ಬಂಗಾರಪೇಟೆ: ಬೆಂಗಳೂರು – ಮಾರಿಕೊಪ್ಪಮ್ (ಕೆಜಿಎಫ್) ಬಂಗಾರಪೇಟೆ ಮಾರ್ಗವಾಗಿ ದಿನನಿತ್ಯ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕಾಗಿ ಸುಮಾರು 20 ಸಾವಿರಕ್ಕಿಂತ ಹೆಚ್ಚು ಜನ ಬೆಂಗಳೂರಿಗೆ ದೈನಂದಿನ ಪ್ರಯಾಣ ಮಾಡುತ್ತಿದ್ದು ಮಾರಿಕುಪ್ಪಂ – ಕೆ.ಎಸ್.ಆರ್ ಮೆಮೊ ರೈಲು ಸಂಖ್ಯೆ 66512 ಬೆಳಿಗ್ಗೆ 8:30 ನಿಮಿಷಕ್ಕೆ ಸಂಚರಿಸುವ ಮೆಮೊ ರೈಲು ಈ ಹಿಂದೆ ಒಟ್ಟು 16 ಕೋಚ್ಗಳನ್ನು ಹೊಂದಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಕೋಚ್ ಗಳ ಸಂಖ್ಯೆಯನ್ನು 16 ರರಿಂದ 12ಕ್ಕೆ ಇಳಿಸಲಾಗಿತ್ತು, ಇದರಿಂದ ದಿನನಿತ್ಯ ಪ್ರಯಾಣಿಕರಿಗೆ ಭಾರಿ ತೊಂದರೆ ಅನುಭವಿಸುತ್ತಿದ್ದರು. ಇದೀಗ ಕಳೆದ ಎರಡು ದಿನಗಳ ಹಿಂದೆ ದಿಡೀರನೆ ರೈಲ್ವೆ ಇಲಾಖೆ ಮತ್ತೊಮ್ಮೆ ಕೋಚ್ಗಳ ಸಂಖ್ಯೆಯನ್ನು ಕೇವಲ 8 ಕ್ಕೆ ಇಳಿಸಿದೆ, ಇದರಿಂದ ಪ್ರಯಾಣಿಕರಿಗೆ ಪ್ರಯಾಣ ಇನ್ನಷ್ಟು ಕಷ್ಟವಾಗಿದ್ದು ರೈಲಿನಲ್ಲಿ ನಿಂತುಕೊಳ್ಳಲು ಜಾಗವಿಲ್ಲದೆ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುವ ಪರಿಸ್ಥಿತಿ ಉಂಟಾಗಿದ್ದು, ದೈನಂದಿನ ಪ್ರಯಾಣಿಕರು ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಪ್ರಯಾಣ ಮಾಡುವ ಪರಿಸ್ಥಿತಿ ಉಂಟಾಗಿದೆ.
ರೈಲ್ವೆ ಇಲಾಖೆಯ ಈ ಅವೈಜ್ಞಾನಿಕ ನಿರ್ಧಾರದಿಂದ ಹತಾಶೆಗೊಂಡಿರುವ ಎಲ್ಲಾ ದೈನಂದಿನ ಪ್ರಯಾಣಿಕರು, ರೈಲ್ವೆ ಆಡಳಿತದ ನಿರ್ಲಕ್ಷತನದ ವಿರುದ್ಧ ಇಂದು ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಮತ್ತೊಮ್ಮೆ ಹದಿನಾರು ಕೋಚ್ಗಳ ಬೋಗಿಗಳನ್ನು ಒದಗಿಸಬೇಕೆಂದು ಆಗ್ರಹಿಸಿ ದೈನಂದಿನ ಪ್ರಾಣಿಕರು ಬಂಗಾರಪೇಟೆ ರೈಲು ನಿಲ್ದಾಣದಲ್ಲಿ, ಮಾರಿಕುಪ್ಪಂ – ಕೆ.ಎಸ್.ಆರ್ ಮೆಮೊ ರೈಲು ಸಂಖ್ಯೆ 66512 ರೈಲುನ್ನು ತಡೆದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವರ ವಿ. ಸೋಮಣ್ಣ ಹಾಗು ಡಿ. ಆರ್. ಎಂ ಬೆಂಗಳೂರು ರೈಲ್ವೆ ಇಲಾಖೆ ಆಧಿಕಾರಿ
ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಪ್ರತಿಭಟನಾಕಾರರನ್ನು ಮನವೊಲಿಸಲು ರೈಲ್ವೆ ಅಧಿಕಾರಿಗಳಿಂದ ಮತ್ತು ರೈಲ್ವೆ ಪೊಲೀಸರಿಂದ ಭಾರಿ ಹರಸಾಹಸ ಪಡಬೇಕಾಯಿತು.
ಯಾವುದೇ ಪ್ರಾಣ ಹಾನಿ ಸಂಭವಿಸುವ ಮುನ್ನ ರೈಲ್ವೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಹೆಚ್ಚು ಕೋಚ್ ಗಳನ್ನು ಅಳವಡಿಸುವ ಮೂಲಕ ಮುಂದೆ ಆಗುವ ಅನಾಹುತವನ್ನು ತಡೆಯಬೇಕೆಂದು ಪ್ರತಿಭಟನಾಕಾರರು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ . ವರದಿ: ರೋಶನ್ ಜಮೀರ್
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…
ಇಂಟರ್ನೆಟ್ ಕ್ರಾಂತಿಯ ನಂತರ ಸ್ಮಾರ್ಟ್ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್ಗಳಾಗಿ ಪರಿಣಮಿಸಿದ್ದಾರೆ. ಈ…
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…
ನವದೆಹಲಿ: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದು ಎಂದರೆ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಅರ್ಥೈಸಿಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ…