ಭಾರತ್ ಜೋಡೋ ಯಾತ್ರೆ ವೇಳೆ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ನೀಡಿದ ನೋಟಿಸ್ಗೆ ಸಂಬಂಧಿಸಿದಂತೆ ವಿಶೇಷ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ ಭಾನುವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ಭಾನುವಾರ ಮುಂಜಾನೆ ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿದ ಹೂಡಾ ಭಾರತ್ ಜೋಡೋ ಯಾತ್ರೆಯ ವೇಳೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ವಿವರ ಕೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿ, ರಾಹುಲ್ ಗಾಂಧಿಯವರೊಂದಿಗೆ ಮಾತನಾಡಿದ್ದೇವೆ. ಸ್ವಲ್ಪ ಸಮಯ ಬೇಕು ಎಂದಿದ್ದಾರೆ. ನಾವು ನೀಡಲಾದ ನೋಟಿಸ್ ನ್ನು ಅವರ ಕಚೇರಿಯಿಂದ ಇಂದು ಸ್ವೀಕರಿಸಲಾಗಿದೆ.
ವಿಚಾರಣೆಯ ಅಗತ್ಯವಾದರೆ ನಂತರ ಮಾಡುತ್ತೇವೆ ಎಂದು ಹೂಡಾ ಹೇಳಿದರು. ಭಾರತ್ ಜೋಡೋ ಯಾತ್ರೆ ಸುದೀರ್ಘ ಯಾತ್ರೆಯಾಗಿತ್ತು. ಅನೇಕ ಜನರನ್ನು ಭೇಟಿಯಾಗಿದ್ದು, ಅದನ್ನು ಸಂಕಲಿಸಲು ಸಮಯ ಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ಅವರು ನಮಗೆ ಭರವಸೆ ನೀಡಿದ್ದಾರೆ ಮತ್ತು ಮಾಹಿತಿ ಪಡೆದ ತಕ್ಷಣ ಮುಂದಿನ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…