Categories: CrimeLatest

ಕಲ್ಲಂಗಡಿ ಹಣ್ಣಿನಲ್ಲಿ ಇಲಿ ಪಾಷಾಣ!: ಮುಂಬೈನಲ್ಲಿ ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು

ಮುಂಬೈ: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣ ಇದೀಗ ಆತಂಕಕಾರಿ ತಿರುವು ಪಡೆದಿದೆ. ಆರಂಭದಲ್ಲಿ ಆಹಾರ ವಿಷಬಾಧೆ ಎಂದು ಶಂಕಿಸಲಾಗಿದ್ದ ಈ ಪ್ರಕರಣದಲ್ಲಿ, ಕಲ್ಲಂಗಡಿ ಹಣ್ಣಿನಲ್ಲಿದ್ದ ಇಲಿ ಪಾಷಾಣವೇ ಸಾವಿಗೆ ಕಾರಣ ಎಂಬುದು ವಿಧಿವಿಜ್ಞಾನ ವರದಿಯಲ್ಲಿ ಬಹಿರಂಗವಾಗಿದೆ.

ಮೃತರಾದವರು ಅಬ್ದುಲ್ಲಾ ಡೊಕಾಡಿಯಾ (45), ಅವರ ಪತ್ನಿ ನಸ್ರೀನ್ (35) ಹಾಗೂ ಪುತ್ರಿಯರಾದ ಝೈನಬ್ (13) ಮತ್ತು ಆಯೇಷಾ (16). ಕುಟುಂಬದ ಈ ದಾರುಣ ಸಾವಿನ ಹಿಂದೆ ಜಿಂಕ್ ಫಾಸ್ಫೈಟ್ (Zinc Phosphide) ಎಂಬ ಅತ್ಯಂತ ಅಪಾಯಕಾರಿ ವಿಷಕಾರಿ ರಾಸಾಯನಿಕ ಇರುವುದನ್ನು ಫೊರೆನ್ಸಿಕ್ ಪರೀಕ್ಷೆ ದೃಢಪಡಿಸಿದೆ.

ಘಟನೆ ನಡೆದಿದ್ದು ಹೇಗೆ?

ಇತ್ತೀಚೆಗೆ ಅಬ್ದುಲ್ಲಾ ಕುಟುಂಬ ತಮ್ಮ ನಿವಾಸದಲ್ಲಿ ಸಂಬಂಧಿಕರಿಗಾಗಿ ಔತಣಕೂಟ ಏರ್ಪಡಿಸಿತ್ತು. ಎಲ್ಲರೂ ಮಟನ್ ಪಲಾವ್ ಸೇವಿಸಿ ತೆರಳಿದ ಬಳಿಕ, ರಾತ್ರಿ ಸುಮಾರು 1 ಗಂಟೆ ವೇಳೆಗೆ ಕುಟುಂಬದ ನಾಲ್ವರು ಕಲ್ಲಂಗಡಿ ಹಣ್ಣು ತಿಂದಿದ್ದರು. ಆದರೆ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಎಲ್ಲರಿಗೂ ತೀವ್ರ ವಾಂತಿ, ಭೇದಿ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ನಾಲ್ವರೂ ಮೃತಪಟ್ಟಿದ್ದರು.

ಈ ಘಟನೆ ನಂತರ ಮೃತರ ದೇಹದ ಮಾದರಿ ಹಾಗೂ ಅವರು ಸೇವಿಸಿದ್ದ ಕಲ್ಲಂಗಡಿ ಹಣ್ಣಿನ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಇಲಿಗಳನ್ನು ಕೊಲ್ಲಲು ಬಳಸುವ ಜಿಂಕ್ ಫಾಸ್ಫೈಡ್ ಅಂಶ ಪತ್ತೆಯಾಗಿದ್ದು, ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸಂಗತಿ

ಮರಣೋತ್ತರ ಪರೀಕ್ಷೆಯ ವೇಳೆ ಮೃತರ ಮೆದುಳು, ಹೃದಯ ಹಾಗೂ ಕರುಳು ಸೇರಿದಂತೆ ಹಲವು ಒಳಾಂಗಗಳು ಹಸಿರು ಬಣ್ಣಕ್ಕೆ ತಿರುಗಿರುವುದು ಕಂಡುಬಂದಿದೆ. ಇದು ದೇಹದಲ್ಲಿ ತೀವ್ರ ಪ್ರಮಾಣದ ವಿಷಕಾರಿ ಅಂಶ ಸೇರಿರುವುದರ ಸೂಚಕ ಎಂದು ವೈದ್ಯರು ತಿಳಿಸಿದ್ದಾರೆ.

ಇದರ ಜೊತೆಗೆ ಅಬ್ದುಲ್ಲಾ ಡೊಕಾಡಿಯಾ ಅವರ ದೇಹದಲ್ಲಿ ‘ಮಾರ್ಫಿನ್’ ಅಂಶವೂ ಪತ್ತೆಯಾಗಿದೆ. ಅದು ವೈದ್ಯಕೀಯ ಚಿಕಿತ್ಸೆಗಾಗಿ ಬಳಸಲಾಗಿತ್ತೇ ಅಥವಾ ಪ್ರಕರಣದ ಹಿಂದೆ ಮತ್ತೇನಾದರೂ ಸಂಚು ಇದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಪೊಲೀಸರ ತನಿಖೆ ಚುರುಕು

ಔತಣಕೂಟದಲ್ಲಿ ಭಾಗವಹಿಸಿದ್ದ ಸಂಬಂಧಿಕರಿಗೆ ಯಾವುದೇ ತೊಂದರೆ ಆಗದ ಹಿನ್ನೆಲೆ, ಪೊಲೀಸರು ಕಲ್ಲಂಗಡಿ ಹಣ್ಣಿನ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದರು. ಹಣ್ಣಿಗೆ ವಿಷ ಆಕಸ್ಮಿಕವಾಗಿ ಸೇರಿತ್ತೇ ಅಥವಾ ಉದ್ದೇಶಪೂರ್ವಕವಾಗಿ ಇಂಜೆಕ್ಟ್ ಮಾಡಲಾಗಿತ್ತೇ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

ಸದ್ಯ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ವಿಧಿವಿಜ್ಞಾನ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

11 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

20 hours ago