Latest

ಗ್ರಾಮೀಣ ಭಾಗದ ಅನಧಿಕೃತ ಕ್ಲಿನಿಕ್‌ಗಳ ಮೇಲೆ ದಾಳಿ: ಎಂಟು ಕ್ಲಿನಿಕ್ ಗಳು ಲಾಕ್‌!

ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಎಂಟು ಕ್ಲಿನಿಕ್‌ಗಳ ಮೇಲೆ ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ಕೆ.ಪಿ.ಎಂ.ಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯಿದೆ) ಪ್ರಾಧಿಕಾರ ತಂಡದ ಅಧಿಕಾರಿಗಳು ದಾಳಿ ನಡೆಸಿ, ಕ್ಲಿನಿಕ್‌ಗಳನ್ನು ಬಂದ್‌ ಮಾಡುವ ಮೂಲಕ ನೋಟಿಸ್‌ ಜಾರಿ ಮಾಡಿದ್ದಾರೆ.

ಗುರುವಾರ ನಡೆದ ಈ ಕಾರ್ಯಾಚರಣೆಯಲ್ಲಿ ಮಳಗಿಯ ಚನ್ನಬಸವೇಶ್ವರ ಮೆಡಿಕಲ್ಸ್‌, ರೇಣುಕಾ ಮೆಡಿಕಲ್ಸ್‌, ಕೋಡಂಬಿಯ ಅಹ್ಮದಸಾಬ್‌ ಎಂಬುವರ ಕ್ಲಿನಿಕ್‌, ಪಾಳಾ ಗ್ರಾಮದ ಗುರು ಕ್ಲಿನಿಕ್‌, ಕಾತೂರ ಗ್ರಾಮದ ಧನ್ವಂತರಿ ಕ್ಲಿನಿಕ್‌, ಗಣೇಶಪುರದ ಗೋಪಾಲ ಎಂಬುವರ ಕ್ಲಿನಿಕ್‌, ಕಾವಲಕೊಪ್ಪ ಗ್ರಾಮದ ಧನ್ವಂತರಿ ಕ್ಲಿನಿಕ್‌ ಹಾಗೂ ಇನ್ನೊಂದು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಕ್ಲಿನಿಕ್‌ ಪರಿಶೀಲನೆಯ ಅಡಿಯಾಯಿತು.

ಅನಧಿಕೃತವಾಗಿ ಕಾರ್ಯನಿರ್ವಹಣೆ ಕಂಡು ಬಂದ ಹಿನ್ನೆಲೆ, ಎಲ್ಲ ಕ್ಲಿನಿಕ್‌ಗಳನ್ನು ತಕ್ಷಣವೇ ಮುಚ್ಚುವಂತೆ ಸೂಚನೆ ನೀಡಲಾಗಿದೆ. ‘ಹಿಂದಿನ ದಿನಗಳಲ್ಲಿ ಪಟ್ಟಣದಲ್ಲಿಯೂ ಇಂತಹ ದಾಳಿ ನಡೆಸಿ ಹಲವು ಅಕ್ರಮ ಕ್ಲಿನಿಕ್‌ಗಳನ್ನು ಬಂದ್‌ ಮಾಡಲಾಗಿತ್ತು. ಈಗ ಗ್ರಾಮೀಣ ಭಾಗದ ದಾಳಿ ಇನ್ನಷ್ಟು ತೀವ್ರಗೊಳ್ಳಲಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ತಿಳಿಸಿದ್ದಾರೆ.

ಇತ್ತ ಆರೋಗ್ಯ ಇಲಾಖೆ ಕ್ರಮಕ್ಕೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ತಾಲ್ಲೂಕು ಘಟಕ ಸಹ ಬೆಂಬಲ ವ್ಯಕ್ತಪಡಿಸಿದೆ. ದಾಳಿಯಲ್ಲಿ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಂಜೀವ ಗಲಗಲಿ, ಡಾ. ಭರತ ಡಿ.ಟಿ., ಪೊಲೀಸ್‌ ಸಿಬ್ಬಂದಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

ಇದೀಗ ಈ ಕ್ರಮದ ಬೆನ್ನಲ್ಲೇ, ಇನ್ನೂ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್‌ಗಳನ್ನು ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಮುಂದಾಗಿದೆ. ಪರವಾನಗಿ ಇಲ್ಲದೆ ಕ್ಲಿನಿಕ್‌ಗಳ ನಿರ್ವಹಣೆಯ ವಿರುದ್ಧ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

11 seconds ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

3 minutes ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

32 minutes ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

55 minutes ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

1 hour ago

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

5 hours ago