ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ರೇಣಿಗುಂಟದಲ್ಲಿರುವ ಸರ್ಕಾರಿ ಬುಡಕಟ್ಟು ಕಲ್ಯಾಣ ಬಾಲಕಿಯರ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿದ್ದಾನೆ.
ಆರೋಪಿಯು ಬಾಲಕಿ ವಾಸವಾಗಿದ್ದ ಹಾಸ್ಟೆಲ್ ನ ವಾರ್ಡನ್ ಆಗಿದ್ದ. ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆತ, ಸುಮಾರು ಒಂದು ತಿಂಗಳ ಹಿಂದೆ ಶಾಲೆಯಿಂದ ವರ್ಗಾವಣೆಯಾಗಿದ್ದ.
ಬಾಲಕಿ ತಾನು ಗರ್ಭಿಣಿ ಎಂಬ ಸುದ್ದಿಯನ್ನು ಆತನನ್ನು ತಲುಪಿಸಿದ್ದು, ದಸರಾ ರಜೆಯಲ್ಲಿ ಅಕ್ರಮವಾಗಿ ಗರ್ಭಪಾತ ಮಾಡಿಸಲು ಬಾಲಕಿಯನ್ನು ಒಂಗೋಲ್ ನಲ್ಲಿರುವ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದಿದ್ದ.
ಈ ನಡುವೆ ಬಾಲಕಿ ಹಬ್ಬಕ್ಕೆ ಮನೆಗೆ ಬಾರದೆ ಇದ್ದಿದ್ದರಿಂದ ಮನೆಯವರು ಹಾಸ್ಟೆಲ್ ಗೆ ಹೋಗಿ ವಿಚಾರಿಸಿದ್ದಾರೆ. ಅಲ್ಲಿ ವಿದ್ಯಾರ್ಥಿನಿ ಇಲ್ಲದಿರುವುದು ಗೊತ್ತಾಗಿ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಪೊಲೀಸರಿಗೆ ಬಾಲಕಿ ಶ್ರೀನಿವಾಸ ರಾವ್ ಜೊತೆಗಿದ್ದಳು ಎಂಬುದು ಗೊತ್ತಾಗಿದೆ.
ಪೊಲೀಸರಿಗೆ ದೂರು ಬಂದಿದೆ ಎಂದು ತಿಳಿದಾಗ ಆರೋಪಿ ಅಪ್ರಾಪ್ತೆ ಮಾಚರ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಪೊಲೀಸರು ಬಾಲಕಿಯನ್ನು ರಕ್ಷಿಸಿ ಶಿಶುಪಾಲನಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.
ಅಪ್ರಾಪ್ತ ಬಾಲಕಿಯನ್ನು ಗರ್ಭಪಾತಕ್ಕೆ ಆಸ್ಪತ್ರೆಗೆ ಕರೆತಂದು ಅಲ್ಲೇ ಬಿಟ್ಟುಹೋಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪೆದ್ದಲಪುಡಿ ಶ್ರೀನಿವಾಸ ರಾವ್ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಐಪಿಸಿಯ ಇತರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ಮನೆಯವರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದಾಗ ಈ ಅಪರಾಧ ಬೆಳಕಿಗೆ ಬಂದಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…