Latest

ಎರಡು ಪ್ರತ್ಯೇಕ ಜೂಜು ಅಡ್ಡೆಗಳ ಮೇಲೆ ದಾಳಿ; ಬೆಟ್ಟಿಂಗ್ ಹಣ ಸಮೇತ 14 ಜನರ ಬಂಧನ.

ಶ್ರೀನಿವಾಸಪುರ: ಕೋಲಾರ (ಜಿ) ಶ್ರೀನಿವಾಸಪುರ ಪೊಲೀಸರಿಂದ ಎರಡು ಪ್ರತ್ಯೇಕ ಜೂಜಾಟದ ಅಡ್ಡೆಗಳ ಮೇಲೆ ದಾಳಿ, ಹಣಕ್ಕಾಗಿ ಜೂಜಾಟ ನಡೆಸುತ್ತಿದ್ದ 14 ಜನರ ಬಂಧನ.

ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ನಿಖಿಲ್ ಬಿ. ಐ.ಪಿ.ಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ರವಿಶಂಕರ್ ಮತ್ತು ಜಗದೀಶ್ ರವರ ಮಾರ್ಗದರ್ಶನದಲ್ಲಿ ಮುಳಬಾಗಿಲು ಉಪವಿಭಾಗದ ಪೋಲಿಸ್ ಉಪಾಧೀಕ್ಷಕರಾದ ನಂದಕುಮಾರ್ ಮುಂದಾಳತ್ವದಲ್ಲಿ ಮೆಹಬೂಬ್ ಬಾಷಾ ಗೊರವನಕೊಳ್ಳ ಪಿ.ಐ ಶ್ರೀನಿವಾಸಪುರ ಪೊಲೀಸ್ ಠಾಣೆ ರವರಿಗೆ ಭಾತ್ಮಿದಾರರಿಂದ ಎರಡು ಪ್ರತ್ಯೇಕ ಸ್ಥಳದಲ್ಲಿ ಬೆಟ್ಟಿಂಗ್,ಇಸ್ಪೀಟು ಜೂಜಾಟ ಧಂದೆ ನಡೆಯುತ್ತಿರುವ ಶ್ರೀನಿವಾಸಪುರ ತಾಲ್ಲೂಕು ಬಾಗಲಹಳ್ಳಿ ಕೆರೆಯ ಅಂಗಳದಲ್ಲಿ ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಸ್ಥಳಕ್ಕೆ ಹೋಗಿ ನೋಡಲಾಗಿ 04 ಜನರ ಗುಂಪು ಹಣವನ್ನು ಪಣಕ್ಕಿಟ್ಟು ಇಸ್ಪೀಟು ಜೂಜಾಟ ಆಡುತ್ತಿದ್ದು ಇವರನ್ನು ಬಂಧಿಸಿ 04 ಜನರಿಂದ ಪಣಕ್ಕಿಟ್ಟಿದ್ದ 5000 /- ರೂಗಳನ್ನು ವಶಪಡಿಸಿಕೊಂಡು ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಮತ್ತೊಂದು ಕಡೆ ಕಡೆ ಶ್ರೀನಿವಾಸಪುರ ತಾಲ್ಲೂಕು ದಳಸನೂರು ಅರಣ್ಯದಲ್ಲಿ ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದಿದ್ದು, 10 ಜನರ ಗುಂಪು ಹಣವನ್ನು ಪಣಕ್ಕಿಟ್ಟು ಇಸ್ಪೀಟು ಜೂಜಾಟ ಆಡುತ್ತಿದ್ದು ಇವರನ್ನು ಬಂಧಿಸಿ ಅವರಿಂದ ಪಣಕ್ಕಿಟ್ಟಿದ್ದ 9000 /- ರೂಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಚರಣೆಯಲ್ಲಿ ಶ್ರೀನಿವಾಸಪುರ ಠಾಣಾ ಪಿ.ಎಸ್.ಐ ಜಯರಾಮ್. ಮತ್ತು ಸಿಬ್ಬಂದಿ ಪ್ರಕಾಶ್, ಮಂಜುನಾಥ, ರೆಡ್ಡೆಪ್ಪ, ರಮೇಶಬಾಬು, ಶಿವಾನಂದ್. ಸಂಪತಕುಮಾರ್. ಸಂತೋಷಕುಮಾರ್, ಪತ್ರಿಬಸಪ್ಪ ರವರರೊಂದಿಗೆ ಎರಡು ಕಡೆ ದಾಳಿ ನಡೆಸಿ ವೊಟ್ಟು 14 ಜನರ ಮೇಲೆ ಕಾನೂನು ಕ್ರಮ ಕೈಕೊಂಡಿದ್ದಾರೆ.
ಈ ಎರಡು ಪ್ರತ್ಯೇಕ ಜೂಜು ಅಡ್ಡೆಗಳ ಮೇಲೆ ದಾಳಿ ಕಾರ್ಯಚರಣೆ ಮಾಡಿರುವ ಮೇಲ್ಕಂಡ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಐ.ಪಿ.ಎಸ್ ಶ್ಲಾಘಿಸಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

16 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

21 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

21 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

21 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

21 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago