ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬೆಂಗಳೂರಿನ ಯಲಹಂಕದ ಚೈತನ್ಯ ಟೆಕ್ನೋ ಶಾಲೆಯ ಪ್ರಾಂಶುಪಾಲೆ ಹಾಗೂ ಮೂವರು ಶಿಕ್ಷಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ಸ್ಥಗಿತಗೊಳಿಸಿದೆ.
ಪ್ರಾಂಶುಪಾಲೆ ಮೀನಾಕ್ಷಿ ವಿನೋಧಿನಿ ಮತ್ತು ಶಿಕ್ಷಕರಾದ ರಾಯಚೋಟಿ ನರೇಶ್, ಕೆ. ಭರತ್ ಕುಮಾರ್ ಹಾಗೂ ಎಸ್. ಶ್ರೀನಿವಾಸ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದ ನ್ಯಾಯಪೀಠ, ಭವಿಷ್ಯದಲ್ಲಿ ಇತರೆ ವಿದ್ಯಾರ್ಥಿಗಳಿಂದ ದೂರುಗಳು ಬಂದರೆ ಈ ಆದೇಶವನ್ನು ರದ್ದುಗೊಳಿಸುವ ಸಾಧ್ಯತೆಯಿದೆ ಎಂದು ಮೌಖಿಕವಾಗಿ ತಿಳಿಸಿದೆ.
ಅರ್ಜಿದಾರರ ಪರ ವಕೀಲರು, ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳ ವಿಚಾರದಲ್ಲಿ ಪ್ರಾಂಶುಪಾಲೆ ಮತ್ತು ಪೋಷಕರ ನಡುವಿನ ಸಂಭಾಷಣೆಯ ವಿಡಿಯೋ ವೈರಲ್ ಆಗಿದ್ದು, ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳಿಂದ ಬಲವಂತವಾಗಿ ದೂರು ಪಡೆಯಲಾಗಿದೆ ಎಂದು ವಾದಿಸಿದರು. ಮಕ್ಕಳಿಗೆ ಯಾವುದೇ ದೈಹಿಕ ಶಿಕ್ಷೆ ನೀಡಲಾಗಿಲ್ಲ, ಕೇವಲ ಪೋಷಕರನ್ನು ಕರೆತರಲು ಸೂಚನೆ ನೀಡಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದರು.
ಈ ಪ್ರಕರಣಕ್ಕೆ ಕಾರಣವಾದ ಘಟನೆ 2026ರ ಮಾರ್ಚ್ 13ರಂದು ನಡೆದಿದೆ. 7ರಿಂದ 10ನೇ ತರಗತಿಯ ಏಳು ವಿದ್ಯಾರ್ಥಿಗಳು ತಡವಾಗಿ ಶಾಲೆಗೆ ಬಂದ ಹಿನ್ನೆಲೆಯಲ್ಲಿ, ಅವರನ್ನು ತರಗತಿಗೆ ಸೇರಿಸದೇ ಶಾಲೆಯ ಆವರಣದಲ್ಲಿ ನಿಲ್ಲಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…