ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬೆಂಗಳೂರಿನ ಯಲಹಂಕದ ಚೈತನ್ಯ ಟೆಕ್ನೋ ಶಾಲೆಯ ಪ್ರಾಂಶುಪಾಲೆ ಹಾಗೂ ಮೂವರು ಶಿಕ್ಷಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ಸ್ಥಗಿತಗೊಳಿಸಿದೆ.
ಪ್ರಾಂಶುಪಾಲೆ ಮೀನಾಕ್ಷಿ ವಿನೋಧಿನಿ ಮತ್ತು ಶಿಕ್ಷಕರಾದ ರಾಯಚೋಟಿ ನರೇಶ್, ಕೆ. ಭರತ್ ಕುಮಾರ್ ಹಾಗೂ ಎಸ್. ಶ್ರೀನಿವಾಸ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದ ನ್ಯಾಯಪೀಠ, ಭವಿಷ್ಯದಲ್ಲಿ ಇತರೆ ವಿದ್ಯಾರ್ಥಿಗಳಿಂದ ದೂರುಗಳು ಬಂದರೆ ಈ ಆದೇಶವನ್ನು ರದ್ದುಗೊಳಿಸುವ ಸಾಧ್ಯತೆಯಿದೆ ಎಂದು ಮೌಖಿಕವಾಗಿ ತಿಳಿಸಿದೆ.
ಅರ್ಜಿದಾರರ ಪರ ವಕೀಲರು, ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳ ವಿಚಾರದಲ್ಲಿ ಪ್ರಾಂಶುಪಾಲೆ ಮತ್ತು ಪೋಷಕರ ನಡುವಿನ ಸಂಭಾಷಣೆಯ ವಿಡಿಯೋ ವೈರಲ್ ಆಗಿದ್ದು, ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳಿಂದ ಬಲವಂತವಾಗಿ ದೂರು ಪಡೆಯಲಾಗಿದೆ ಎಂದು ವಾದಿಸಿದರು. ಮಕ್ಕಳಿಗೆ ಯಾವುದೇ ದೈಹಿಕ ಶಿಕ್ಷೆ ನೀಡಲಾಗಿಲ್ಲ, ಕೇವಲ ಪೋಷಕರನ್ನು ಕರೆತರಲು ಸೂಚನೆ ನೀಡಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದರು.
ಈ ಪ್ರಕರಣಕ್ಕೆ ಕಾರಣವಾದ ಘಟನೆ 2026ರ ಮಾರ್ಚ್ 13ರಂದು ನಡೆದಿದೆ. 7ರಿಂದ 10ನೇ ತರಗತಿಯ ಏಳು ವಿದ್ಯಾರ್ಥಿಗಳು ತಡವಾಗಿ ಶಾಲೆಗೆ ಬಂದ ಹಿನ್ನೆಲೆಯಲ್ಲಿ, ಅವರನ್ನು ತರಗತಿಗೆ ಸೇರಿಸದೇ ಶಾಲೆಯ ಆವರಣದಲ್ಲಿ ನಿಲ್ಲಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…