Categories: CrimeLatest

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ರೇವಾ ಜಿಲ್ಲೆಯ ಮೌಗಂಜ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 135ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಲ್ಸರ್ 220 ಬೈಕ್‌ನಲ್ಲಿ ಅತೀವೇಗದಲ್ಲಿ ಸಂಚರಿಸುತ್ತಿದ್ದ ಮೂವರು ಯುವಕರು, ರೀಲ್ಸ್ ಚಿತ್ರೀಕರಣಕ್ಕಾಗಿ ಅಪಾಯಕಾರಿ ಸ್ಟಂಟ್ ಮಾಡುತ್ತಿದ್ದರು. ಒಬ್ಬ ಯುವಕ ಕೈಯಲ್ಲಿ ಗನ್ ಮಾದರಿಯ ಲೈಟರ್ ಹಿಡಿದು ಪ್ರದರ್ಶನ ಮಾಡುತ್ತಿದ್ದರೆ, ಉಳಿದಿಬ್ಬರು ಕೂಗಿ ಆನಂದಿಸುತ್ತಿದ್ದರು. ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಇದ್ದರೂ ಅವುಗಳನ್ನು ತಪ್ಪಿಸಿಕೊಂಡು ಬೈಕ್ ಚಲಾಯಿಸುತ್ತಿದ್ದರು.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಯುವಕರು ಮೊಬೈಲ್‌ನಲ್ಲಿ ರೀಲ್ಸ್ ರೆಕಾರ್ಡ್ ಮಾಡುತ್ತಿದ್ದ ವೇಳೆ ಗಮನ ಬೇರೆಡೆ ತಿರುಗಿದ್ದು, ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರೇಲರ್ ಟ್ರಕ್‌ಗೆ ಬೈಕ್ ಭಾರೀ ವೇಗದಲ್ಲಿ ಢಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಅಪಘಾತದ ನಂತರ ಅದೇ ಟ್ರಕ್‌ಗೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ವಾಹನ ಕೂಡ ಡಿಕ್ಕಿ ಹೊಡೆದು ಅದರಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ.

ಅಪಘಾತದಲ್ಲಿ ಮೃತಪಟ್ಟವರನ್ನು ಉಪಲಕ್ಷ್ಯ ಕೋಲ್ (17), ಅಮರೀಶ್ ಕೋಲ್ (22) ಮತ್ತು ಹೇಮರಾಜ್ ಕೋಲ್ (17) ಎಂದು ಗುರುತಿಸಲಾಗಿದೆ. ಇವರು ಲಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬೇಲಾ ಗ್ರಾಮದ ನಿವಾಸಿಗಳಾಗಿದ್ದಾರೆ.

ಘಟನೆಯ ಬಳಿಕ ಟ್ರೇಲರ್ ಟ್ರಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

49 seconds ago

ಪಿಜಿ ಮುಂದೆ ಮದ್ಯಪಾನಕ್ಕೆ ವಿರೋಧ: ಮಾಲೀಕನ ಮೇಲೆ ಹಲ್ಲೆ, ಚಿಕಿತ್ಸೆ ಫಲಿಸದೆ ಸಾವು

ಬೆಂಗಳೂರು ನಗರದಲ್ಲಿ ಪಿಜಿ ಮುಂದೆ ಮದ್ಯಪಾನ ಮಾಡುತ್ತಿದ್ದವರನ್ನು ಪ್ರಶ್ನಿಸಿದ್ದ ಕಾರಣಕ್ಕೆ ಪಿಜಿ ಮಾಲೀಕನೊಬ್ಬ ಹತ್ಯೆಯಾಗಿರುವ ದುರ್ಘಟನೆ ರಾಮಮೂರ್ತಿ ನಗರ ಪೊಲೀಸ್…

2 minutes ago

ಅಮೆರಿಕ ಕನಸೇ ಗಂಡನ ಜೀವ ಕಸಿತೇ? ಪತ್ನಿ ಬಂಧನ

ಕ್ಯಾರಿಬಿಯನ್ ದೇಶವೊಂದರಲ್ಲಿ ನಡೆದ ದಾರುಣ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಿಮ್ ಸಿಂಗ್ ಎಂಬ ಯುವತಿಯನ್ನು…

3 minutes ago

ನಡುತೋಪು ಗಿಡಗಳ ಲೆಕ್ಕ ಬಹಿರಂಗಪಡಿಸಿ: ಮಾಹಿತಿ ನೀಡದಿದ್ದರೆ ಸಿಸಿಎಫ್ ಕಚೇರಿಗೆ ಮುತ್ತಿಗೆ ಎಚ್ಚರಿಕೆ

ಮುಂಡಗೋಡ: ಅರಣ್ಯ ಇಲಾಖೆಯ ನಡುತೋಪು ಕಾಮಗಾರಿಗಳ ಕುರಿತು ಕಳೆದ ಮೂರು ವರ್ಷಗಳಲ್ಲಿ ನೆಡಲಾದ ಗಿಡಗಳ ಸಂಖ್ಯೆ ಹಾಗೂ ಪ್ರಸ್ತುತ ಬದುಕುಳಿದಿರುವ…

5 minutes ago

ಕತ್ತಿ ತೋರಿಸಿ ಮನೆಗೆ ನುಗ್ಗಿದ ದುಷ್ಕರ್ಮಿ; ₹3 ಲಕ್ಷ ಮೌಲ್ಯದ ತಾಳಿ ಸರ ಕಸಿದು ಪರಾರಿ

ಸಿದ್ದಾಪುರ: ತಾಲೂಕಿನ ಹಾಳದಕಟ್ಟಾ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿ ಕತ್ತಿ ತೋರಿಸಿ ಬೆದರಿಕೆ ಹಾಕಿ, ಸುಮಾರು ₹3…

7 minutes ago

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

4 hours ago