Latest

ರೈಲ್ವೆ ಇಲಾಖೆ ಎಡವಟ್ಟು: ದೈನಂದಿನ ಪ್ರಯಾಣಿಕರಿಂದ ಕೋಚ್ ಗಳನ್ನು ಹೆಚ್ಚಿಸಲು ಆಗ್ರಹಿಸಿ ರೈಲು ತಡೆ.

ಬಂಗಾರಪೇಟೆ: ಬೆಂಗಳೂರು – ಮಾರಿಕೊಪ್ಪಮ್ (ಕೆಜಿಎಫ್) ಬಂಗಾರಪೇಟೆ ಮಾರ್ಗವಾಗಿ ದಿನನಿತ್ಯ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕಾಗಿ ಸುಮಾರು 20 ಸಾವಿರಕ್ಕಿಂತ ಹೆಚ್ಚು ಜನ ಬೆಂಗಳೂರಿಗೆ ದೈನಂದಿನ ಪ್ರಯಾಣ ಮಾಡುತ್ತಿದ್ದು ಮಾರಿಕುಪ್ಪಂ – ಕೆ.ಎಸ್.ಆರ್ ಮೆಮೊ ರೈಲು ಸಂಖ್ಯೆ 66512 ಬೆಳಿಗ್ಗೆ 8:30 ನಿಮಿಷಕ್ಕೆ ಸಂಚರಿಸುವ ಮೆಮೊ ರೈಲು ಈ ಹಿಂದೆ ಒಟ್ಟು 16 ಕೋಚ್‌ಗಳನ್ನು ಹೊಂದಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಕೋಚ್ ಗಳ ಸಂಖ್ಯೆಯನ್ನು 16 ರರಿಂದ 12ಕ್ಕೆ ಇಳಿಸಲಾಗಿತ್ತು, ಇದರಿಂದ ದಿನನಿತ್ಯ ಪ್ರಯಾಣಿಕರಿಗೆ ಭಾರಿ ತೊಂದರೆ ಅನುಭವಿಸುತ್ತಿದ್ದರು. ಇದೀಗ ಕಳೆದ ಎರಡು ದಿನಗಳ ಹಿಂದೆ ದಿಡೀರನೆ ರೈಲ್ವೆ ಇಲಾಖೆ ಮತ್ತೊಮ್ಮೆ ಕೋಚ್‌ಗಳ ಸಂಖ್ಯೆಯನ್ನು ಕೇವಲ 8 ಕ್ಕೆ ಇಳಿಸಿದೆ, ಇದರಿಂದ ಪ್ರಯಾಣಿಕರಿಗೆ ಪ್ರಯಾಣ ಇನ್ನಷ್ಟು ಕಷ್ಟವಾಗಿದ್ದು ರೈಲಿನಲ್ಲಿ ನಿಂತುಕೊಳ್ಳಲು ಜಾಗವಿಲ್ಲದೆ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುವ ಪರಿಸ್ಥಿತಿ ಉಂಟಾಗಿದ್ದು, ದೈನಂದಿನ ಪ್ರಯಾಣಿಕರು ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಪ್ರಯಾಣ ಮಾಡುವ ಪರಿಸ್ಥಿತಿ ಉಂಟಾಗಿದೆ.

ರೈಲ್ವೆ ಇಲಾಖೆಯ ಈ ಅವೈಜ್ಞಾನಿಕ ನಿರ್ಧಾರದಿಂದ ಹತಾಶೆಗೊಂಡಿರುವ ಎಲ್ಲಾ ದೈನಂದಿನ ಪ್ರಯಾಣಿಕರು, ರೈಲ್ವೆ ಆಡಳಿತದ ನಿರ್ಲಕ್ಷತನದ ವಿರುದ್ಧ ಇಂದು ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಮತ್ತೊಮ್ಮೆ ಹದಿನಾರು ಕೋಚ್ಗಳ ಬೋಗಿಗಳನ್ನು ಒದಗಿಸಬೇಕೆಂದು ಆಗ್ರಹಿಸಿ ದೈನಂದಿನ ಪ್ರಾಣಿಕರು ಬಂಗಾರಪೇಟೆ ರೈಲು ನಿಲ್ದಾಣದಲ್ಲಿ, ಮಾರಿಕುಪ್ಪಂ – ಕೆ.ಎಸ್.ಆರ್ ಮೆಮೊ ರೈಲು ಸಂಖ್ಯೆ 66512 ರೈಲುನ್ನು ತಡೆದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವರ ವಿ. ಸೋಮಣ್ಣ ಹಾಗು ಡಿ. ಆರ್. ಎಂ ಬೆಂಗಳೂರು ರೈಲ್ವೆ ಇಲಾಖೆ ಆಧಿಕಾರಿ
ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಪ್ರತಿಭಟನಾಕಾರರನ್ನು ಮನವೊಲಿಸಲು ರೈಲ್ವೆ ಅಧಿಕಾರಿಗಳಿಂದ ಮತ್ತು ರೈಲ್ವೆ ಪೊಲೀಸರಿಂದ ಭಾರಿ ಹರಸಾಹಸ ಪಡಬೇಕಾಯಿತು.

ಯಾವುದೇ ಪ್ರಾಣ ಹಾನಿ ಸಂಭವಿಸುವ ಮುನ್ನ ರೈಲ್ವೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಹೆಚ್ಚು ಕೋಚ್ ಗಳನ್ನು ಅಳವಡಿಸುವ ಮೂಲಕ ಮುಂದೆ ಆಗುವ ಅನಾಹುತವನ್ನು ತಡೆಯಬೇಕೆಂದು ಪ್ರತಿಭಟನಾಕಾರರು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ . ವರದಿ: ರೋಶನ್ ಜಮೀರ್

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

7 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

7 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

7 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago