ಚಾಮರಾಜನಗರ: ನಗರಸಭೆಯ ಆರೋಗ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳು ನಗರದಲ್ಲಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಬಳಸುತ್ತಿರುವ ಅಂಗಡಿಗಳ ವಿರುದ್ಧ ತೀವ್ರ ಕ್ರಮ ಕೈಗೊಂಡಿದ್ದಾರೆ. ನಗರದ ದೊಡ್ಡಂಗಡಿ ಬೀದಿ, ರಥ ಬೀದಿ, ಮಾರಿಗುಡಿ ಹಾಗೂ ಚಿಕ್ಕಂಗಡಿ ಬೀದಿಗಳಲ್ಲಿರುವ ದಿನಸಿ ಅಂಗಡಿ, ಬೇಕರಿ, ತಳ್ಳುಗಾಡಿ ವ್ಯಾಪಾರಸ್ಥರು, ಹೂವಿನ ಸ್ಟಾಲ್ ಹಾಗೂ ಇತರ ಮಳಿಗೆಗಳ ಮೇಲೆ ದಾಳಿ ನಡೆಸಲಾಯಿತು.
ಈ ವೇಳೆ ಅಧಿಕಾರಿಗಳು ಸುಮಾರು 15 ಕೆ.ಜಿ.ಷ್ಟು ಪ್ಲಾಸ್ಟಿಕ್ ಕವರ್ ಹಾಗೂ ಲೋಟಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ಲಾಸ್ಟಿಕ್ ಬಳಕೆ ಮಾಡಿದ 10 ಅಂಗಡಿಗಳ ಮಾಲೀಕರಿಗೆ ತಲಾ ₹500ರಂತೆ ದಂಡ ವಿಧಿಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ಸರಕಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ತಪಾಸಣೆ ನಡೆಸಲಾಗಿದೆ.
ಇದೇ ವೇಳೆ ದಿನಸಿ ಅಂಗಡಿಗಳು, ಪಾಸ್ಟ್ಫುಡ್ ಸೆಂಟರ್ಗಳು, ವೈನ್ ಶಾಪ್ಗಳು ಸೇರಿದಂತೆ ಅನೇಕ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಏಕಬಳಕೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮೂಡಿಸಿದರು.
ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಯಿತು. ಆರೋಗ್ಯ ಇಲಾಖೆಯ ಸಿಬ್ಬಂದಿಯಾದ ಮಣಿಕಂಠ, ಚೇತನ್, ನಿತಿನ್, ಗೌತಮ್, ರವಿಕುಮಾರ್ ಹಾಗೂ ರಿತಿಕ್ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಪರಿಸರ ಸ್ನೇಹಿ ಪರ್ಯಾಯ ವಸ್ತುಗಳನ್ನು ಬಳಸಬೇಕು ಎಂಬ ಸಲಹೆಯನ್ನು ಅಧಿಕಾರಿಗಳು ಈ ಸಂದರ್ಭದಲ್ಲಿ ನೀಡಿದರು.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…