Latest

ಪ್ರಚಾರ ವಿವಾದಕ್ಕೆ ರಚಿತಾ ರಾಮ್ ಗಟ್ಟಿ ಪ್ರತಿಕ್ರಿಯೆ: ತಪ್ಪು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ!

ಬೆಂಗಳೂರು: ‘ಸಂಜು ವೆಡ್ಸ್ ಗೀತಾ-2’ ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ ಹಿಡಿದು ಫಿಲ್ಮ್ ಚೇಂಬರ್‌ ತನಕ ಈ ವಿಚಾರ ಎಳೆದೊಯ್ಯಲಾಗಿದೆ. ಚಿತ್ರದ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದೆ ಚಿತ್ರತಂಡಕ್ಕೆ ಅಸಹಕಾರ ತೋರಿದ್ದಾರನ್ನೋ ಎಂಬ ಆಕ್ಷೇಪದ ಮಧ್ಯೆ ಇದೀಗ ರಚಿತಾ ರಾಮ್ ಸ್ಪಷ್ಟನೆ ನೀಡಿ, ನಿರ್ದೇಶಕರ ಮೇಲೆವೇ ಆರೋಪ ಹಾಕಿದ್ದಾರೆ.

ರಚಿತಾ ರಾಮ್ ಅವರು ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದು, “ನಾನು ಯಾರ ಮೇಲೂ ತಪ್ಪು ಮಾಡಿಲ್ಲ, ನನ್ನ ಅನುಪಸ್ಥಿತಿಯನ್ನು ನಿರ್ದಿಷ್ಟ ಉದ್ದೇಶಕ್ಕಾಗಿ ಬಲಾತ್ಕಾರವಾಗಿ ಬಳಸಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ,” ಎಂದು ಹೇಳಿದ್ದಾರೆ.

“ಸಂಜು ವೆಡ್ಸ್ ಗೀತಾ-2” ಚಿತ್ರವು ಮೊದಲ ಬಾರಿಗೆ ಜನವರಿ 17ರಂದು ಬಿಡುಗಡೆಯಾಗಿದ್ದಾಗ, ತಾವು ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದೆನೆಂದು ರಚಿತಾ ನೆನಪಿಸಿದ್ದಾರೆ. “ಆಗ ನನ್ನ ಕೆಲಸವನ್ನು ತಂಡ ಮೆಚ್ಚಿತ್ತು. ಆದರೆ ಈಗ ನನ್ನ ಹಿಂದೆ ಸುಳ್ಳು ಆರೋಪಗಳು ಕೇಳಿಬರುತ್ತಿವೆ. ಏನಿದು ನಾಟಕ?” ಎಂದು ಪ್ರಶ್ನಿಸಿದ್ದಾರೆ.

ಈಗ ತಾವು ಮತ್ತೊಂದು ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿರುವುದಾಗಿ ತಿಳಿಸಿರುವ ಅವರು, “ಇದೀಗ ಈ ಚಿತ್ರ ಮತ್ತೊಮ್ಮೆ ರಿಲೀಸ್ ಆಗುತ್ತಿದೆ. ನಾನು ಈಗಾಗಲೇ ಡೇಟ್ಸ್ ಕೊಟ್ಟಿರುವ ಸ್ಥಿತಿಯಲ್ಲಿ, ಮತ್ತೊಮ್ಮೆ ಪ್ರಚಾರಕ್ಕೆ ಬರಲು ಹೇಗೆ ಸಾಧ್ಯ? ಅದನ್ನು ಅರ್ಥ ಮಾಡಿಕೊಳ್ಳಬೇಕು.” ಎಂಬ ಮಾತುಗಳಿಂದ ತಮ್ಮ ಅಸಮಾಧಾನವನ್ನು ತೋಡಿದ್ದಾರೆ.

