ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ, ತನ್ನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಕೊಂದು ಆಕೆಯ ಶವವನ್ನು ಫ್ರಿಜ್ನಲ್ಲಿ ಇಟ್ಟಿರುವುದು ಆತಂಕ ಮೂಡಿಸಿದೆ.
ವಿಜಯನಗರ ಜಿಲ್ಲೆಯ ಮೂಲದ ರವೀಂದ್ರ ಎಂಬ ಆರೋಪಿ, ಮೌನಿಕಾ (28) ಎಂಬ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ದನು. ಇತ್ತೀಚೆಗೆ ರವೀಂದ್ರನ ಪತ್ನಿ ತವರು ಮನೆಯಲ್ಲಿ ಇರುವ ವೇಳೆ, ಮೌನಿಕಾ ಆತನ ಮೇಲೆ ಹಣಕ್ಕಾಗಿ ಒತ್ತಡ ಹೇರುತ್ತಿದ್ದಾಳೆ ಎಂದು ಹೇಳಲಾಗಿದೆ.
ಈ ಹಿನ್ನೆಲೆ, ರವೀಂದ್ರ ಮೌನಿಕಾಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಭೇಟಿ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಆಕ್ರೋಶಗೊಂಡ ರವೀಂದ್ರ ಚಾಕುವಿನಿಂದ ಇರಿದು ಮೌನಿಕಾಳನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.
ಕೊಲೆಯ ನಂತರ ಶವವನ್ನು ತುಂಡುಮಾಡಿ, ಅದರ ಒಂದು ಭಾಗವನ್ನು ಫ್ರಿಜ್ನಲ್ಲಿ ಇಟ್ಟು, ಇನ್ನೊಂದು ಭಾಗವನ್ನು ಕಟ್ಟಿ ಮನೆಯೊಂದರ ಮೂಲೆಯಲ್ಲಿ ಬಚ್ಚಿಟ್ಟಿದ್ದಾನೆ. ನಂತರ ಆತ ಸ್ವತಃ ಪೊಲೀಸರಿಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…