Categories: CrimeLatest

ವಿವಾಹಿತೆಯೊಂದಿಗೆ ಸಂಬಂಧ: ಆಕೆಯ ಟಾರ್ಚರ್ ಗೆ ಬೇಸತ್ತ ಜಿಮ್ ಟ್ರೈನರ್ ಆತ್ಮಹತ್ಯೆ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬ್ಲಾಕ್‌ಮೇಲ್ ಹಾಗೂ ಕಿರುಕುಳ ತಾಳಲಾರದೆ ಯುವ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಕಿಗೆ ಬಂದಿದೆ. ದಿಲೀಪ್ (28) ಮೃತ ಯುವಕನಾಗಿದ್ದು, ಸಾವಿಗೆ ಮುನ್ನ ಮಹಿಳೆಗೆ ವಿಡಿಯೋ ಕಾಲ್ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ತಿಳಿಸಿದ್ದಾನೆ ಎಂಬುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ನೆಲಮಂಗಲ ತಾಲೂಕಿನ ವಾಜರಹಳ್ಳಿ ನಿವಾಸಿಯಾಗಿದ್ದ ದಿಲೀಪ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದರು. ಅವರು ಕೆಲಸ ಮಾಡುತ್ತಿದ್ದ ಜಿಮ್‌ಗೆ ಫಿಟ್ನೆಸ್‌ಗಾಗಿ ಬರುತ್ತಿದ್ದ ಯೋಗಿತಾ ಎಂಬ ವಿವಾಹಿತ ಮಹಿಳೆಯೊಂದಿಗೆ ಪರಿಚಯ ಬೆಳೆದಿತ್ತು. ಈ ಪರಿಚಯ ನಂತರ ಸಲುಗೆಗೆ ತಿರುಗಿ, ಇಬ್ಬರ ಮಧ್ಯೆ ಆತ್ಮೀಯ ಸಂಬಂಧ ರೂಪುಗೊಂಡಿತ್ತು ಎನ್ನಲಾಗಿದೆ.

ಈ ಸಂಬಂಧದ ವಿಚಾರವು ಒಂದು ವರ್ಷ ಹಿಂದೆಯೇ ಪೊಲೀಸ್ ಠಾಣೆ ಮಟ್ಟಿಗೆ ಹೋಗಿ ಬಳಿಕ ರಾಜಿ ಸಮಾಧಾನಗೊಂಡಿತ್ತು. ಆದರೂ ಕೂಡ, ಯೋಗಿತಾ ದಿಲೀಪ್‌ಗೆ ನಿರಂತರವಾಗಿ ಬ್ಲಾಕ್‌ಮೇಲ್ ಮಾಡುತ್ತಾ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.

ಮೃತ ದಿಲೀಪ್ ತಂದೆ ರಮೇಶ್ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಅವರ ಪ್ರಕಾರ, ಯೋಗಿತಾ ತನ್ನ ಮಗನಿಗೆ ಮಾನಸಿಕ ಹಿಂಸೆ ನೀಡುತ್ತಿದ್ದು, ದಿಲೀಪ್ ಹೆಸರಿನಲ್ಲಿದ್ದ ಮನೆಯನ್ನು ತನ್ನ ಮಗನ ಹೆಸರಿಗೆ ಬರೆಸಿಕೊಳ್ಳುವಂತೆ ಒತ್ತಡ ಹಾಕುತ್ತಿದ್ದಳು. ಈ ಕಿರುಕುಳದಿಂದ ಬೇಸತ್ತು ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ದೂರಿದ್ದಾರೆ.

ಸಾವಿಗೆ ಮುನ್ನ ದಿಲೀಪ್ ಯೋಗಿತಾಳಿಗೆ ವಿಡಿಯೋ ಕಾಲ್ ಮಾಡಿದ್ದಾನೆ ಎನ್ನಲಾಗಿದ್ದು, ಈ ವಿಷಯ ತಿಳಿದ ಯೋಗಿತಾ ದಿಲೀಪ್ ಸಹೋದರಿಗೆ ಇನ್‌ಸ್ಟಾಗ್ರಾಮ್ ಮೂಲಕ ಮಾಹಿತಿ ನೀಡಿದ್ದಾಳೆ. ತಕ್ಷಣ ಕುಟುಂಬಸ್ಥರು ಮನೆ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ದಿಲೀಪ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದ ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಿಲೀಪ್ ಮೊಬೈಲ್ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

18 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

18 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

18 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

18 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

18 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

18 hours ago