ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ, ತನ್ನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಕೊಂದು ಆಕೆಯ ಶವವನ್ನು ಫ್ರಿಜ್ನಲ್ಲಿ ಇಟ್ಟಿರುವುದು ಆತಂಕ ಮೂಡಿಸಿದೆ.
ವಿಜಯನಗರ ಜಿಲ್ಲೆಯ ಮೂಲದ ರವೀಂದ್ರ ಎಂಬ ಆರೋಪಿ, ಮೌನಿಕಾ (28) ಎಂಬ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ದನು. ಇತ್ತೀಚೆಗೆ ರವೀಂದ್ರನ ಪತ್ನಿ ತವರು ಮನೆಯಲ್ಲಿ ಇರುವ ವೇಳೆ, ಮೌನಿಕಾ ಆತನ ಮೇಲೆ ಹಣಕ್ಕಾಗಿ ಒತ್ತಡ ಹೇರುತ್ತಿದ್ದಾಳೆ ಎಂದು ಹೇಳಲಾಗಿದೆ.
ಈ ಹಿನ್ನೆಲೆ, ರವೀಂದ್ರ ಮೌನಿಕಾಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಭೇಟಿ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಆಕ್ರೋಶಗೊಂಡ ರವೀಂದ್ರ ಚಾಕುವಿನಿಂದ ಇರಿದು ಮೌನಿಕಾಳನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.
ಕೊಲೆಯ ನಂತರ ಶವವನ್ನು ತುಂಡುಮಾಡಿ, ಅದರ ಒಂದು ಭಾಗವನ್ನು ಫ್ರಿಜ್ನಲ್ಲಿ ಇಟ್ಟು, ಇನ್ನೊಂದು ಭಾಗವನ್ನು ಕಟ್ಟಿ ಮನೆಯೊಂದರ ಮೂಲೆಯಲ್ಲಿ ಬಚ್ಚಿಟ್ಟಿದ್ದಾನೆ. ನಂತರ ಆತ ಸ್ವತಃ ಪೊಲೀಸರಿಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಪ್ರೇಮ ಪ್ರಕರಣವೊಂದು ಹಿಂಸಾತ್ಮಕ ತಿರುವು ಪಡೆದಿದ್ದು, ವಿವಾಹಿತೆಯೊಂದಿಗೆ ಯುವಕ ಓಡಿಹೋದ ಹಿನ್ನೆಲೆ ಆತನ ಮನೆಯ ಮೇಲೆ ಗುಂಪೊಂದು…
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಪತ್ನಿಯೇ ಪತಿಯ ಕ್ರೌರ್ಯಕ್ಕೆ ಬಲಿಯಾದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಪಕ್ಕದ ಮನೆಯ ಯುವತಿಯೊಂದಿಗೆ ಹೊಂದಿದ್ದ…
ಮೈಸೂರಿನಲ್ಲಿ ದಂಪತಿ ನಡುವಿನ ಕುಟುಂಬ ಕಲಹ ದಾರುಣ ಅಂತ್ಯ ಕಂಡಿದ್ದು, ಮಕ್ಕಳಾಗಿಲ್ಲ ಎಂಬ ವಿಚಾರಕ್ಕೆ ಉಂಟಾದ ಜಗಳದಲ್ಲಿ ಪತ್ನಿಯೇ ಗಂಡನನ್ನು…
UPSC ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವ ಕನಸು ಲಕ್ಷಾಂತರ ಯುವಕರದ್ದಾಗಿದ್ದರೂ, ಅದನ್ನು ನನಸು ಮಾಡುವುದು ಕೆಲವೇ ಮಂದಿಗೆ ಸಾಧ್ಯವಾಗುತ್ತದೆ. ಹಲವು ಮಂದಿ…
ಬಿಹಾರದ ಒಂದು ಸಣ್ಣ ಹಳ್ಳಿಯಿಂದ ಆರಂಭವಾದ ಪ್ರಯಾಣ, ಇಂದು ದೇಶದ ಅತ್ಯುನ್ನತ ನಾಗರಿಕ ಸೇವೆಯಾದ ಐಎಎಸ್ ಹುದ್ದೆ ತಲುಪಿದೆ. ದೃಢ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸಬೇಕಿದ್ದ ಪೊಲೀಸ್ ಅಧಿಕಾರಿಯೇ ಅಪ್ರಾಪ್ತ ಬಾಲಕರ…