Latest

ಪುರಿ ಜಗನ್ನಾಥ ದೇಗುಲದ ಬಳಿ ಕಾಲ್ತುಳಿತ ದುರಂತ : ಇಬ್ಬರೂ ಹಿರಿಯ ಪೊಲೀಸರು ಅಮಾನತು.

ಭುವನೇಶ್ವರ, ಜೂನ್ 29: ಪವಿತ್ರ ರಥಯಾತ್ರೆಯೊಂದರ ವೇಳೆ ಜಗನ್ನಾಥ ದೇಗುಲದ ಬಳಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೂವರು ಭಕ್ತರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಈ ದುರಂತ ಬೆಳಿಗ್ಗೆ ಸುಮಾರು 4 ಗಂಟೆಯ ಸುಮಾರಿಗೆ ಗುಂಡಿಚಾ ದೇವಸ್ಥಾನದ ಬಳಿ ಸಂಭವಿಸಿದೆ.

ಸಂಭ್ರಮದಲ್ಲಿ ಜಮಾಯಿಸಿದ್ದ ಭಕ್ತರ ಭಾರೀ ಗುಂಪಿನಲ್ಲಿ ಹಠಾತ್ ಗೊಂದಲ ಉಂಟಾಗಿ ಈ ದುರಂತ ನಡೆದಿದ್ದು, ಪೊಲೀಸರು ಹಾಗೂ ಆಡಳಿತ ಯಂತ್ರ ನಿರ್ವಹಣೆಯಲ್ಲಿ ವಿಫಲವಾದುದರಿಂದ ಪರಿಸ್ಥಿತಿ ಕೈತಪ್ಪಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಘಟನೆಗೆ ಕಿಡಿಕಾರಿದ ಮುಖ್ಯಮಂತ್ರಿ ಮೋಹನ್ ಮಾಝಿ ಅವರು, ಪುರಿಯ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಹಾಗೂ ಎಸ್‌ಪಿ ವಿನೀತ್ ಅಗರ್ವಾಲ್ ಅವರನ್ನು ತಕ್ಷಣ ವರ್ಗಾಯಿಸುವಂತೆ ಆದೇಶ ನೀಡಿದ್ದಾರೆ. ಖುರ್ದಾದ ಜಿಲ್ಲಾಧಿಕಾರಿ ಚಂಚಲ್ ರಾಣಾ ಅವರನ್ನು ಪುರಿಗೆ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದ್ದು, ಪಿನಾಕ್ ಮಿಶ್ರಾ ನೂತನ ಎಸ್‌ಪಿಯಾಗಿ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಕೇವಲ ವರ್ಗಾವಣೆಯಲ್ಲಿ ತೃಪ್ತಿಯಾಗದೆ, ಡಿಸಿಪಿ ವಿಷ್ಣು ಪಾಟಿ ಹಾಗೂ ಕಮಾಂಡೆಂಟ್ ಅಜಯ್ ಪಧಿ ಎಂಬ ಇಬ್ಬರು ಹಿರಿಯ ಪೊಲೀಸರನ್ನು ಅಮಾನತುಗೊಳಿಸಿರುವುದಾಗಿ ಸಿಎಂ ಕಚೇರಿ ತಿಳಿಸಿದೆ.

ಮೃತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಘೋಷಿಸಿರುವ ರಾಜ್ಯ ಸರ್ಕಾರ, ಗಾಯಾಳುಗಳಿಗೆ ತುರ್ತು ವೈದ್ಯಕೀಯ ನೆರವು ಒದಗಿಸಿದೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಕೆಲವು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ದೇವಾಲಯದ ಅವಧಾನ ಮತ್ತು ಭದ್ರತಾ ವ್ಯವಸ್ಥೆ ಬಗ್ಗೆಯೂ ಈಗ ಪ್ರಶ್ನೆಗಳು ಎದ್ದಿವೆ. ಸರ್ಕಾರವು ಮುಂದಿನ ದಿನಗಳಲ್ಲಿ ಈ ಘಟನೆಗೆ ಕಾರಣವಾದ ಲೋಪಗಳನ್ನು ಚರ್ಚಿಸಿ, ಭವಿಷ್ಯದಲ್ಲಿ ಇಂತಹ ದುರಂತಗಳಿಲ್ಲದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago