Latest

ಚಾಮರಾಜನಗರ ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಿರುದ್ಧ ದಾಳಿ: ವ್ಯಾಪಾರಸ್ಥರಿಗೆ ತಲಾ ₹500ರಂತೆ ದಂಡ

ಚಾಮರಾಜನಗರ: ನಗರಸಭೆಯ ಆರೋಗ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳು ನಗರದಲ್ಲಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್‌ ಬಳಸುತ್ತಿರುವ ಅಂಗಡಿಗಳ ವಿರುದ್ಧ ತೀವ್ರ ಕ್ರಮ ಕೈಗೊಂಡಿದ್ದಾರೆ. ನಗರದ ದೊಡ್ಡಂಗಡಿ ಬೀದಿ, ರಥ ಬೀದಿ, ಮಾರಿಗುಡಿ ಹಾಗೂ ಚಿಕ್ಕಂಗಡಿ ಬೀದಿಗಳಲ್ಲಿರುವ ದಿನಸಿ ಅಂಗಡಿ, ಬೇಕರಿ, ತಳ್ಳುಗಾಡಿ ವ್ಯಾಪಾರಸ್ಥರು, ಹೂವಿನ ಸ್ಟಾಲ್ ಹಾಗೂ ಇತರ ಮಳಿಗೆಗಳ ಮೇಲೆ ದಾಳಿ ನಡೆಸಲಾಯಿತು.

ಈ ವೇಳೆ ಅಧಿಕಾರಿಗಳು ಸುಮಾರು 15 ಕೆ.ಜಿ.ಷ್ಟು ಪ್ಲಾಸ್ಟಿಕ್ ಕವರ್ ಹಾಗೂ ಲೋಟಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ಲಾಸ್ಟಿಕ್ ಬಳಕೆ ಮಾಡಿದ 10 ಅಂಗಡಿಗಳ ಮಾಲೀಕರಿಗೆ ತಲಾ ₹500ರಂತೆ ದಂಡ ವಿಧಿಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ಸರಕಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ತಪಾಸಣೆ ನಡೆಸಲಾಗಿದೆ.

ಇದೇ ವೇಳೆ ದಿನಸಿ ಅಂಗಡಿಗಳು, ಪಾಸ್ಟ್‌ಫುಡ್ ಸೆಂಟರ್‌ಗಳು, ವೈನ್‌ ಶಾಪ್‌ಗಳು ಸೇರಿದಂತೆ ಅನೇಕ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಏಕಬಳಕೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮೂಡಿಸಿದರು.

ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಯಿತು. ಆರೋಗ್ಯ ಇಲಾಖೆಯ ಸಿಬ್ಬಂದಿಯಾದ ಮಣಿಕಂಠ, ಚೇತನ್, ನಿತಿನ್, ಗೌತಮ್, ರವಿಕುಮಾರ್ ಹಾಗೂ ರಿತಿಕ್ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಪರಿಸರ ಸ್ನೇಹಿ ಪರ್ಯಾಯ ವಸ್ತುಗಳನ್ನು ಬಳಸಬೇಕು ಎಂಬ ಸಲಹೆಯನ್ನು ಅಧಿಕಾರಿಗಳು ಈ ಸಂದರ್ಭದಲ್ಲಿ ನೀಡಿದರು.

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

4 hours ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

20 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

1 day ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

1 day ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago