ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ಜನಮಾನಸವನ್ನು ನಡುಗಿಸುವಂತೆ ಭಯಾನಕ ಘಟನೆ ನಡೆದಿದೆ. ತನ್ನ ಪ್ರೇಯಸಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸಿದ ಆಕ್ರೋಶದಿಂದ ಒಡಿಶಾದ ಮೂಲದ ವಲಸೆ ಕಾರ್ಮಿಕನೊಬ್ಬ, ಆಕೆಯ ಒಂದೂವರೆ ವರ್ಷದ ಮಗುವಿಗೆ ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಈ ದಾರುಣ ಘಟನೆ ಏಪ್ರಿಲ್ 6ರಂದು ನಡೆದಿದೆ. ಮಹಿಳೆ ತನ್ನ ಪತಿಯನ್ನು ಬಿಟ್ಟ ಬಳಿಕ ತನ್ನ ಮಕ್ಕಳೊಂದಿಗೆ ಆರೋಪಿಯೊಂದಿಗೆ ವಾಸವಾಗುತ್ತಿದ್ದಳು. ಸಂಬಂಧಕ್ಕೆ ಸಹಕರಿಸದ ಕಾರಣ ಆತ ತನ್ನ ಕ್ರೌರ್ಯವನ್ನು ಮಗುವಿನ ಮೇಲೆ ತೋರಿಸಿದ್ದಾನೆ. ಮಗುವನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಈ ಅಮಾನವೀಯ ಕೃತ್ಯ ಎಸಗಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆ ಬಳಿಕ ಮಗುವಿನ ಗೋಪ್ಯಾಂಗದಿಂದ ರಕ್ತಸ್ರಾವವಾಗುತ್ತಿದ್ದುದನ್ನು ಗಮನಿಸಿದ ತಾಯಿ ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಳು. ವೈದ್ಯಕೀಯ ತಪಾಸಣೆಯಲ್ಲಿ ಶಿಶುವಿಗೆ ಲೈಂಗಿಕ ದೌರ್ಜನ್ಯ ನಡೆದಿರುವುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದರು.
ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಆತನನ್ನು ಸೇಲಂ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈ ದುಷ್ಕೃತ್ಯವು ವ್ಯಾಪಕ ಆಕ್ರೋಶವನ್ನು ಹುಟ್ಟಿಸಿತ್ತು. ಬಾಲಕಿಯರ ಸುರಕ್ಷತೆ ಮತ್ತು ನ್ಯಾಯಕ್ಕಾಗಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…