Latest

ಮಾಹಿತಿ ಪಡೆಯಲು ಬಂದ ಪೊಲೀಸಪ್ಪನ ಮುಂದೆ ಸೀರೆ ಬಿಚ್ಚಿ ಡ್ರಾಮ ಮಾಡಿದ ರತ್ನಮ್ಮ !

ನಂಜನಗೂಡು ತಾಲ್ಲೂಕಿನ ಶಿರಮಳ್ಳಿ ಗ್ರಾಮದಲ್ಲಿ ಅಚ್ಚರಿಯ ಘಟನೆ ಒಂದು ಬೆಳಕಿಗೆ ಬಂದಿದೆ. ಶಿರಮಳ್ಳಿ ಗ್ರಾಮದ ನಿವಾಸಿ ರತ್ನಮ್ಮ ಎಂಬ ಮಹಿಳೆ, ಮಾಹಿತಿ ಸಂಗ್ರಹಕ್ಕಾಗಿ ಮನೆಗೆ ಬಂದಿದ್ದ ಪೊಲೀಸ್ ಸಿಬ್ಬಂದಿಯ ಎದುರೇ ನಡುರಸ್ತೆಯಲ್ಲೇ ತನ್ನ ಸೀರೆಯನ್ನು ಬಿಚ್ಚಿ ವಿಡಿಯೋ ತೆಗೆದುಕೊಳ್ಳುವಂತೆ ಪ್ರಚೋದಿಸುವ ಅಸ್ವಭಾವಿಕ ವರ್ತನೆ ಮೆರೆದಿದ್ದಾಳೆ.

ಪೊಲೀಸರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಈ ರೀತಿಯ ಕುಚಕುಂದತನ ಪ್ರದರ್ಶಿಸಿದ ಘಟನೆ ಸ್ಥಳೀಯರಲ್ಲಿ ನೊಂದಣೆಯನ್ನೂ ಮತ್ತು ತೀವ್ರ ಆಕ್ರೋಶವನ್ನೂ ಹುಟ್ಟುಹಾಕಿದೆ. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ಗ್ರಾಮಸ್ಥರು ರತ್ನಮ್ಮ ಮತ್ತು ಅವರ ಕುಟುಂಬದವರನ್ನು ಸಾಮಾಜಿಕವಾಗಿ ಬಹಿಷ್ಕರಿಸಿರುವುದಾಗಿ ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿಯೇ ಕಳೆದ ವಾರ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರತ್ನಮ್ಮ, ತಮ್ಮ ವಿರುದ್ಧ ನಡೆಯುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಮೈಸೂರಿನ ಎಸ್ಪಿ ಕಚೇರಿಗೆ ದೂರು ಸಲ್ಲಿಸಿದ್ದರು.

ಈ ಘಟನೆಯ ಬಳಿಕ, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಈ ವಿಷಯದಲ್ಲಿ ಸತ್ಯಾಂಶ ತಿಳಿದುಕೊಳ್ಳಲು ರತ್ನಮ್ಮ ಮನೆಗೆ ಭೇಟಿ ನೀಡಿದಾಗ, ಅವರು ಮನಸ್ಥಿತಿ ನಷ್ಟಗೊಂಡಂತ ರೀತಿಯಲ್ಲಿ ವರ್ತಿಸಿ, ಪೊಲೀಸರ ಕಾದಿರೆಯನ್ನು ಅವಮಾನಿಸುವ ರೀತಿಯಲ್ಲಿ ನಡೆದುಕೊಂಡಿದ್ದಾಳೆ. ಸೀರೆ ಬಿಚ್ಚಿ ಸೆಲ್ಫಿ ವಿಡಿಯೋ ಮಾಡಲು ಯತ್ನಿಸಿದಂತೂ ವಿಚಾರವೇ ಬೇರೆ ಮಟ್ಟಿಗೆ ಆಶ್ಚರ್ಯಚಕಿತಗೊಳಿಸಿದೆ.

ರತ್ನಮ್ಮ ವಿರುದ್ಧ ಈಗಾಗಲೇ ಹುಲ್ಲಹಳ್ಳಿ ಮತ್ತು ನಂಜನಗೂಡು ಗ್ರಾಮಾಂತರ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಯುಂಟುಮಾಡಿ, ವಿಡಿಯೋ ಮೂಲಕ ಒತ್ತಡ ಸೃಷ್ಟಿಸಲು ಯತ್ನಿಸಿದ್ದ ಈ ಮಹಿಳೆಯ ವರ್ತನೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಗಮನಹರಿಸಿ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ ಎಂಬುದು ಸಾರ್ವಜನಿಕರ ಮಾತು.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

3 minutes ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

10 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

10 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

13 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

15 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

15 hours ago