Latest

ರೈಲ್ವೆ ಇಲಾಖೆ ಎಡವಟ್ಟು: ದೈನಂದಿನ ಪ್ರಯಾಣಿಕರಿಂದ ಕೋಚ್ ಗಳನ್ನು ಹೆಚ್ಚಿಸಲು ಆಗ್ರಹಿಸಿ ರೈಲು ತಡೆ.

ಬಂಗಾರಪೇಟೆ: ಬೆಂಗಳೂರು – ಮಾರಿಕೊಪ್ಪಮ್ (ಕೆಜಿಎಫ್) ಬಂಗಾರಪೇಟೆ ಮಾರ್ಗವಾಗಿ ದಿನನಿತ್ಯ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕಾಗಿ ಸುಮಾರು 20 ಸಾವಿರಕ್ಕಿಂತ ಹೆಚ್ಚು ಜನ ಬೆಂಗಳೂರಿಗೆ ದೈನಂದಿನ ಪ್ರಯಾಣ ಮಾಡುತ್ತಿದ್ದು ಮಾರಿಕುಪ್ಪಂ – ಕೆ.ಎಸ್.ಆರ್ ಮೆಮೊ ರೈಲು ಸಂಖ್ಯೆ 66512 ಬೆಳಿಗ್ಗೆ 8:30 ನಿಮಿಷಕ್ಕೆ ಸಂಚರಿಸುವ ಮೆಮೊ ರೈಲು ಈ ಹಿಂದೆ ಒಟ್ಟು 16 ಕೋಚ್‌ಗಳನ್ನು ಹೊಂದಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಕೋಚ್ ಗಳ ಸಂಖ್ಯೆಯನ್ನು 16 ರರಿಂದ 12ಕ್ಕೆ ಇಳಿಸಲಾಗಿತ್ತು, ಇದರಿಂದ ದಿನನಿತ್ಯ ಪ್ರಯಾಣಿಕರಿಗೆ ಭಾರಿ ತೊಂದರೆ ಅನುಭವಿಸುತ್ತಿದ್ದರು. ಇದೀಗ ಕಳೆದ ಎರಡು ದಿನಗಳ ಹಿಂದೆ ದಿಡೀರನೆ ರೈಲ್ವೆ ಇಲಾಖೆ ಮತ್ತೊಮ್ಮೆ ಕೋಚ್‌ಗಳ ಸಂಖ್ಯೆಯನ್ನು ಕೇವಲ 8 ಕ್ಕೆ ಇಳಿಸಿದೆ, ಇದರಿಂದ ಪ್ರಯಾಣಿಕರಿಗೆ ಪ್ರಯಾಣ ಇನ್ನಷ್ಟು ಕಷ್ಟವಾಗಿದ್ದು ರೈಲಿನಲ್ಲಿ ನಿಂತುಕೊಳ್ಳಲು ಜಾಗವಿಲ್ಲದೆ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುವ ಪರಿಸ್ಥಿತಿ ಉಂಟಾಗಿದ್ದು, ದೈನಂದಿನ ಪ್ರಯಾಣಿಕರು ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಪ್ರಯಾಣ ಮಾಡುವ ಪರಿಸ್ಥಿತಿ ಉಂಟಾಗಿದೆ.

ರೈಲ್ವೆ ಇಲಾಖೆಯ ಈ ಅವೈಜ್ಞಾನಿಕ ನಿರ್ಧಾರದಿಂದ ಹತಾಶೆಗೊಂಡಿರುವ ಎಲ್ಲಾ ದೈನಂದಿನ ಪ್ರಯಾಣಿಕರು, ರೈಲ್ವೆ ಆಡಳಿತದ ನಿರ್ಲಕ್ಷತನದ ವಿರುದ್ಧ ಇಂದು ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಮತ್ತೊಮ್ಮೆ ಹದಿನಾರು ಕೋಚ್ಗಳ ಬೋಗಿಗಳನ್ನು ಒದಗಿಸಬೇಕೆಂದು ಆಗ್ರಹಿಸಿ ದೈನಂದಿನ ಪ್ರಾಣಿಕರು ಬಂಗಾರಪೇಟೆ ರೈಲು ನಿಲ್ದಾಣದಲ್ಲಿ, ಮಾರಿಕುಪ್ಪಂ – ಕೆ.ಎಸ್.ಆರ್ ಮೆಮೊ ರೈಲು ಸಂಖ್ಯೆ 66512 ರೈಲುನ್ನು ತಡೆದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವರ ವಿ. ಸೋಮಣ್ಣ ಹಾಗು ಡಿ. ಆರ್. ಎಂ ಬೆಂಗಳೂರು ರೈಲ್ವೆ ಇಲಾಖೆ ಆಧಿಕಾರಿ
ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಪ್ರತಿಭಟನಾಕಾರರನ್ನು ಮನವೊಲಿಸಲು ರೈಲ್ವೆ ಅಧಿಕಾರಿಗಳಿಂದ ಮತ್ತು ರೈಲ್ವೆ ಪೊಲೀಸರಿಂದ ಭಾರಿ ಹರಸಾಹಸ ಪಡಬೇಕಾಯಿತು.

ಯಾವುದೇ ಪ್ರಾಣ ಹಾನಿ ಸಂಭವಿಸುವ ಮುನ್ನ ರೈಲ್ವೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಹೆಚ್ಚು ಕೋಚ್ ಗಳನ್ನು ಅಳವಡಿಸುವ ಮೂಲಕ ಮುಂದೆ ಆಗುವ ಅನಾಹುತವನ್ನು ತಡೆಯಬೇಕೆಂದು ಪ್ರತಿಭಟನಾಕಾರರು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ . ವರದಿ: ರೋಶನ್ ಜಮೀರ್

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

16 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

20 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

20 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

20 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

20 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago