Latest

ಬೀದರ್ ಶಾಸಕ ಪುತ್ರ ಪ್ರತೀಕ್‌ ಚೌಹಾನ್ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಹೋಟೆಲ್‌ನಲ್ಲಿ ಸ್ಥಳ ಪರಿಶೀಲನೆ, ಸಿಎಂಗೆ ಯುವತಿಯ ಮನವಿ

ಬೆಂಗಳೂರು, ಜುಲೈ 26: ಬೀದರ್ ಶಾಸಕ ಪ್ರಭು ಚೌಹಾನ್ ಪುತ್ರ ಪ್ರತೀಕ್‌ ಚೌಹಾನ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ, ಪ್ರಕರಣದ ಪ್ರಮುಖ ಸ್ಥಳವಾಗಿದ್ದ ಬೆಂಗಳೂರು ನಗದಿಯ ಖಾಸಗಿ ಹೋಟೆಲ್‌ನಲ್ಲಿ ಪೊಲೀಸರು ಗುರುವಾರ ಸ್ಥಳ ಮಹಜರು ನಡೆಸಿದ್ದಾರೆ.

ಆರೋಪದ ಪ್ರಕಾರ, 2023ರ ಅಕ್ಟೋಬರ್ 3ರಂದು ಪ್ರತೀಕ್‌ ಚೌಹಾನ್ ಹಾಗೂ ಸಂತ್ರಸ್ತ ಯುವತಿ ಇಬ್ಬರೂ ನಿಶ್ಚಿತಾರ್ಥಕ್ಕೂ ಮುನ್ನ ಬೆಂಗಳೂರಿಗೆ ಬಂದು, ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿಕೊಂಡಿದ್ದರು. ಹೋಟೆಲ್ ರೂಮ್‌ ಬುಕ್ಕಿಂಗ್ ಮೇಕ್ ಮೈ ಟ್ರಿಪ್ ವೇದಿಕೆಯ ಮೂಲಕ ಸಂತ್ರಸ್ತೆ ಮಾಡಿದ್ದರೆನ್ನಲಾಗಿದೆ. ಇದೀಗ ಪೊಲೀಸರು  ಹೋಟೆಲ್‌ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ಸ್ಥಳವಾದ ಮಹಾರಾಷ್ಟ್ರದಲ್ಲೂ ತನಿಖೆ ಮುಂದುವರೆಸಿದ್ದಾರೆ.

‘ನ್ಯಾಯವಿಲ್ಲದ ತನಿಖೆ’: ಸಂತ್ರಸ್ತೆ ಆಕ್ರೋಶ

ಘಟನೆಯ ಕುರಿತು ಎಫ್‌ಐಆರ್ ದಾಖಲಾಗಿದ್ದು ಐದು ದಿನಗಳಾಗುತ್ತಿದ್ದರೂ ಆರೋಪಿತನ ಬಂಧನ ಇನ್ನೂ ಆಗಿಲ್ಲವೆಂದು ಸಂತ್ರಸ್ತೆ ಆರೋಪಿಸಿದ್ದಾರೆ. ಈಗಾಗಲೇ ಮೂರ್ನಾಲ್ಕು ಕಡೆಗಳಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದರೂ ತಕ್ಷಣದ ಕಾನೂನು ಕ್ರಮ ಕೈಗೊಂಡಿಲ್ಲ. ಅಲ್ಲದೇ, ಪೊಲೀಸರು ತಮ್ಮ ಜತೆ ದುರುಪಯೋಗವಾಗಿ ವರ್ತಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಮುಖ್ಯಮಂತ್ರಿಗೆ ಬರೆದ ಮನವಿ ಪತ್ರ

ಈ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಆಗ್ರಹಿಸಿರುವ ಸಂತ್ರಸ್ತ ಯುವತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಮನವಿ ಮಾಡಿದ್ದಾರೆ. “ನಾನು ಹಾಗೂ ನನ್ನ ಕುಟುಂಬ ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಆದರೆ ಈಗ ನಮ್ಮದೇ ವಿರುದ್ಧ ಪೊಲೀಸ್ ಇಲಾಖೆ ಎಫ್‌ಐಆರ್ ದಾಖಲಿಸುತ್ತಿದೆ. ದಯವಿಟ್ಟು ನನಗೆ ನ್ಯಾಯ ಒದಗಿಸಿ,” ಎಂದು ಮನವಿಯಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.

ಪ್ರತೀಕ್ ಚೌಹಾನ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ತಿರುವು ಪಡೆಯುತ್ತಿದ್ದು, ಸಾರ್ವಜನಿಕವಾಗಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago