ಬಂಗಾರಪೇಟೆ: ಬೆಂಗಳೂರು – ಮಾರಿಕೊಪ್ಪಮ್ (ಕೆಜಿಎಫ್) ಬಂಗಾರಪೇಟೆ ಮಾರ್ಗವಾಗಿ ದಿನನಿತ್ಯ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕಾಗಿ ಸುಮಾರು 20 ಸಾವಿರಕ್ಕಿಂತ ಹೆಚ್ಚು ಜನ ಬೆಂಗಳೂರಿಗೆ ದೈನಂದಿನ ಪ್ರಯಾಣ ಮಾಡುತ್ತಿದ್ದು ಮಾರಿಕುಪ್ಪಂ – ಕೆ.ಎಸ್.ಆರ್ ಮೆಮೊ ರೈಲು ಸಂಖ್ಯೆ 66512 ಬೆಳಿಗ್ಗೆ 8:30 ನಿಮಿಷಕ್ಕೆ ಸಂಚರಿಸುವ ಮೆಮೊ ರೈಲು ಈ ಹಿಂದೆ ಒಟ್ಟು 16 ಕೋಚ್ಗಳನ್ನು ಹೊಂದಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಕೋಚ್ ಗಳ ಸಂಖ್ಯೆಯನ್ನು 16 ರರಿಂದ 12ಕ್ಕೆ ಇಳಿಸಲಾಗಿತ್ತು, ಇದರಿಂದ ದಿನನಿತ್ಯ ಪ್ರಯಾಣಿಕರಿಗೆ ಭಾರಿ ತೊಂದರೆ ಅನುಭವಿಸುತ್ತಿದ್ದರು. ಇದೀಗ ಕಳೆದ ಎರಡು ದಿನಗಳ ಹಿಂದೆ ದಿಡೀರನೆ ರೈಲ್ವೆ ಇಲಾಖೆ ಮತ್ತೊಮ್ಮೆ ಕೋಚ್ಗಳ ಸಂಖ್ಯೆಯನ್ನು ಕೇವಲ 8 ಕ್ಕೆ ಇಳಿಸಿದೆ, ಇದರಿಂದ ಪ್ರಯಾಣಿಕರಿಗೆ ಪ್ರಯಾಣ ಇನ್ನಷ್ಟು ಕಷ್ಟವಾಗಿದ್ದು ರೈಲಿನಲ್ಲಿ ನಿಂತುಕೊಳ್ಳಲು ಜಾಗವಿಲ್ಲದೆ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುವ ಪರಿಸ್ಥಿತಿ ಉಂಟಾಗಿದ್ದು, ದೈನಂದಿನ ಪ್ರಯಾಣಿಕರು ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಪ್ರಯಾಣ ಮಾಡುವ ಪರಿಸ್ಥಿತಿ ಉಂಟಾಗಿದೆ.
ರೈಲ್ವೆ ಇಲಾಖೆಯ ಈ ಅವೈಜ್ಞಾನಿಕ ನಿರ್ಧಾರದಿಂದ ಹತಾಶೆಗೊಂಡಿರುವ ಎಲ್ಲಾ ದೈನಂದಿನ ಪ್ರಯಾಣಿಕರು, ರೈಲ್ವೆ ಆಡಳಿತದ ನಿರ್ಲಕ್ಷತನದ ವಿರುದ್ಧ ಇಂದು ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಮತ್ತೊಮ್ಮೆ ಹದಿನಾರು ಕೋಚ್ಗಳ ಬೋಗಿಗಳನ್ನು ಒದಗಿಸಬೇಕೆಂದು ಆಗ್ರಹಿಸಿ ದೈನಂದಿನ ಪ್ರಾಣಿಕರು ಬಂಗಾರಪೇಟೆ ರೈಲು ನಿಲ್ದಾಣದಲ್ಲಿ, ಮಾರಿಕುಪ್ಪಂ – ಕೆ.ಎಸ್.ಆರ್ ಮೆಮೊ ರೈಲು ಸಂಖ್ಯೆ 66512 ರೈಲುನ್ನು ತಡೆದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವರ ವಿ. ಸೋಮಣ್ಣ ಹಾಗು ಡಿ. ಆರ್. ಎಂ ಬೆಂಗಳೂರು ರೈಲ್ವೆ ಇಲಾಖೆ ಆಧಿಕಾರಿ
ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಪ್ರತಿಭಟನಾಕಾರರನ್ನು ಮನವೊಲಿಸಲು ರೈಲ್ವೆ ಅಧಿಕಾರಿಗಳಿಂದ ಮತ್ತು ರೈಲ್ವೆ ಪೊಲೀಸರಿಂದ ಭಾರಿ ಹರಸಾಹಸ ಪಡಬೇಕಾಯಿತು.
ಯಾವುದೇ ಪ್ರಾಣ ಹಾನಿ ಸಂಭವಿಸುವ ಮುನ್ನ ರೈಲ್ವೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಹೆಚ್ಚು ಕೋಚ್ ಗಳನ್ನು ಅಳವಡಿಸುವ ಮೂಲಕ ಮುಂದೆ ಆಗುವ ಅನಾಹುತವನ್ನು ತಡೆಯಬೇಕೆಂದು ಪ್ರತಿಭಟನಾಕಾರರು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ . ವರದಿ: ರೋಶನ್ ಜಮೀರ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…