Latest

ಬೆಳಗಾವಿ ಪಿಎಸ್ಐ ವಿರುದ್ಧ ರೇಪ್ ಕೇಸ್; ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ!

ಬೆಳಗಾವಿ ನಗರ ಪೊಲೀಸ್‌ ಆಯುಕ್ತಾಲಯದ ವೈರ್‌ಲೆಸ್‌ ‍ಠಾಣೆಯ ಪಿಎಸ್‌ಐ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ, ಕಾಲೇಜು ವಿದ್ಯಾರ್ಥಿನಿಯೊಬ್ಬರು ಗುರುವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನನ್ನೇ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿರುವ ಪಿಎಸ್‌ಐ ಲಾಲ್‌ಸಾಬ್‌ ಎಂಬುವರು ಇದೇ ಫೆಬ್ರವರಿ 10ರಂದು ಬೇರೆ ಯುವತಿ ಜತೆಗೆ ಮದುವೆಯಾಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ: ಫೇಸ್​ಬುಕ್ ಮೆಸೆಂಜರ್ ಮೂಲಕ 2020ರ ಜೂನ್‌ 16ರಂದು ಪರಿಚಯ ಮಾಡಿಕೊಂಡಿದ್ದ ಪಿಎಸ್‌ಐ, ಪ್ರತಿ ದಿನ ಚಾಟ್‌ ಮಾಡುತ್ತಾ ಸ್ನೇಹ ಬೆಳೆಸಿದ್ದರು. ಬಳಿಕ ತನನ್ನು ಮದುವೆ ಆಗುವುದಾಗಿ ನಂಬಿಸಿದ್ದರು. ಕೆಲ ದಿನಗಳ ನಂತರ ಬೆಳಗಾವಿಯ ಸುಭಾಷ್​ ನಗರದ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕೋರಿದ್ದರು. ನಾನು ಒಪ್ಪದೇ ಇದ್ದಾಗ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿ ಮದುವೆ ಮಾಡಿಕೊಳ್ಳುವ ಭರವಸೆ ಸಹ ನೀಡಿದ್ದರು. ಅಲ್ಲದೇ ಮದುವೆ ಆಗುವ ಭರವಸೆ ನೀಡಿ ಬಾಂಡ್‌ ಕೂಡ ಬರೆದುಕೊಟ್ಟಿದ್ದರು. ಬಳಿಕ ಬೆಳಗಾವಿಯ ಕೆಲವು ಲಾಡ್ಜ್‌ಗಳಿಗೂ ಕರೆದುಕೊಂಡು ಹೋಗಿ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಆದರೆ, ಈಗ ಮತ್ತೊಬ್ಬಳೊಂದಗೆ ಮದುವೆ ಆಗಿ ನನಗೆ ಮೋಸ ಮಾಡಿದ್ದಾರೆ.
ನನ್ನನ್ನೇ ಮದುವೆ ಆಗುವುದಾಗಿ ಬಾಂಡ್‌ ಕೂಡ ಬರೆದುಕೊಟ್ಟಿದ್ದರಿಂದ, ಅದರ ಭರವಸೆ ಮೇಲೆ ನಾನು ಇಷ್ಟು ದಿನ ಸಹಿಸಿಕೊಂಡೆ. ಅಲ್ಲದೇ, ನನ್ನ ಹಾಗೂ ಅವರ ನಡುವಿನ ಸಂಬಂಧದ ಬಗ್ಗೆ ಪೂರ್ಣವಾಗಿ ತಿಳಿಸಿದರೂ ಬೇರೊಬ್ಬ ಯುವತಿ ಅವರನ್ನು ಮದುವೆಯಾದರು. ಈ ಮೂಲಕ ಅವರಿಂದಲೂ ನನಗೆ ಅನ್ಯಾಯವಾಗಿದೆ. ಪಿಎಸ್​ಐ ಈ ಮೂಲಕ ನನ್ನ ಘನತೆಯ ಬದುಕನ್ನು ಕಿತ್ತುಕೊಂಡಿದ್ದಾರೆ. ಇದರಿಂದ ನಮ್ಮ ಕುಟುಂಬದ ಸದಸ್ಯರ ಮಾನಸಿಕ ನೆಮ್ಮದಿ ಕೂಡ ದೂರ ಮಾಡಿದ್ದಾರೆ. ಇಷ್ಟೆಲ್ಲ ಸಂಕಷ್ಟಕ್ಕೆ ಈಡು ಮಾಡಿದ ಪಿಎಸ್​ಐ ವಿರುದ್ಧ ಕ್ರಮ ಜರುಗಿಸುವಂತೆ ವಿದ್ಯಾರ್ಥಿನಿಯು ತನ್ನ ದೂರು ಪ್ರತಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಹಾಗೂ ಮದುವೆಯಾಗಲು ಸಹಕರಿಸಿದವರ ವಿರುದವು ಸಹ ಸಂತ್ರಸ್ತೆ ದೂರನ್ನು ದಾಖಲಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

2 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

2 hours ago

WFH ಕೇಳಿದ ಮಹಿಳೆಗೆ HR ಶಾಕ್: ‘ಸಿಇಒ ಮನೋಭಾವ ಬೇಕು’ ಹೇಳಿ ಕರೆ ಕಟ್!

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…

2 hours ago

ನಕಲಿ ದಾಖಲೆಗಳಿಂದ 9 ಎಕರೆ ಸರ್ಕಾರಿ ಜಮೀನು ಹಗರಣ: ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…

2 hours ago

₹300 ಲಂಚಕ್ಕೆ ‘ಪರೀಕ್ಷೆ ಮಾರಾಟ’: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ, ಶಿಕ್ಷಣ ವ್ಯವಸ್ಥೆಗೆ ಕಳಂಕ

ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…

2 hours ago

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

18 hours ago