ಬೆಳಗಾವಿ ನಗರ ಪೊಲೀಸ್ ಆಯುಕ್ತಾಲಯದ ವೈರ್ಲೆಸ್ ಠಾಣೆಯ ಪಿಎಸ್ಐ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ, ಕಾಲೇಜು ವಿದ್ಯಾರ್ಥಿನಿಯೊಬ್ಬರು ಗುರುವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನನ್ನೇ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿರುವ ಪಿಎಸ್ಐ ಲಾಲ್ಸಾಬ್ ಎಂಬುವರು ಇದೇ ಫೆಬ್ರವರಿ 10ರಂದು ಬೇರೆ ಯುವತಿ ಜತೆಗೆ ಮದುವೆಯಾಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದೂರಿನಲ್ಲಿ ಏನಿದೆ: ಫೇಸ್ಬುಕ್ ಮೆಸೆಂಜರ್ ಮೂಲಕ 2020ರ ಜೂನ್ 16ರಂದು ಪರಿಚಯ ಮಾಡಿಕೊಂಡಿದ್ದ ಪಿಎಸ್ಐ, ಪ್ರತಿ ದಿನ ಚಾಟ್ ಮಾಡುತ್ತಾ ಸ್ನೇಹ ಬೆಳೆಸಿದ್ದರು. ಬಳಿಕ ತನನ್ನು ಮದುವೆ ಆಗುವುದಾಗಿ ನಂಬಿಸಿದ್ದರು. ಕೆಲ ದಿನಗಳ ನಂತರ ಬೆಳಗಾವಿಯ ಸುಭಾಷ್ ನಗರದ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕೋರಿದ್ದರು. ನಾನು ಒಪ್ಪದೇ ಇದ್ದಾಗ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿ ಮದುವೆ ಮಾಡಿಕೊಳ್ಳುವ ಭರವಸೆ ಸಹ ನೀಡಿದ್ದರು. ಅಲ್ಲದೇ ಮದುವೆ ಆಗುವ ಭರವಸೆ ನೀಡಿ ಬಾಂಡ್ ಕೂಡ ಬರೆದುಕೊಟ್ಟಿದ್ದರು. ಬಳಿಕ ಬೆಳಗಾವಿಯ ಕೆಲವು ಲಾಡ್ಜ್ಗಳಿಗೂ ಕರೆದುಕೊಂಡು ಹೋಗಿ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಆದರೆ, ಈಗ ಮತ್ತೊಬ್ಬಳೊಂದಗೆ ಮದುವೆ ಆಗಿ ನನಗೆ ಮೋಸ ಮಾಡಿದ್ದಾರೆ.
ನನ್ನನ್ನೇ ಮದುವೆ ಆಗುವುದಾಗಿ ಬಾಂಡ್ ಕೂಡ ಬರೆದುಕೊಟ್ಟಿದ್ದರಿಂದ, ಅದರ ಭರವಸೆ ಮೇಲೆ ನಾನು ಇಷ್ಟು ದಿನ ಸಹಿಸಿಕೊಂಡೆ. ಅಲ್ಲದೇ, ನನ್ನ ಹಾಗೂ ಅವರ ನಡುವಿನ ಸಂಬಂಧದ ಬಗ್ಗೆ ಪೂರ್ಣವಾಗಿ ತಿಳಿಸಿದರೂ ಬೇರೊಬ್ಬ ಯುವತಿ ಅವರನ್ನು ಮದುವೆಯಾದರು. ಈ ಮೂಲಕ ಅವರಿಂದಲೂ ನನಗೆ ಅನ್ಯಾಯವಾಗಿದೆ. ಪಿಎಸ್ಐ ಈ ಮೂಲಕ ನನ್ನ ಘನತೆಯ ಬದುಕನ್ನು ಕಿತ್ತುಕೊಂಡಿದ್ದಾರೆ. ಇದರಿಂದ ನಮ್ಮ ಕುಟುಂಬದ ಸದಸ್ಯರ ಮಾನಸಿಕ ನೆಮ್ಮದಿ ಕೂಡ ದೂರ ಮಾಡಿದ್ದಾರೆ. ಇಷ್ಟೆಲ್ಲ ಸಂಕಷ್ಟಕ್ಕೆ ಈಡು ಮಾಡಿದ ಪಿಎಸ್ಐ ವಿರುದ್ಧ ಕ್ರಮ ಜರುಗಿಸುವಂತೆ ವಿದ್ಯಾರ್ಥಿನಿಯು ತನ್ನ ದೂರು ಪ್ರತಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಹಾಗೂ ಮದುವೆಯಾಗಲು ಸಹಕರಿಸಿದವರ ವಿರುದವು ಸಹ ಸಂತ್ರಸ್ತೆ ದೂರನ್ನು ದಾಖಲಿಸಿರುತ್ತಾರೆ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…