Categories: CrimeLatest

ಕಲ್ಲಂಗಡಿ ಹಣ್ಣಿನಲ್ಲಿ ಇಲಿ ಪಾಷಾಣ!: ಮುಂಬೈನಲ್ಲಿ ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು

ಮುಂಬೈ: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣ ಇದೀಗ ಆತಂಕಕಾರಿ ತಿರುವು ಪಡೆದಿದೆ. ಆರಂಭದಲ್ಲಿ ಆಹಾರ ವಿಷಬಾಧೆ ಎಂದು ಶಂಕಿಸಲಾಗಿದ್ದ ಈ ಪ್ರಕರಣದಲ್ಲಿ, ಕಲ್ಲಂಗಡಿ ಹಣ್ಣಿನಲ್ಲಿದ್ದ ಇಲಿ ಪಾಷಾಣವೇ ಸಾವಿಗೆ ಕಾರಣ ಎಂಬುದು ವಿಧಿವಿಜ್ಞಾನ ವರದಿಯಲ್ಲಿ ಬಹಿರಂಗವಾಗಿದೆ.

ಮೃತರಾದವರು ಅಬ್ದುಲ್ಲಾ ಡೊಕಾಡಿಯಾ (45), ಅವರ ಪತ್ನಿ ನಸ್ರೀನ್ (35) ಹಾಗೂ ಪುತ್ರಿಯರಾದ ಝೈನಬ್ (13) ಮತ್ತು ಆಯೇಷಾ (16). ಕುಟುಂಬದ ಈ ದಾರುಣ ಸಾವಿನ ಹಿಂದೆ ಜಿಂಕ್ ಫಾಸ್ಫೈಟ್ (Zinc Phosphide) ಎಂಬ ಅತ್ಯಂತ ಅಪಾಯಕಾರಿ ವಿಷಕಾರಿ ರಾಸಾಯನಿಕ ಇರುವುದನ್ನು ಫೊರೆನ್ಸಿಕ್ ಪರೀಕ್ಷೆ ದೃಢಪಡಿಸಿದೆ.

ಘಟನೆ ನಡೆದಿದ್ದು ಹೇಗೆ?

ಇತ್ತೀಚೆಗೆ ಅಬ್ದುಲ್ಲಾ ಕುಟುಂಬ ತಮ್ಮ ನಿವಾಸದಲ್ಲಿ ಸಂಬಂಧಿಕರಿಗಾಗಿ ಔತಣಕೂಟ ಏರ್ಪಡಿಸಿತ್ತು. ಎಲ್ಲರೂ ಮಟನ್ ಪಲಾವ್ ಸೇವಿಸಿ ತೆರಳಿದ ಬಳಿಕ, ರಾತ್ರಿ ಸುಮಾರು 1 ಗಂಟೆ ವೇಳೆಗೆ ಕುಟುಂಬದ ನಾಲ್ವರು ಕಲ್ಲಂಗಡಿ ಹಣ್ಣು ತಿಂದಿದ್ದರು. ಆದರೆ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಎಲ್ಲರಿಗೂ ತೀವ್ರ ವಾಂತಿ, ಭೇದಿ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ನಾಲ್ವರೂ ಮೃತಪಟ್ಟಿದ್ದರು.

ಈ ಘಟನೆ ನಂತರ ಮೃತರ ದೇಹದ ಮಾದರಿ ಹಾಗೂ ಅವರು ಸೇವಿಸಿದ್ದ ಕಲ್ಲಂಗಡಿ ಹಣ್ಣಿನ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಇಲಿಗಳನ್ನು ಕೊಲ್ಲಲು ಬಳಸುವ ಜಿಂಕ್ ಫಾಸ್ಫೈಡ್ ಅಂಶ ಪತ್ತೆಯಾಗಿದ್ದು, ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸಂಗತಿ

ಮರಣೋತ್ತರ ಪರೀಕ್ಷೆಯ ವೇಳೆ ಮೃತರ ಮೆದುಳು, ಹೃದಯ ಹಾಗೂ ಕರುಳು ಸೇರಿದಂತೆ ಹಲವು ಒಳಾಂಗಗಳು ಹಸಿರು ಬಣ್ಣಕ್ಕೆ ತಿರುಗಿರುವುದು ಕಂಡುಬಂದಿದೆ. ಇದು ದೇಹದಲ್ಲಿ ತೀವ್ರ ಪ್ರಮಾಣದ ವಿಷಕಾರಿ ಅಂಶ ಸೇರಿರುವುದರ ಸೂಚಕ ಎಂದು ವೈದ್ಯರು ತಿಳಿಸಿದ್ದಾರೆ.

ಇದರ ಜೊತೆಗೆ ಅಬ್ದುಲ್ಲಾ ಡೊಕಾಡಿಯಾ ಅವರ ದೇಹದಲ್ಲಿ ‘ಮಾರ್ಫಿನ್’ ಅಂಶವೂ ಪತ್ತೆಯಾಗಿದೆ. ಅದು ವೈದ್ಯಕೀಯ ಚಿಕಿತ್ಸೆಗಾಗಿ ಬಳಸಲಾಗಿತ್ತೇ ಅಥವಾ ಪ್ರಕರಣದ ಹಿಂದೆ ಮತ್ತೇನಾದರೂ ಸಂಚು ಇದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಪೊಲೀಸರ ತನಿಖೆ ಚುರುಕು

ಔತಣಕೂಟದಲ್ಲಿ ಭಾಗವಹಿಸಿದ್ದ ಸಂಬಂಧಿಕರಿಗೆ ಯಾವುದೇ ತೊಂದರೆ ಆಗದ ಹಿನ್ನೆಲೆ, ಪೊಲೀಸರು ಕಲ್ಲಂಗಡಿ ಹಣ್ಣಿನ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದರು. ಹಣ್ಣಿಗೆ ವಿಷ ಆಕಸ್ಮಿಕವಾಗಿ ಸೇರಿತ್ತೇ ಅಥವಾ ಉದ್ದೇಶಪೂರ್ವಕವಾಗಿ ಇಂಜೆಕ್ಟ್ ಮಾಡಲಾಗಿತ್ತೇ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

ಸದ್ಯ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ವಿಧಿವಿಜ್ಞಾನ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

5 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

5 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago