Latest

ಬೆಳಗಾವಿ ಪಿಎಸ್ಐ ವಿರುದ್ಧ ರೇಪ್ ಕೇಸ್; ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ!

ಬೆಳಗಾವಿ ನಗರ ಪೊಲೀಸ್‌ ಆಯುಕ್ತಾಲಯದ ವೈರ್‌ಲೆಸ್‌ ‍ಠಾಣೆಯ ಪಿಎಸ್‌ಐ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ, ಕಾಲೇಜು ವಿದ್ಯಾರ್ಥಿನಿಯೊಬ್ಬರು ಗುರುವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನನ್ನೇ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿರುವ ಪಿಎಸ್‌ಐ ಲಾಲ್‌ಸಾಬ್‌ ಎಂಬುವರು ಇದೇ ಫೆಬ್ರವರಿ 10ರಂದು ಬೇರೆ ಯುವತಿ ಜತೆಗೆ ಮದುವೆಯಾಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ: ಫೇಸ್​ಬುಕ್ ಮೆಸೆಂಜರ್ ಮೂಲಕ 2020ರ ಜೂನ್‌ 16ರಂದು ಪರಿಚಯ ಮಾಡಿಕೊಂಡಿದ್ದ ಪಿಎಸ್‌ಐ, ಪ್ರತಿ ದಿನ ಚಾಟ್‌ ಮಾಡುತ್ತಾ ಸ್ನೇಹ ಬೆಳೆಸಿದ್ದರು. ಬಳಿಕ ತನನ್ನು ಮದುವೆ ಆಗುವುದಾಗಿ ನಂಬಿಸಿದ್ದರು. ಕೆಲ ದಿನಗಳ ನಂತರ ಬೆಳಗಾವಿಯ ಸುಭಾಷ್​ ನಗರದ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕೋರಿದ್ದರು. ನಾನು ಒಪ್ಪದೇ ಇದ್ದಾಗ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿ ಮದುವೆ ಮಾಡಿಕೊಳ್ಳುವ ಭರವಸೆ ಸಹ ನೀಡಿದ್ದರು. ಅಲ್ಲದೇ ಮದುವೆ ಆಗುವ ಭರವಸೆ ನೀಡಿ ಬಾಂಡ್‌ ಕೂಡ ಬರೆದುಕೊಟ್ಟಿದ್ದರು. ಬಳಿಕ ಬೆಳಗಾವಿಯ ಕೆಲವು ಲಾಡ್ಜ್‌ಗಳಿಗೂ ಕರೆದುಕೊಂಡು ಹೋಗಿ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಆದರೆ, ಈಗ ಮತ್ತೊಬ್ಬಳೊಂದಗೆ ಮದುವೆ ಆಗಿ ನನಗೆ ಮೋಸ ಮಾಡಿದ್ದಾರೆ.
ನನ್ನನ್ನೇ ಮದುವೆ ಆಗುವುದಾಗಿ ಬಾಂಡ್‌ ಕೂಡ ಬರೆದುಕೊಟ್ಟಿದ್ದರಿಂದ, ಅದರ ಭರವಸೆ ಮೇಲೆ ನಾನು ಇಷ್ಟು ದಿನ ಸಹಿಸಿಕೊಂಡೆ. ಅಲ್ಲದೇ, ನನ್ನ ಹಾಗೂ ಅವರ ನಡುವಿನ ಸಂಬಂಧದ ಬಗ್ಗೆ ಪೂರ್ಣವಾಗಿ ತಿಳಿಸಿದರೂ ಬೇರೊಬ್ಬ ಯುವತಿ ಅವರನ್ನು ಮದುವೆಯಾದರು. ಈ ಮೂಲಕ ಅವರಿಂದಲೂ ನನಗೆ ಅನ್ಯಾಯವಾಗಿದೆ. ಪಿಎಸ್​ಐ ಈ ಮೂಲಕ ನನ್ನ ಘನತೆಯ ಬದುಕನ್ನು ಕಿತ್ತುಕೊಂಡಿದ್ದಾರೆ. ಇದರಿಂದ ನಮ್ಮ ಕುಟುಂಬದ ಸದಸ್ಯರ ಮಾನಸಿಕ ನೆಮ್ಮದಿ ಕೂಡ ದೂರ ಮಾಡಿದ್ದಾರೆ. ಇಷ್ಟೆಲ್ಲ ಸಂಕಷ್ಟಕ್ಕೆ ಈಡು ಮಾಡಿದ ಪಿಎಸ್​ಐ ವಿರುದ್ಧ ಕ್ರಮ ಜರುಗಿಸುವಂತೆ ವಿದ್ಯಾರ್ಥಿನಿಯು ತನ್ನ ದೂರು ಪ್ರತಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಹಾಗೂ ಮದುವೆಯಾಗಲು ಸಹಕರಿಸಿದವರ ವಿರುದವು ಸಹ ಸಂತ್ರಸ್ತೆ ದೂರನ್ನು ದಾಖಲಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago