ಯಳಂದೂರು: ಮಾಂಬಳ್ಳಿ ಗ್ರಾಮದ ಕಿನಕಹಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತರು ಮದ್ದೂರು ಗ್ರಾಮದ ಅಸ್ಲಂಪಾಷ ಮತ್ತು ಮುಳ್ಳೂರು ಗ್ರಾಮದ ಸುದೀಪ್ ಎಂದು ಗುರುತಿಸಲ್ಪಟ್ಟಿದ್ದಾರೆ. ಇವರು ಪ್ಯಾಸೆಂಜರ್ ಆಟೋದಲ್ಲಿ 7 ಚೀಲಗಳಲ್ಲಿ 444 ಕಿಲೋ ಪಡಿತರ ಅಕ್ಕಿ (ಮೌಲ್ಯ 6670 ರೂ.) ಅನ್ನು ಮುಳ್ಳೂರು ಗ್ರಾಮದಲ್ಲಿ ಕಡಿಮೆ ಬೆಲೆಗೆ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದರೆಂದು ವರದಿಯಾಗಿದೆ.
ಖಚಿತ ಮಾಹಿತಿಯ ಮೇರೆಗೆ ಆಹಾರ ನಿರೀಕ್ಷಕ ಬಿಸಲಯ್ಯ ಹಾಗೂ ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ, ಮುಖ್ಯಪೇದೆ ಪರಶಿವಮೂರ್ತಿ, ಕಿಶೋರ್, ಮತ್ತು ಪೇದೆಗಳಾದ ಶಿವಕುಮಾರ್ ಮತ್ತು ಬಸವರಾಜ್ಗುತ್ತಲ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಅಕ್ಕಿ ಮತ್ತು ಆಟೋವನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣವನ್ನು ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…
ಇಂಟರ್ನೆಟ್ ಕ್ರಾಂತಿಯ ನಂತರ ಸ್ಮಾರ್ಟ್ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್ಗಳಾಗಿ ಪರಿಣಮಿಸಿದ್ದಾರೆ. ಈ…
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…