Latest

ಬೀದರ್ ಶಾಸಕ ಪುತ್ರ ಪ್ರತೀಕ್‌ ಚೌಹಾನ್ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಹೋಟೆಲ್‌ನಲ್ಲಿ ಸ್ಥಳ ಪರಿಶೀಲನೆ, ಸಿಎಂಗೆ ಯುವತಿಯ ಮನವಿ

ಬೆಂಗಳೂರು, ಜುಲೈ 26: ಬೀದರ್ ಶಾಸಕ ಪ್ರಭು ಚೌಹಾನ್ ಪುತ್ರ ಪ್ರತೀಕ್‌ ಚೌಹಾನ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ, ಪ್ರಕರಣದ ಪ್ರಮುಖ ಸ್ಥಳವಾಗಿದ್ದ ಬೆಂಗಳೂರು ನಗದಿಯ ಖಾಸಗಿ ಹೋಟೆಲ್‌ನಲ್ಲಿ ಪೊಲೀಸರು ಗುರುವಾರ ಸ್ಥಳ ಮಹಜರು ನಡೆಸಿದ್ದಾರೆ.

ಆರೋಪದ ಪ್ರಕಾರ, 2023ರ ಅಕ್ಟೋಬರ್ 3ರಂದು ಪ್ರತೀಕ್‌ ಚೌಹಾನ್ ಹಾಗೂ ಸಂತ್ರಸ್ತ ಯುವತಿ ಇಬ್ಬರೂ ನಿಶ್ಚಿತಾರ್ಥಕ್ಕೂ ಮುನ್ನ ಬೆಂಗಳೂರಿಗೆ ಬಂದು, ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿಕೊಂಡಿದ್ದರು. ಹೋಟೆಲ್ ರೂಮ್‌ ಬುಕ್ಕಿಂಗ್ ಮೇಕ್ ಮೈ ಟ್ರಿಪ್ ವೇದಿಕೆಯ ಮೂಲಕ ಸಂತ್ರಸ್ತೆ ಮಾಡಿದ್ದರೆನ್ನಲಾಗಿದೆ. ಇದೀಗ ಪೊಲೀಸರು  ಹೋಟೆಲ್‌ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ಸ್ಥಳವಾದ ಮಹಾರಾಷ್ಟ್ರದಲ್ಲೂ ತನಿಖೆ ಮುಂದುವರೆಸಿದ್ದಾರೆ.

‘ನ್ಯಾಯವಿಲ್ಲದ ತನಿಖೆ’: ಸಂತ್ರಸ್ತೆ ಆಕ್ರೋಶ

ಘಟನೆಯ ಕುರಿತು ಎಫ್‌ಐಆರ್ ದಾಖಲಾಗಿದ್ದು ಐದು ದಿನಗಳಾಗುತ್ತಿದ್ದರೂ ಆರೋಪಿತನ ಬಂಧನ ಇನ್ನೂ ಆಗಿಲ್ಲವೆಂದು ಸಂತ್ರಸ್ತೆ ಆರೋಪಿಸಿದ್ದಾರೆ. ಈಗಾಗಲೇ ಮೂರ್ನಾಲ್ಕು ಕಡೆಗಳಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದರೂ ತಕ್ಷಣದ ಕಾನೂನು ಕ್ರಮ ಕೈಗೊಂಡಿಲ್ಲ. ಅಲ್ಲದೇ, ಪೊಲೀಸರು ತಮ್ಮ ಜತೆ ದುರುಪಯೋಗವಾಗಿ ವರ್ತಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಮುಖ್ಯಮಂತ್ರಿಗೆ ಬರೆದ ಮನವಿ ಪತ್ರ

ಈ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಆಗ್ರಹಿಸಿರುವ ಸಂತ್ರಸ್ತ ಯುವತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಮನವಿ ಮಾಡಿದ್ದಾರೆ. “ನಾನು ಹಾಗೂ ನನ್ನ ಕುಟುಂಬ ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಆದರೆ ಈಗ ನಮ್ಮದೇ ವಿರುದ್ಧ ಪೊಲೀಸ್ ಇಲಾಖೆ ಎಫ್‌ಐಆರ್ ದಾಖಲಿಸುತ್ತಿದೆ. ದಯವಿಟ್ಟು ನನಗೆ ನ್ಯಾಯ ಒದಗಿಸಿ,” ಎಂದು ಮನವಿಯಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.

ಪ್ರತೀಕ್ ಚೌಹಾನ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ತಿರುವು ಪಡೆಯುತ್ತಿದ್ದು, ಸಾರ್ವಜನಿಕವಾಗಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

nazeer ahamad

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago