Categories: CrimeLatest

ವಿವಾಹಿತೆಯೊಂದಿಗೆ ಸಂಬಂಧ: ಆಕೆಯನ್ನೇ ಕೊಂದು ಫ್ರಿಡ್ಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ.

ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ, ತನ್ನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಕೊಂದು ಆಕೆಯ ಶವವನ್ನು ಫ್ರಿಜ್‌ನಲ್ಲಿ ಇಟ್ಟಿರುವುದು ಆತಂಕ ಮೂಡಿಸಿದೆ.

ವಿಜಯನಗರ ಜಿಲ್ಲೆಯ ಮೂಲದ ರವೀಂದ್ರ ಎಂಬ ಆರೋಪಿ, ಮೌನಿಕಾ (28) ಎಂಬ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ದನು. ಇತ್ತೀಚೆಗೆ ರವೀಂದ್ರನ ಪತ್ನಿ ತವರು ಮನೆಯಲ್ಲಿ ಇರುವ ವೇಳೆ, ಮೌನಿಕಾ ಆತನ ಮೇಲೆ ಹಣಕ್ಕಾಗಿ ಒತ್ತಡ ಹೇರುತ್ತಿದ್ದಾಳೆ ಎಂದು ಹೇಳಲಾಗಿದೆ.

ಈ ಹಿನ್ನೆಲೆ, ರವೀಂದ್ರ ಮೌನಿಕಾಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಭೇಟಿ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಆಕ್ರೋಶಗೊಂಡ ರವೀಂದ್ರ ಚಾಕುವಿನಿಂದ ಇರಿದು ಮೌನಿಕಾಳನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಕೊಲೆಯ ನಂತರ ಶವವನ್ನು ತುಂಡುಮಾಡಿ, ಅದರ ಒಂದು ಭಾಗವನ್ನು ಫ್ರಿಜ್‌ನಲ್ಲಿ ಇಟ್ಟು, ಇನ್ನೊಂದು ಭಾಗವನ್ನು ಕಟ್ಟಿ ಮನೆಯೊಂದರ ಮೂಲೆಯಲ್ಲಿ ಬಚ್ಚಿಟ್ಟಿದ್ದಾನೆ. ನಂತರ ಆತ ಸ್ವತಃ ಪೊಲೀಸರಿಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

1 day ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

1 day ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago