ಳಂದೂರು: ಮಾಂಬಳ್ಳಿ ಗ್ರಾಮದ ಕಿನಕಹಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತರು ಮದ್ದೂರು ಗ್ರಾಮದ ಅಸ್ಲಂಪಾಷ ಮತ್ತು ಮುಳ್ಳೂರು ಗ್ರಾಮದ ಸುದೀಪ್ ಎಂದು ಗುರುತಿಸಲ್ಪಟ್ಟಿದ್ದಾರೆ. ಇವರು ಪ್ಯಾಸೆಂಜರ್ ಆಟೋದಲ್ಲಿ 7 ಚೀಲಗಳಲ್ಲಿ 444 ಕಿಲೋ ಪಡಿತರ ಅಕ್ಕಿ (ಮೌಲ್ಯ 6670 ರೂ.) ಅನ್ನು ಮುಳ್ಳೂರು ಗ್ರಾಮದಲ್ಲಿ ಕಡಿಮೆ ಬೆಲೆಗೆ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದರೆಂದು ವರದಿಯಾಗಿದೆ.

ಖಚಿತ ಮಾಹಿತಿಯ ಮೇರೆಗೆ ಆಹಾರ ನಿರೀಕ್ಷಕ ಬಿಸಲಯ್ಯ ಹಾಗೂ ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಕರಿಬಸಪ್ಪ, ಮುಖ್ಯಪೇದೆ ಪರಶಿವಮೂರ್ತಿ, ಕಿಶೋರ್, ಮತ್ತು ಪೇದೆಗಳಾದ ಶಿವಕುಮಾರ್ ಮತ್ತು ಬಸವರಾಜ್‌ಗುತ್ತಲ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಅಕ್ಕಿ ಮತ್ತು ಆಟೋವನ್ನು ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣವನ್ನು ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

error: Content is protected !!