
ಬಂಗಾರಪೇಟೆ |:ತಾಲ್ಲೂಕಿನ ಒಂದು ಗ್ರಾಮದಲ್ಲಿ ಬಾಲ್ಯ ವಿವಾಹ ನಡೆಯಲಿರುವುದರ ಖಚಿತ ಮಾಹಿತಿಯ ಮೇರೆಗೆ ಶನಿವಾರ ಅಧಿಕಾರಿಗಳ ತಂಡ ದಾಳಿ ನಡೆಸಿ ಮದುವೆ ತಡೆಯುವಲ್ಲಿ ಯಶಸ್ವಿಯಾಗಿದ್ದು, ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಮೂಲಗಳ ಪ್ರಕಾರ, ಬಾಲಕಿಯ ಪೋಷಕರು ಮುಂದಿನ ತಿಂಗಳಲ್ಲಿ ಮದುವೆ ನೆರವೇರಿಸುವ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಲಭಿಸಿತ್ತು. ಕೂಡಲೇ ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿದ ಮಕ್ಕಳ ಸಹಾಯವಾಣಿ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮುನಿರಾಜು ನೇತೃತ್ವದ ತಂಡವನ್ನು ಸ್ಥಳಕ್ಕೆ ರವಾನಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಪೊಲೀಸ್ ಸಿಬ್ಬಂದಿಯ ಸಹಕಾರದೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡಿದರು. ತಕ್ಷಣ ಪೋಷಕರನ್ನು ಮತ್ತು ಸಂಬಂಧಿಕರನ್ನು ಸಮಜಾಯಿಷಿ ಮಾಡಿ, ಬಾಲ್ಯ ವಿವಾಹವು ಕಾನೂನಿಗೆ ವಿರುದ್ಧವಾದ ತೀವ್ರ ಅಪರಾಧವಾಗಿದೆ ಎಂಬುದನ್ನು ವಿವರಿಸಿದರು. ಜೊತೆಗೆ, ಇದರಿಂದಾಗಿ ಮಕ್ಕಳ ಭವಿಷ್ಯಕ್ಕೆ ಸಂಭವಿಸಬಹುದಾದ ಹಾನಿಯ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಾಚರಣೆ ಫಲಕಾರಿಯಾಗಿ ಮುಕ್ತಾಯವಾಗಿ, ಅಪ್ರಾಪ್ತ ಬಾಲಕಿಯನ್ನು ಪೋಷಣೆಗಾಗಿ ಕೆಜಿಎಫ್ನಲ್ಲಿರುವ ಸರ್ಕಾರಿ ಬಾಲ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ. ಅಧಿಕಾರಿಗಳ ಈ ತ್ವರಿತ ಕ್ರಮ ಸಾರ್ವಜನಿಕರಿಂದ ಮೆಚ್ಚುಗೆ ಪಡೆದಿದ
ೆ.