Categories: Latest

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸರು ನಾಗರಾಜ್ ರಾಯ್ಕರ್ ಸೇರಿದಂತೆ ಇಬ್ಬರನ್ನು ಬಂಧಿಸಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಅಪ್ರಾಪ್ತ ಮಗನಿಗೆ ಕಾರು ನೀಡಿದ ಆರೋಪದ ಮೇಲೆ ಕಾರು ಮಾಲಿಕ ನಾಗರಾಜ್ ರಾಯ್ಕರ್ ಬಂಧಿತರಾಗಿದ್ದಾರೆ. ಅಪಘಾತಕ್ಕೆ ಕಾರಣವಾದ 17 ವರ್ಷದ ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.

ಮಾರ್ಚ್ 19 ರಂದು ಹುಬ್ಬಳ್ಳಿಯ ಶೇಜವಾಡ್ಕರ್ ಪ್ಲಾಟ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿತ್ತು. ರೀಲ್ಸ್ ಮಾಡುವ ಉದ್ದೇಶದಿಂದ ಕಾರು ಮತ್ತು ಸ್ಕೂಟಿ ನಡುವೆ ಕ್ರ್ಯಾಶ್ ದೃಶ್ಯ ಸೆರೆಹಿಡಿಯಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತು. ಈ ವೇಳೆ ಸ್ಕೂಟಿಯಲ್ಲಿ ಇದ್ದ ನಮೀಷ್ ಸಂಗಳದ ಸ್ಥಳದಲ್ಲೇ ಸಾವನ್ನಪ್ಪಿದ.

ನಮೀಷ್ ಸಂಗಳದ, ಹುಬ್ಬಳ್ಳಿಯ ಲಕ್ಷ್ಮೀನಗರ ನಿವಾಸಿಯಾಗಿದ್ದು, ಬಿಜೆಪಿ ಮುಖಂಡ ವಿರೇಶ್ ಸಂಗಳದ ಪುತ್ರನಾಗಿದ್ದ. ಯುಗಾದಿ ಹಬ್ಬದಂದು ಸ್ನೇಹಿತರೊಂದಿಗೆ ರೀಲ್ಸ್ ಮಾಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಪೊಲೀಸ್ ತನಿಖೆಯಲ್ಲಿ ತಿಳಿದುಬಂದಂತೆ, ನಾಲ್ವರು ಬಾಲಕರು ಸೇರಿ ಕ್ರ್ಯಾಶ್ ರೀಲ್ಸ್ ಮಾಡಲು ಯೋಜಿಸಿದ್ದರು. ನಮೀಷ್ ಸ್ಕೂಟಿ ಓಡಿಸಿಕೊಂಡು ಬರುತ್ತಿದ್ದರೆ, ಎದುರುಗಡೆಯಿಂದ ಅಪ್ರಾಪ್ತ ಬಾಲಕ ಕಾರು ಚಲಾಯಿಸುತ್ತಿದ್ದ. ಇನ್ನಿಬ್ಬರು ಬಾಲಕರು ಈ ದೃಶ್ಯವನ್ನು ವಿಡಿಯೋ ಮಾಡುತ್ತಿದ್ದರು. ಆದರೆ ಅತಿವೇಗದಿಂದ ಬಂದ ವಾಹನಗಳು ನಿಯಂತ್ರಣ ತಪ್ಪಿ ಭೀಕರವಾಗಿ ಡಿಕ್ಕಿ ಹೊಡೆದಿವೆ.

ಈ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನನ್ನು ಬಂಧಿಸಿ ಬಾಲ ಮಂದಿರಕ್ಕೆ ಕಳುಹಿಸಲಾಗಿದ್ದು, ಆತನ ತಂದೆ ನಾಗರಾಜ್ ರಾಯ್ಕರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಘಟನೆ ಹಿನ್ನೆಲೆ, ರೀಲ್ಸ್ ಹುಚ್ಚಾಟದ ಅಪಾಯದ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಬಾರದು ಎಂದು ಪೋಷಕರಿಗೆ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಸೋಶಿಯಲ್ ಮೀಡಿಯಾ ಪ್ರಭಾವದಿಂದ ಯುವಕರು ಅಪಾಯಕಾರಿ ಸ್ಟಂಟ್ಗಳಿಗೆ ಮುಂದಾಗುತ್ತಿರುವುದು ಹೆಚ್ಚುತ್ತಿದೆ. ಈ ದುರಂತವು ರೀಲ್ಸ್ ಹುಚ್ಚಾಟದ ಅಪಾಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಪೋಷಕರು ಮಕ್ಕಳ ಮೇಲೆ ಕಣ್ಗಾವಲು ಇರಿಸಿ, ಇಂತಹ ಅಪಾಯಕಾರಿ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಅತ್ಯಾವಶ್ಯಕವಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago