದರೆ, ಸಾಲ ಕೊಡಿಸಲು ಹೇಮಲತಾ ಹಿಂದೇಟು ಹಾಕಿದರು. ಈಕೆ ತನ್ನ ದಾರಿಗೆ ಬರುತ್ತಿಲ್ಲ ಅಂತ ತಿಳಿದ ಬಳಿಕ ಆಕೆಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, 15 ಲಕ್ಷ ರೂ. ಹಣ ಹಾಗೂ ಚಿನ್ನಾಭರಣವನ್ನು ಕದ್ದು ಮಹೇಶ್​ ಪರಾರಿಯಾಗಿದ್ದ. ಇದಾದ ಬಳಿಕ ಹೇಮಲತಾ ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಆರೋಪಿ ಮಹೇಶನ ಎಡೆಮುರಿಯನ್ನು ಕಟ್ಟಿದ್ದಾರೆ. ಬಳಿಕ ವಿಚಾರಣೆ ವೇಳೆ ಈತ ತಾನು ಡಾಕ್ಟರ್, ಇಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಹೀಗೆ ಹಲವು ಪ್ರತಿಷ್ಠಿತ ಸ್ಥಾನಗಳ ಹೆಸರಲ್ಲಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈತ ವಿಧವೆ ಮತ್ತು ಅವಿವಾಹಿತ ಮಹಿಳೆಯರನ್ನೇ ಟಾರ್ಗೆಟ್​ ಮಾಡುತ್ತಿದ್ದ. ಅವರೆಲ್ಲರಿಗೂ ಕೈಕೊಟ್ಟಿರುವ ಸಂಗತಿ ಬಯಲಾಗಿದೆ.
ಬಂಧಿತ ಮಹೇಶ್​ನಿಂದ 2 ಲಕ್ಷ ನಗದು, 2 ಕಾರು, ಒಂದು ಬ್ರೇಸ್​ಲೆಟ್, ಒಂದು ಉಂಗುರ, ಎರಡು ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್​ಗಳನ್ನ ವಶಕ್ಕೆ ಪಡೆಯಲಾಗಿದೆ.

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

14 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

14 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

14 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

14 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

14 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

14 hours ago