ಔರಾದ ತಾಲೂಕಿನ ವಿಜಯನಗರ ತಾಂಡಾ ಶಿವಾರದಲ್ಲಿ ಅಕ್ರಮ ಗಾಂಜಾ ಸಾಗಾಟದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 56 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಜಿಲ್ಲೆಯ ಪೊಲೀಸ್ ಶ್ವಾನ ‘ದೀಪಾ’ ಪ್ರಮುಖ ಪಾತ್ರ ವಹಿಸಿತು.
ಶ್ವಾನದ ನೆರವಿನಿಂದ ಗಾಂಜಾ ಪತ್ತೆ
ವಿಜಯನಗರ ತಾಂಡಾದ ನಿವಾಸಿ ಅಂಬಾಜಿ (56) ತನ್ನ ಹೊಲದ ಸೊಯಾಬಿನ್ ಹೊಟ್ಟಿನಲ್ಲಿ ಈ ಗಾಂಜಾವನ್ನು ಅಡಗಿಸಿಟ್ಟುಕೊಂಡಿದ್ದ. ಮಾದಕ ವಸ್ತು ಮಾರಾಟಕ್ಕೆ ತಯಾರಿಸುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಸಂತಪೂರ ಠಾಣೆಯ ಪಿಎಸ್ಐ ನಂದಕುಮಾರ ಮುಳೆ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತು. ವಿಶೇಷ ಶ್ವಾನ ‘ದೀಪಾ’ ಗಾಂಜಾವಿನ ಸ್ಥಳವನ್ನು ಸುಳಿವೇಳಿಸಿ, ಪೊಲೀಸರು ಮಾದಕ ವಸ್ತುವನ್ನು ವಶಕ್ಕೆ ಪಡೆಯಲು ನೆರವಾಯಿತು.
ಆರೋಪಿ ಬಂಧನ, ಮುಂದಿನ ಕ್ರಮ
ಅಂಬಾಜಿಯನ್ನು ಬಂಧಿಸಿ, ಅವನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ತಹಸೀಲ್ದಾರ ಮಲ್ಲಶೆಟ್ಟಿ ಚಿದ್ರೆ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಸುನೀಲಕುಮಾರ ಕೋರೆ, ಏಕನಾಥ, ಕೊಟ್ರೇಶ್, ರಾಮರೆಡ್ಡಿ, ಸುಭಾಷ, ಸಿದ್ದಣ್ಣ, ಗೌತಮ್ ಮೊದಲಾದವರು ಪಾಲ್ಗೊಂಡಿದ್ದರು.
ಪ್ರಸ್ತುತ ಆರೋಪಿ ವಿರುದ್ಧ ಸಂಬಂಧಿತ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಗಾಂಜಾ ಸಾಗಾಟದ ಜಾಲದ ಹಿಂದಿನ ಮಾಸ್ಟರ್ಮೈಂಡ್ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…