Crime

ಜಾಮಿಯಾ ಮಸೀದಿಯಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಮೌಲ್ವಿಯ ತಂದೆ ಅರೆಸ್ಟ್.!

ಚಿಕ್ಕಬಳ್ಳಾಪುರ, ಜೂನ್ 3 (ಕ್ರೈಂ ಡೇಲಿ): ಆರು ವರ್ಷದ ಪುಟ್ಟ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿಯಲ್ಲಿ ನಡೆದಿದೆ. ಮಸೀದಿಯ ಒಳ ಕೋಣೆಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಆರೋಪಿ ಮಹಪ್ಯೂಸ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಪ್ಯೂಸ್ ಮೂಲತಃ ಉತ್ತರ ಪ್ರದೇಶದವನು. 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ವಲಸೆ ಬಂದ ಈತ, ಇಲ್ಲಿಯೇ ಬಟ್ಟೆಗಳ ಬೀದಿ ವ್ಯಾಪಾರ ಮಾಡುತ್ತಿದ್ದ. ಆತನ ಮಗನು ಚಿಕ್ಕಬಳ್ಳಾಪುರದ ಮತ್ತೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿದ್ದು, ಆತನಿಗೆ ನೀಡಿದ್ದ ಆಶ್ರಯ ಕೋಣೆಯನ್ನು ಮಹಪ್ಯೂಸ್ ದುರುಪಯೋಗಪಡಿಸಿಕೊಂಡಿದ್ದಾನೆ.

ಬಾಲಕಿಗೆ ಚಾಕೊಲೇಟ್‌ ಆಮಿಷವೊಡ್ಡಿ ಕೋಣೆಗೆ ಕರೆದೊಯ್ದ ಮಹಪ್ಯೂಸ್ ಅತ್ಯಾಚಾರ ಎಸಗಿದನೆಂದು ಪೀಡಿತೆಯ ತಾಯಿ ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ತನಿಖೆ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ ಮಸೀದಿಯ ಮೌಲ್ವಿ ಸುಹೇಬ್ ಸ್ಥಳೀಯರ ಆಕ್ರೋಶಕ್ಕೆ ಗುರಿಯಾದ್ರು. ತಂದೆಗೆ ಮಸೀದಿಯ ಕೊಠಡಿ ನೀಡಿದ್ದು ಎಂತಹ ನಿರ್ಲಕ್ಷ್ಯ ಎಂಬ ಪ್ರಶ್ನೆ ಎತ್ತಿ ಜನರು ತರಾಟೆಗೆ ತೆಗೆದುಕೊಂಡರು. ಇದೇ ವೇಳೆ, ಬಾಲಕಿಯ ತಾಯಿ ದುಷ್ಕರ್ಮಿಗೆ ಹಿಗ್ಗಾಮುಗ್ಗ ಥಳಿಸಿದ್ದೂ ವರದಿಯಾಗಿದೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಗಂಭೀರ ಚಿಂತೆ ಹುಟ್ಟಿಸಿದೆ. ಕೆಲವೇ ದಿನಗಳ ಹಿಂದೆ ಬೆಳಗಾವಿಯಲ್ಲಿ ಅಪ್ರಾಪ್ತೆಯರ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಗಳು ನಾಡಿನಾದ್ಯಂತ ಆಕ್ರೋಶ ಎಬ್ಬಿಸಿದ್ದವು. ಇದೀಗ ಚಿಕ್ಕಬಳ್ಳಾಪುರದಲ್ಲಿಯೂ ಇಂತಹ ಕೃತ್ಯ ನಡೆಯುತ್ತಿರುವುದು ಭದ್ರತೆ ವ್ಯವಸ್ಥೆಗಳ ಮೇಲೆ ಪ್ರಶ್ನೆ ಎತ್ತುತ್ತಿದೆ.

ಪೀಡಿತೆಯಿಗೆ ನ್ಯಾಯ ಒದಗಿಸಲು ತ್ವರಿತ ನ್ಯಾಯಾಂಗ ಪ್ರಕ್ರಿಯೆ ಹಾಗೂ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆ ಹೆಚ್ಚಾಗುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago