Latest

ಗ್ರಾಮೀಣ ಭಾಗದ ಅನಧಿಕೃತ ಕ್ಲಿನಿಕ್‌ಗಳ ಮೇಲೆ ದಾಳಿ: ಎಂಟು ಕ್ಲಿನಿಕ್ ಗಳು ಲಾಕ್‌!

ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಎಂಟು ಕ್ಲಿನಿಕ್‌ಗಳ ಮೇಲೆ ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ಕೆ.ಪಿ.ಎಂ.ಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯಿದೆ) ಪ್ರಾಧಿಕಾರ ತಂಡದ ಅಧಿಕಾರಿಗಳು ದಾಳಿ ನಡೆಸಿ, ಕ್ಲಿನಿಕ್‌ಗಳನ್ನು ಬಂದ್‌ ಮಾಡುವ ಮೂಲಕ ನೋಟಿಸ್‌ ಜಾರಿ ಮಾಡಿದ್ದಾರೆ.

ಗುರುವಾರ ನಡೆದ ಈ ಕಾರ್ಯಾಚರಣೆಯಲ್ಲಿ ಮಳಗಿಯ ಚನ್ನಬಸವೇಶ್ವರ ಮೆಡಿಕಲ್ಸ್‌, ರೇಣುಕಾ ಮೆಡಿಕಲ್ಸ್‌, ಕೋಡಂಬಿಯ ಅಹ್ಮದಸಾಬ್‌ ಎಂಬುವರ ಕ್ಲಿನಿಕ್‌, ಪಾಳಾ ಗ್ರಾಮದ ಗುರು ಕ್ಲಿನಿಕ್‌, ಕಾತೂರ ಗ್ರಾಮದ ಧನ್ವಂತರಿ ಕ್ಲಿನಿಕ್‌, ಗಣೇಶಪುರದ ಗೋಪಾಲ ಎಂಬುವರ ಕ್ಲಿನಿಕ್‌, ಕಾವಲಕೊಪ್ಪ ಗ್ರಾಮದ ಧನ್ವಂತರಿ ಕ್ಲಿನಿಕ್‌ ಹಾಗೂ ಇನ್ನೊಂದು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಕ್ಲಿನಿಕ್‌ ಪರಿಶೀಲನೆಯ ಅಡಿಯಾಯಿತು.

ಅನಧಿಕೃತವಾಗಿ ಕಾರ್ಯನಿರ್ವಹಣೆ ಕಂಡು ಬಂದ ಹಿನ್ನೆಲೆ, ಎಲ್ಲ ಕ್ಲಿನಿಕ್‌ಗಳನ್ನು ತಕ್ಷಣವೇ ಮುಚ್ಚುವಂತೆ ಸೂಚನೆ ನೀಡಲಾಗಿದೆ. ‘ಹಿಂದಿನ ದಿನಗಳಲ್ಲಿ ಪಟ್ಟಣದಲ್ಲಿಯೂ ಇಂತಹ ದಾಳಿ ನಡೆಸಿ ಹಲವು ಅಕ್ರಮ ಕ್ಲಿನಿಕ್‌ಗಳನ್ನು ಬಂದ್‌ ಮಾಡಲಾಗಿತ್ತು. ಈಗ ಗ್ರಾಮೀಣ ಭಾಗದ ದಾಳಿ ಇನ್ನಷ್ಟು ತೀವ್ರಗೊಳ್ಳಲಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ತಿಳಿಸಿದ್ದಾರೆ.

ಇತ್ತ ಆರೋಗ್ಯ ಇಲಾಖೆ ಕ್ರಮಕ್ಕೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ತಾಲ್ಲೂಕು ಘಟಕ ಸಹ ಬೆಂಬಲ ವ್ಯಕ್ತಪಡಿಸಿದೆ. ದಾಳಿಯಲ್ಲಿ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಂಜೀವ ಗಲಗಲಿ, ಡಾ. ಭರತ ಡಿ.ಟಿ., ಪೊಲೀಸ್‌ ಸಿಬ್ಬಂದಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

ಇದೀಗ ಈ ಕ್ರಮದ ಬೆನ್ನಲ್ಲೇ, ಇನ್ನೂ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್‌ಗಳನ್ನು ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಮುಂದಾಗಿದೆ. ಪರವಾನಗಿ ಇಲ್ಲದೆ ಕ್ಲಿನಿಕ್‌ಗಳ ನಿರ್ವಹಣೆಯ ವಿರುದ್ಧ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

7 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

7 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

7 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

7 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago