Latest

ಅಕ್ರಮ ಜುಗಾರಿ ಅಡ್ಡೆ ಮೇಲೆ ದಾಳಿ: ಮೂಡಲಕಟ್ಟಾ ಫ್ಯಾಮಿಲಿ ಫಾರಂ ಹೌಸ್‌ನಲ್ಲಿ 5 ಮಂದಿ ಬಂಧನ

ಭಟ್ಕಳ : ಮುರುಡೇಶ್ವರದ ಬಳಿ ಇರುವ ಮೂಡಲಕಟ್ಟಾ ಫ್ಯಾಮಿಲಿ ಫಾರಂ ಹೌಸ್‌ನಲ್ಲಿ ಅಂದರ್ ಬಾಹರ್ ಜುಗಾರಿ ಆಟದಲ್ಲಿ ತೊಡಗಿದ್ದ ಐವರ ವಿರುದ್ಧ ಮುರುಡೇಶ್ವರ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿರುವ ಘಟನೆ ಬೆಳಕಿಗೆ ಬಂದಿದೆ.

ಘಟನೆ ವಿವರದಲ್ಲಿಗೆ ಹೋಗುವುದಾದರೆ, ಬದ್ರಿಮನೆ ಮೂಲದ ಆಟೋ ಚಾಲಕ ಈಶ್ವರ ನಾಯ್ಕ ಅವರು ಮುಠ್ಠಳ್ಳಿ ಬಳಿಯ ಫ್ಯಾಮಿಲಿ ಫಾರಂ ಹೌಸ್‌ನ ರೂಂ ನಂ.105ನಲ್ಲಿ ಸದ್ಯಾ ವಾಸ್ತವ್ಯ ಮಾಡಿಕೊಂಡಿದ್ದರು. ಅವರು ತಮ್ಮ ನಾಲ್ವರು ಸ್ನೇಹಿತರನ್ನು ಅಲ್ಲಿ ಆಮಂತ್ರಿಸಿದ್ದರು. ಅವರೊಂದಿಗೆ ಮುಂಡಳ್ಳಿ ಗ್ರಾಮದ ವರದರಾಜ ನಾಯ್ಕ, ತಲಾಂದ ಗ್ರಾಮದ ಈಶ್ವರ ನಾಗಪ್ಪ ನಾಯ್ಕ (ಅತರೂ ಆಟೋ ಚಾಲಕರು), ಮಕ್ಕಿ ಗ್ರಾಮದ ಕೂಲಿ ಕಾರ್ಮಿಕ ಈಶ್ವರ ಮಾಸ್ತಪ್ಪ ನಾಯ್ಕ ಮತ್ತು ತಲಾಂದ ತಲಗೋಡು ಗ್ರಾಮದ ಸೆಂಟ್ರಿಂಗ್ ಕೆಲಸ ಮಾಡುವ ಲೋಕೇಶ ನಾಯ್ಕ ಸಹ ಭಾಗಿಯಾಗಿದ್ದರು.

ಈ ಗೂಡು ಗೂಪ್ತವಾಗಿ ಅಂದರ್ ಬಾಹರ್ ಆಟ ಆಡುತ್ತಿದ್ದ ವೇಳೆ ಜೂನ್ 20ರಂದು ಪಿಎಸ್‌ಐ ಹಣುಮಂತ ಬೀರಾದರ್ ನೇತೃತ್ವದ ಪೊಲೀಸರು ದಾಳಿ ನಡೆಸಿದರು. ದಾಳಿಯ ವೇಳೆ 13,200 ರೂ. ನಗದು, ಇಸ್ಪೀಟ್ ಎಲೆಗಳು ಹಾಗೂ ಜುಗಾರಿಗೆ ಬಳಸಿದ ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಿಂದ ಫ್ಯಾಮಿಲಿ ಫಾರಂ ಹೌಸ್ ಮಾಲಕರು ಜುಗಾರಿ ಆಟಕ್ಕೆ ಅವಕಾಶ ಕಲ್ಪಿಸಿದ್ದುದು ಬಹಿರಂಗವಾಗಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲು ತಯಾರಿ ನಡೆಯುತ್ತಿದೆ.

ಈ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

9 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

14 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

14 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

14 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

15 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

15 hours ago