ಭಾರತ್ ಜೋಡೋ ಯಾತ್ರೆ ವೇಳೆ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ನೀಡಿದ ನೋಟಿಸ್ಗೆ ಸಂಬಂಧಿಸಿದಂತೆ ವಿಶೇಷ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ ಭಾನುವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ಭಾನುವಾರ ಮುಂಜಾನೆ ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿದ ಹೂಡಾ ಭಾರತ್ ಜೋಡೋ ಯಾತ್ರೆಯ ವೇಳೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ವಿವರ ಕೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿ, ರಾಹುಲ್ ಗಾಂಧಿಯವರೊಂದಿಗೆ ಮಾತನಾಡಿದ್ದೇವೆ. ಸ್ವಲ್ಪ ಸಮಯ ಬೇಕು ಎಂದಿದ್ದಾರೆ. ನಾವು ನೀಡಲಾದ ನೋಟಿಸ್ ನ್ನು ಅವರ ಕಚೇರಿಯಿಂದ ಇಂದು ಸ್ವೀಕರಿಸಲಾಗಿದೆ.
ವಿಚಾರಣೆಯ ಅಗತ್ಯವಾದರೆ ನಂತರ ಮಾಡುತ್ತೇವೆ ಎಂದು ಹೂಡಾ ಹೇಳಿದರು. ಭಾರತ್ ಜೋಡೋ ಯಾತ್ರೆ ಸುದೀರ್ಘ ಯಾತ್ರೆಯಾಗಿತ್ತು. ಅನೇಕ ಜನರನ್ನು ಭೇಟಿಯಾಗಿದ್ದು, ಅದನ್ನು ಸಂಕಲಿಸಲು ಸಮಯ ಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ಅವರು ನಮಗೆ ಭರವಸೆ ನೀಡಿದ್ದಾರೆ ಮತ್ತು ಮಾಹಿತಿ ಪಡೆದ ತಕ್ಷಣ ಮುಂದಿನ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.
ಚಿಕ್ಕಮಗಳೂರು: ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲೇ ನಡುರಸ್ತೆಯಲ್ಲಿ ಗಲಾಟೆ ನಡೆದಿದ್ದು, ಪತ್ನಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತిపై ಪತ್ನಿ…
ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಸಂಬಂಧಿಸಿದ ಬ್ಲ್ಯಾಕ್ಮೇಲ್ ಪ್ರಕರಣದಲ್ಲಿ ಬಂಧಿತನಾದ ಕೃಪಾಲನಿ ಕುರಿತು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ವಿಚಾರಣೆ ವೇಳೆ, ಪ್ರೀತಿ…
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (CUK) ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.…
ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…
ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ…
ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ತನ್ನ ಬಾಯ್ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…