Latest

ಬಾಲಕಿ ಮೇಲೆ ಅತ್ಯಾಚಾರ: ಪ್ರೀತಿಯ ನಾಟಕವಾಡಿದ ಇಬ್ಬರು ಯುವಕರಿಂದ ಪೈಶಾಚಿಕ ಕೃತ್ಯ

ಗದಗ: ಜಿಲ್ಲೆಯ ಗದಗ ನಗರದಲ್ಲಿ ಮಾನವೀಯತೆ ಮರೆತಂತಹ ಅತ್ಯಂತ ದುರ್ಘಟನೆಯೊಂದು ನಡೆದಿದ್ದು, ಪ್ರೀತಿಯ ನಾಟಕವಾಡಿದ ಇಬ್ಬರು ಯುವಕರು ಬಾಲಕಿಯನ್ನು ಲಾಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ.

ಪೊಲೀಸ್ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಏಪ್ರಿಲ್ 19ರಂದು ಸಮೀರ್ ಎಂಬ ಯುವಕ, ಬಾಲಕಿಗೆ ಪ್ರೀತಿ ಮಾಡುತ್ತಿದ್ದೆನೆಂದು ನಂಬಿಸಿ, ಆಕೆಯನ್ನು ಲಾಜ್‌ಗೆ ಕರೆದೊಯ್ದಿದ್ದ. ಅಲ್ಲಿ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿದ ಬಳಿಕ, ಅವನ ಸ್ನೇಹಿತ ಉಮರ್ ಕೂಡ ಲೈಂಗಿಕ ದೌರ್ಜನ್ಯಕ್ಕೆ ಕೈಹಾಕಿದ್ದಾನೆ. ಈ ಘಟನೆಯಲ್ಲಿ ಜಾಕೀರ್ ಹುಸೇನ್ ಎಂಬ ಮತ್ತೊಬ್ಬ ವ್ಯಕ್ತಿ ಲಾಜ್ ಬುಕ್ ಮಾಡಲು ಸಹಾಯ ಮಾಡಿದ ಎನ್ನಲಾಗಿದೆ.

ಘಟನೆಯ ಭರಿತ ವಾಸ್ತವ ಹೊರಬಿದ್ದ ಬಳಿಕ ಬಾಲಕಿಯ ತಾಯಿ ಕೂಡಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಗದಗ ಪೊಲೀಸರು ತನಿಖೆ ಆರಂಭಿಸಿ, ಆರೋಪಿಗಳ ಪತ್ತೆಗೆ ತೀವ್ರ ಚಟುವಟಿಕೆ ನಡೆಸುತ್ತಿದ್ದಾರೆ.

ಈ ಕುರಿತು ಗದಗ ಎಸ್ಪಿ ಬಿಎಸ್ ನೇಮಗೌಡ ಮಾತನಾಡುತ್ತಾ, ಈಗಾಗಲೇ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಉಳಿದ ಇಬ್ಬರ ಬಂಧನಕ್ಕಾಗಿ ಬಲೆ ಬೀಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಘಟನೆ ಜಿಲ್ಲೆಯಾದ್ಯಂತ ಆಕ್ರೋಶ ಹಾಗೂ ಭೀತಿಯ ಪರಿಸರ ಸೃಷ್ಟಿ ಮಾಡಿದ್ದು, ಸಾರ್ವಜನಿಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂಬ ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago