ಉತ್ತರ ಕನ್ನಡ/ ರಾಮನಗರ: ಸರಾಯಿ ಕೊಡಿಸದ ಕಾರಣ ಸ್ನೇಹಿತ ಬೈಕ್ ಜೊತೆ ಪರಾರಿಯಾಗಿದ್ದ ಜೊಯಿಡಾದ ಪ್ರವೀಣ ಸುಧೀರ್’ರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಬಂಧನದ ವೇಳೆಯೂ ಪ್ರವೀಣ ಸುಧೀರ್ ಸಾಕಷ್ಟು ರಂಪಾಟ ನಡೆಸಿದ್ದು, ಬಂಧನಕ್ಕೆ ತೆರಳಿದವರಿಗೆ ಬೆದರಿಕೆ ಒಡ್ಡಿದ ಬಗ್ಗೆಯೂ ಪ್ರಕರಣ ದಾಖಲಾಗಿದೆ.
ರಾಮನಗರದ ಪ್ರವೀಣ ಸುಧೀರ್ ಅವರು ಮಾರ್ಚ 9ರ ರಾತ್ರಿ ಶುಭಂ ಉತ್ತರೆ ಎಂಬಾತರ ಬಳಿ `ಸರಾಯಿ ಕುಡಿಸು’ ಎಂದು ಕಾಡಿಸಿದ್ದರು. ಸರಾಯಿ ಕೊಡಿಸದ ಕಾರಣ ಶುಭಂ ಅವರ ಮನೆಗೆ ನುಗ್ಗಿ ಕೂಗಾಡಿದ್ದರು. ಶುಭಂ ಅವರ ತಾಯಿ ಬಳಿ `ನಿನ್ನ ಮಗನಿಗಾಗಿ ನಾನು ಸಾಕಷ್ಟು ದುಡ್ಡು ಖರ್ಚು ಮಾಡಿದ್ದೇನೆ’ ಎಂದಿದ್ದರು. ಇದಕ್ಕೆ ವಿರೋಧವ್ಯಕ್ತಪಡಿಸಿದ ಶುಭಂ ಅವರ ಕೆನ್ನೆಗೆ ಬಾರಿಸಿದ್ದರು. ಹೊಡೆದಾಟ ತಡೆಯಲು ಆಗಮಿಸಿದ ಶುಭಂ ಅವರ ಸಹೋದರಿ ಸಾಕ್ಷಿ ಅವರ ಮೈ ಮುಟ್ಟಿ ಅನುಚಿತವಾಗಿ ವರ್ತಿಸಿದ್ದರು. ಕೊನೆಗೆ ಮನೆ ಅಂಗಳದಲ್ಲಿದ್ದ ಬೈಕನ್ನು ಅಪಹರಿಸಿಕೊಂಡು ಹೋಗಿದ್ದರು.ಹೋಗವ ಮುನ್ನ `ನನ್ನ ವಿರುದ್ಧ ಸಾಕಷ್ಟು ದೂರುಗಳಿವೆ. ಪೊಲೀಸರಿಂದ ಸಹ ಏನೂ ಮಾಡಲಾಗುವುದಿಲ್ಲ’ ಎಂದು ಹೇಳಿ ಬೆದರಿಸಿದ್ದರು. ಶುಭಂ ಪತ್ತಾರ್ ಅವರು ರಾಮನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ ತನಿಖೆ ನಡೆಸಿದ ಪೊಲೀಸರು ಪ್ರವೀಣ ಸುಧೀರ್ ವಿಚಾರಣೆಗೆ ತೆರಳಿದ್ದರು. ಜೊಯಿಡಾ ರಾಮಲಿಂಗಗಲ್ಲಿಯಲ್ಲಿದ್ದ ಪ್ರವೀಣ ಸುಧೀರ್ ನೋಟಿಸ್ಸು ಸ್ವೀಕರಿಸಲು ಸಹ ಬಾಗಿಲು ತೆರೆದಿರಲಿಲ್ಲ. ಅಲ್ಲಿನ ಬೀಟ್ ಸಿಬ್ಬಂದಿ ರಾಜು ಚಲವಾದಿ ಅವರನ್ನು ಆ ವೇಳೆ ಪ್ರವೀಣ ಸುಧೀರ್ ನಿಂದಿಸಿದ್ದರು.
ಅದಾದ ನಂತರ ಮಾರ್ಚ 31ರಂದು ಪೊಲೀಸ್ ಸಿಬ್ಬಂದಿ ಸಿಬ್ಬಂದಿ ರಾಜು ಚಲವಾದಿ, ಸದಾಶಿವ ಮಠಪತಿ ಅವರ ಜೊತೆ ಪಿಎಸ್ಐ ಬಸವರಾಜ ಮಬನೂರು ಸಹ ಪ್ರವೀಣ ಅವರ ಬಂಧನಕ್ಕೆ ತೆರಳಿದ್ದರು. ಆಗಲೂ, ಪ್ರವೀಣ ಸುಧೀರ್ ಮನೆ ಬಾಗಿಲು ತೆರೆಯದೇ ಪ್ರತಿರೋಧವ್ಯಕ್ತಪಡಿಸಿದರು.
ಅದಾಗಿಯೂ, ಪೊಲೀಸರು ಪ್ರವೀಣ ಸುಧೀರರನ್ನು ವಶಕ್ಕೆ ಪಡೆದರು. ರಾಮಲಿಂಗೇಶ್ವರ ದೇವಸ್ಥಾನ ಎದುರು ನಡೆದುಬರುವಾಗ `ನಮ್ಮ ಏರಿಯಾ ಬೀಟಿಗೆ ಈ ಹೊಲೆಯರನ್ನು ನೇಮಿಸಿದ್ದಾರೆ. ನನ್ನನ್ನು ಮುಟ್ಟಬೇಡ’ ಎಂದು ಪ್ರವೀಣ ಸುಧೀರ್ ಕೂಗಾಡಿದರು. ರಾಜು ಚಲವಾದಿ ಅವರ ಜಾತಿಯನ್ನು ಹಿಯಾಳಿಸಿದರು. ರಾಜು ಚಲವಾದಿ ಅವರು ಕೈ ಹಿಡಿಯಲು ಯತ್ನಿಸಿದಾಗ ಬಲಗೈ ತಿರುಚಿದರು. ಸದಾಶಿವ ಮಠಪತಿ ಅವರ ಎದೆಗೆ ತಿವಿದು ನೋವುಂಟು ಮಾಡಿದರು
ಪೊಲೀಸ್ ಠಾಣೆಗೆ ಬಂದ ನಂತರವೂ ಅಲ್ಲಿ ಪ್ರವೀಣ ಸುಧೀರ್ ಕೂಗಾಡಿದರು. ರಾಮನಗರದಲ್ಲಿ ಹೇಗೆ ಡ್ಯೂಟಿ ಮಾಡುತ್ತೀರಿ? ನೋಡುತ್ತೇನೆ’ ಎನ್ನುತ್ತ ಬೆದರಿಸಿದ್ದಾನೆ.ಎಂತಹ ಬೆದರಿಕೆಗೂ ಬಗ್ಗದ ಪೋಲಿಸರು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…