ಅಷ್ಟೇ ಅಲ್ಲ, “ಇದೇ ಸಂಜು ವೆಡ್ಸ್ ಗೀತಾ ತಂಡ, ಹಿಂದೆಯೊಮ್ಮೆ ನಾನು ಮಹಿಳಾ ನಿರ್ಮಾಪಕಿ ನಿರ್ಮಿಸುತ್ತಿದ್ದ ಸಿನಿಮಾ ಪ್ರಚಾರಕ್ಕೆ ಕಾಲ್ ಮಾಡಿದ್ದಾಗ, ಶೂಟಿಂಗ್ ಇದೆಂದು ನಿರಾಕರಿಸಿತ್ತು. ಆಗ ಆ ನಿರ್ಮಾಪಕರ ದುಡ್ಡು ದುಡ್ಡಲ್ಲವೇ? ಅವರ ಸಂಕಷ್ಟ ನಿಮಗೆ ಗೋಚರಿಸಲಿಲ್ಲವೇಕೆ?” ಎಂದು ಪ್ರಶ್ನಿಸಿ, ಜವಾಬ್ದಾರಿ ಬದಲಾವಣೆಗೆ ಎದ್ದು ಬಂದಿದ್ದಾರೆ.

ರಚಿತಾ ರಾಮ್ ತಮ್ಮ ಪ್ರತಿಕ್ರಿಯೆಯಲ್ಲಿ ಮತ್ತೊಂದು ಮುಖ್ಯ ವಿಚಾರ ಪ್ರಸ್ತಾಪಿಸಿದ್ದು, “ಪ್ರಚಾರಕ್ಕೆ ನಾನಿಲ್ಲದಿದ್ದರೂ ಸಾಮಾಜಿಕ ಜಾಲತಾಣದಲ್ಲಿ ನಾನು ಚಿತ್ರದ ಕುರಿತಾಗಿ ಪೋಸ್ಟ್ ಮತ್ತು ಸ್ಟೋರಿ ಹಾಕಿದ್ದೆ. ಆದರೆ ತಂಡದ ಪ್ಲ್ಯಾನಿಂಗ್‌ನಲ್ಲಿ ಸ್ಪಷ್ಟತೆಯ ಕೊರತೆ ಇತ್ತು. ಪ್ರತಿದಿನ ಬದಲಾಗುವ ಶೆಡ್ಯೂಲ್, ಮುಂದೂಡುವ ಕಾರ್ಯಕ್ರಮಗಳು ನನಗೆ ಅಸೌಕರ್ಯ ತಂದವು,” ಎಂದಿದ್ದಾರೆ.

ಅಂತಿಮವಾಗಿ, “ನಾನು ತಪ್ಪು ಮಾಡದೇ ಇರುವಾಗ ಕ್ಷಮೆ ಕೇಳಲು ಏಕೆ? ನಾನು ಅಭಿಮಾನಿಗಳಿಗೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಅವರೇನು ತಪ್ಪು ಆಗಿದೆಯೆಂದು ಭಾವಿಸಿದರೆ, ಅವರಿಗೆ ಮಾತ್ರ ಕ್ಷಮೆ ಕೇಳುತ್ತೇನೆ. ಆದರೆ ಬೇರೆ ಯಾರಿಗೆಲೂ ಅಲ್ಲ,” ಎಂದು ರಚಿತಾ ರಾಮ್ ಗಟ್ಟಿ ನಿಲುವು ಪ್ರಕಟಿಸಿದ್ದಾರೆ.

ಈ ಮೂಲಕ ರಚಿತಾ ರಾಮ್ ತಮ್ಮ ಮಾತಿನಲ್ಲಿ ಸ್ಪಷ್ಟತೆ, ಆತ್ಮವಿಶ್ವಾಸ ಮತ್ತು ನೈತಿಕ ಹಕ್ಕನ್ನು ಬಳಸಿಕೊಂಡು ನಿರ್ದೇಶಕ ಮತ್ತು ಚಿತ್ರತಂಡದ ವಿರುದ್ಧ ಗುಡುಗಿದ್ದಾರೆ. ಈ ವಿವಾದದಲ್ಲಿ ಇನ್ನೇನು ಬೆಳವಣಿಗೆಗಳು ನಡೆಯುತ್ತವೆ ಎಂಬುದು ಮುಂದೆ ಗೊತ್ತಾಗಬೇಕಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

16 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

16 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

16 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

16 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago