ಬೆಂಗಳೂರು, ಜೂನ್ 4: ಐಪಿಎಲ್ 2025ರಲ್ಲಿ ಇತಿಹಾಸ ರಚಿಸಿ ಚೊಚ್ಚಲ ಪ್ರಶಸ್ತಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ ಸಲ್ಲಿಸಲಾಯಿತು. ತಂಡದ ಆಟಗಾರರು ಇಂದು ಬೆಳಗ್ಗೆ ಬೆಂಗಳೂರಿಗೆ ಬಂದಿಳಿದಾಗ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ವಿಮಾನ ನಿಲ್ದಾಣಕ್ಕೆ ತೆರಳಿ ಅವರನ್ನು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
18 ವರ್ಷಗಳ ನಿರೀಕ್ಷೆಯನ್ನು 18ನೇ ಆವೃತ್ತಿಯಲ್ಲಿ ನಿಜ ಮಾಡಿರುವ ನಮ್ಮ ಆರ್ಸಿಬಿ ತಂಡ ತವರಿಗೆ ಮರಳಿದೆ. ಇತಿಹಾಸ ನಿರ್ಮಿಸಿದ ಈ ವಿಜಯಪಥಕ್ಕೆ ಕರ್ನಾಟಕದ ಹೃದಯದಿಂದ ಪ್ರೀತಿ ಮತ್ತು ಗೌರವ ಸಲ್ಲಿಸುತ್ತೇವೆ,” ಎಂದು ಟ್ವೀಟ್ ಮಾಡಿದ್ದಾರೆ.
ಆರ್ಸಿಬಿ ತಂಡವನ್ನು ಗೌರವಿಸಲು ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಆಟಗಾರರನ್ನು ಸನ್ಮಾನಿಸಲಿದ್ದಾರೆ.
ಇದಾದ ನಂತರ, ಮಾಗ್ನೇಟಿಕ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾವಿರಾರು ಆರ್ಸಿಬಿ ಅಭಿಮಾನಿಗಳ ಸಮ್ಮುಖದಲ್ಲಿ ವಿಜಯೋತ್ಸವ ನಡೆಯಲಿದೆ. ಈ ಸಂಭ್ರಮದಲ್ಲಿ ತಂಡದ ಆಟಗಾರರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.
18 ವರ್ಷಗಳ ನಿರೀಕ್ಷೆಯ ನಂತರ ಆಟಗಾರರು ತಂದ ಈ ತ್ರೋಫಿ, ಬೃಹತ್ ವಿಜಯೋತ್ಸವಕ್ಕೆ ದಾರಿ ಮಾಡಿಕೊಡಿದ್ದು, ಕರ್ನಾಟಕದ ಕ್ರೀಡಾ ಇತಿಹಾಸದಲ್ಲಿ ಮಹತ್ವದ ಕ್ಷಣವಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…