Latest

ಬೆಳಗಾವಿ ಘಟನೆಗೆ ಪ್ರತಿಕ್ರಿಯೆ: ಕರ್ನಾಟಕದಲ್ಲಿ ‘ಛಾವಾ’ ಚಿತ್ರ ಪ್ರದರ್ಶನ ರದ್ದುಗೊಳಿಸುವ ಆಗ್ರಹ

ಬೆಳಗಾವಿಯಲ್ಲಿ KSRTC ಕಂಡಕ್ಟರ್ ಮಹದೇವ್ ಅವರು ಕನ್ನಡ ಮಾತನಾಡಿದಕ್ಕಾಗಿ ಮರಾಠಿ ಗುಂಪಿನಿಂದ ಹಲ್ಲೆಗೊಳಗಾದ ಘಟನೆಗೆ ರಾಜ್ಯದಾದ್ಯಂತ ಕನ್ನಡಿಗರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ದೌರ್ಜನ್ಯಕ್ಕೆ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಕರ್ನಾಟಕದಲ್ಲಿ ಮರಾಠಿ ನಾಮಧಾರಿಯಾದ ‘ಛಾವಾ’ ಚಲನಚಿತ್ರದ ಪ್ರದರ್ಶನವನ್ನು ತಕ್ಷಣ ನಿಲ್ಲಿಸಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯಿಸುತ್ತಿದ್ದಾರೆ.

‘ಛಾವಾ’ ಚಿತ್ರ ವಿರೋಧದ ಗಟ್ಟಿ ಕೂಗು

ರೂ.130 ಕೋಟಿ ಬಜೆಟ್‌ನಲ್ಲಿ ನಿರ್ಮಿತ, ನಟಿ ರಶ್ಮಿಕಾ ಮಂದಣ್ಣ ಮತ್ತು ವಿಕ್ಕಿ ಕೌಶಲ್ ಮುಖ್ಯಪಾತ್ರದಲ್ಲಿ ನಟಿಸಿರುವ ‘ಛಾವಾ’ ಚಿತ್ರವು, ಛತ್ರಪತಿ ಶಿವಾಜಿ ಮತ್ತು ಅವರ ಪುತ್ರ ಸಂಭಾಜಿ ಜೀವನಾಧಾರಿತ ಕಥೆಯನ್ನು ಒಳಗೊಂಡಿದೆ. ದೇಶದಾದ್ಯಂತ ಈ ಚಿತ್ರ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಆದರೆ, ಬೆಳಗಾವಿಯಲ್ಲಿನ ಕನ್ನಡಿಗರ ಮೇಲೆ ನಡೆದ ಹಲ್ಲೆಯ ಪರಿಣಾಮವಾಗಿ, ಕರ್ನಾಟಕದಲ್ಲಿ ಈ ಚಿತ್ರದ ಪ್ರದರ್ಶನಕ್ಕೆ ತಡೆ ವಿಧಿಸಬೇಕೆಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಹೋರಾಟಗಾರರು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಅಭಿಯಾನ ನಡೆಸುತ್ತಿದ್ದು, ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ಈ ಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಲು ಒತ್ತಾಯಿಸುತ್ತಿದ್ದಾರೆ.

ಚಿತ್ರರಂಗದ ಪ್ರತಿಕ್ರಿಯೆ ಹಾಗೂ ಮುಂದಿನ ಹಾದಿ

ಈ ಪರಿಸ್ಥಿತಿಯಲ್ಲಿ, ‘ಛಾವಾ’ ಚಿತ್ರ ಪ್ರದರ್ಶನ ನಿಲ್ಲಿಸುವ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿರ್ಧಾರ ಮಹತ್ವ ಪಡೆಯಲಿದೆ. ಚಿತ್ರರಂಗದ ಅನೇಕ ಮಂದಿ ಈ ವಿವಾದದ ಬಗ್ಗೆ ಮೌನ ವಹಿಸಿರುವಂತಿದ್ದರೂ, ರಾಜ್ಯದಲ್ಲಿ ಕನ್ನಡಿಗರ ಹಕ್ಕುಗಳ ಕುರಿತು ಉಭಯಪಕ್ಷೀಯ ಚರ್ಚೆ ನಡೆಯುವ ನಿರೀಕ್ಷೆಯಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago