ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸರು ನಾಗರಾಜ್ ರಾಯ್ಕರ್ ಸೇರಿದಂತೆ ಇಬ್ಬರನ್ನು ಬಂಧಿಸಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
ಅಪ್ರಾಪ್ತ ಮಗನಿಗೆ ಕಾರು ನೀಡಿದ ಆರೋಪದ ಮೇಲೆ ಕಾರು ಮಾಲಿಕ ನಾಗರಾಜ್ ರಾಯ್ಕರ್ ಬಂಧಿತರಾಗಿದ್ದಾರೆ. ಅಪಘಾತಕ್ಕೆ ಕಾರಣವಾದ 17 ವರ್ಷದ ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.
ಮಾರ್ಚ್ 19 ರಂದು ಹುಬ್ಬಳ್ಳಿಯ ಶೇಜವಾಡ್ಕರ್ ಪ್ಲಾಟ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿತ್ತು. ರೀಲ್ಸ್ ಮಾಡುವ ಉದ್ದೇಶದಿಂದ ಕಾರು ಮತ್ತು ಸ್ಕೂಟಿ ನಡುವೆ ಕ್ರ್ಯಾಶ್ ದೃಶ್ಯ ಸೆರೆಹಿಡಿಯಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತು. ಈ ವೇಳೆ ಸ್ಕೂಟಿಯಲ್ಲಿ ಇದ್ದ ನಮೀಷ್ ಸಂಗಳದ ಸ್ಥಳದಲ್ಲೇ ಸಾವನ್ನಪ್ಪಿದ.
ನಮೀಷ್ ಸಂಗಳದ, ಹುಬ್ಬಳ್ಳಿಯ ಲಕ್ಷ್ಮೀನಗರ ನಿವಾಸಿಯಾಗಿದ್ದು, ಬಿಜೆಪಿ ಮುಖಂಡ ವಿರೇಶ್ ಸಂಗಳದ ಪುತ್ರನಾಗಿದ್ದ. ಯುಗಾದಿ ಹಬ್ಬದಂದು ಸ್ನೇಹಿತರೊಂದಿಗೆ ರೀಲ್ಸ್ ಮಾಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಪೊಲೀಸ್ ತನಿಖೆಯಲ್ಲಿ ತಿಳಿದುಬಂದಂತೆ, ನಾಲ್ವರು ಬಾಲಕರು ಸೇರಿ ಕ್ರ್ಯಾಶ್ ರೀಲ್ಸ್ ಮಾಡಲು ಯೋಜಿಸಿದ್ದರು. ನಮೀಷ್ ಸ್ಕೂಟಿ ಓಡಿಸಿಕೊಂಡು ಬರುತ್ತಿದ್ದರೆ, ಎದುರುಗಡೆಯಿಂದ ಅಪ್ರಾಪ್ತ ಬಾಲಕ ಕಾರು ಚಲಾಯಿಸುತ್ತಿದ್ದ. ಇನ್ನಿಬ್ಬರು ಬಾಲಕರು ಈ ದೃಶ್ಯವನ್ನು ವಿಡಿಯೋ ಮಾಡುತ್ತಿದ್ದರು. ಆದರೆ ಅತಿವೇಗದಿಂದ ಬಂದ ವಾಹನಗಳು ನಿಯಂತ್ರಣ ತಪ್ಪಿ ಭೀಕರವಾಗಿ ಡಿಕ್ಕಿ ಹೊಡೆದಿವೆ.
ಈ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನನ್ನು ಬಂಧಿಸಿ ಬಾಲ ಮಂದಿರಕ್ಕೆ ಕಳುಹಿಸಲಾಗಿದ್ದು, ಆತನ ತಂದೆ ನಾಗರಾಜ್ ರಾಯ್ಕರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಘಟನೆ ಹಿನ್ನೆಲೆ, ರೀಲ್ಸ್ ಹುಚ್ಚಾಟದ ಅಪಾಯದ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಬಾರದು ಎಂದು ಪೋಷಕರಿಗೆ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಸೋಶಿಯಲ್ ಮೀಡಿಯಾ ಪ್ರಭಾವದಿಂದ ಯುವಕರು ಅಪಾಯಕಾರಿ ಸ್ಟಂಟ್ಗಳಿಗೆ ಮುಂದಾಗುತ್ತಿರುವುದು ಹೆಚ್ಚುತ್ತಿದೆ. ಈ ದುರಂತವು ರೀಲ್ಸ್ ಹುಚ್ಚಾಟದ ಅಪಾಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಪೋಷಕರು ಮಕ್ಕಳ ಮೇಲೆ ಕಣ್ಗಾವಲು ಇರಿಸಿ, ಇಂತಹ ಅಪಾಯಕಾರಿ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಅತ್ಯಾವಶ್ಯಕವಾಗಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…