Latest

ಮಾಹಿತಿ ಪಡೆಯಲು ಬಂದ ಪೊಲೀಸಪ್ಪನ ಮುಂದೆ ಸೀರೆ ಬಿಚ್ಚಿ ಡ್ರಾಮ ಮಾಡಿದ ರತ್ನಮ್ಮ !

ನಂಜನಗೂಡು ತಾಲ್ಲೂಕಿನ ಶಿರಮಳ್ಳಿ ಗ್ರಾಮದಲ್ಲಿ ಅಚ್ಚರಿಯ ಘಟನೆ ಒಂದು ಬೆಳಕಿಗೆ ಬಂದಿದೆ. ಶಿರಮಳ್ಳಿ ಗ್ರಾಮದ ನಿವಾಸಿ ರತ್ನಮ್ಮ ಎಂಬ ಮಹಿಳೆ, ಮಾಹಿತಿ ಸಂಗ್ರಹಕ್ಕಾಗಿ ಮನೆಗೆ ಬಂದಿದ್ದ ಪೊಲೀಸ್ ಸಿಬ್ಬಂದಿಯ ಎದುರೇ ನಡುರಸ್ತೆಯಲ್ಲೇ ತನ್ನ ಸೀರೆಯನ್ನು ಬಿಚ್ಚಿ ವಿಡಿಯೋ ತೆಗೆದುಕೊಳ್ಳುವಂತೆ ಪ್ರಚೋದಿಸುವ ಅಸ್ವಭಾವಿಕ ವರ್ತನೆ ಮೆರೆದಿದ್ದಾಳೆ.

ಪೊಲೀಸರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಈ ರೀತಿಯ ಕುಚಕುಂದತನ ಪ್ರದರ್ಶಿಸಿದ ಘಟನೆ ಸ್ಥಳೀಯರಲ್ಲಿ ನೊಂದಣೆಯನ್ನೂ ಮತ್ತು ತೀವ್ರ ಆಕ್ರೋಶವನ್ನೂ ಹುಟ್ಟುಹಾಕಿದೆ. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ಗ್ರಾಮಸ್ಥರು ರತ್ನಮ್ಮ ಮತ್ತು ಅವರ ಕುಟುಂಬದವರನ್ನು ಸಾಮಾಜಿಕವಾಗಿ ಬಹಿಷ್ಕರಿಸಿರುವುದಾಗಿ ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿಯೇ ಕಳೆದ ವಾರ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರತ್ನಮ್ಮ, ತಮ್ಮ ವಿರುದ್ಧ ನಡೆಯುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಮೈಸೂರಿನ ಎಸ್ಪಿ ಕಚೇರಿಗೆ ದೂರು ಸಲ್ಲಿಸಿದ್ದರು.

ಈ ಘಟನೆಯ ಬಳಿಕ, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಈ ವಿಷಯದಲ್ಲಿ ಸತ್ಯಾಂಶ ತಿಳಿದುಕೊಳ್ಳಲು ರತ್ನಮ್ಮ ಮನೆಗೆ ಭೇಟಿ ನೀಡಿದಾಗ, ಅವರು ಮನಸ್ಥಿತಿ ನಷ್ಟಗೊಂಡಂತ ರೀತಿಯಲ್ಲಿ ವರ್ತಿಸಿ, ಪೊಲೀಸರ ಕಾದಿರೆಯನ್ನು ಅವಮಾನಿಸುವ ರೀತಿಯಲ್ಲಿ ನಡೆದುಕೊಂಡಿದ್ದಾಳೆ. ಸೀರೆ ಬಿಚ್ಚಿ ಸೆಲ್ಫಿ ವಿಡಿಯೋ ಮಾಡಲು ಯತ್ನಿಸಿದಂತೂ ವಿಚಾರವೇ ಬೇರೆ ಮಟ್ಟಿಗೆ ಆಶ್ಚರ್ಯಚಕಿತಗೊಳಿಸಿದೆ.

ರತ್ನಮ್ಮ ವಿರುದ್ಧ ಈಗಾಗಲೇ ಹುಲ್ಲಹಳ್ಳಿ ಮತ್ತು ನಂಜನಗೂಡು ಗ್ರಾಮಾಂತರ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಯುಂಟುಮಾಡಿ, ವಿಡಿಯೋ ಮೂಲಕ ಒತ್ತಡ ಸೃಷ್ಟಿಸಲು ಯತ್ನಿಸಿದ್ದ ಈ ಮಹಿಳೆಯ ವರ್ತನೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಗಮನಹರಿಸಿ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ ಎಂಬುದು ಸಾರ್ವಜನಿಕರ ಮಾತು.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago