Categories: CrimeLatest

ವಿವಾಹಿತೆಯೊಂದಿಗೆ ಸಂಬಂಧ: ಆಕೆಯ ಟಾರ್ಚರ್ ಗೆ ಬೇಸತ್ತ ಜಿಮ್ ಟ್ರೈನರ್ ಆತ್ಮಹತ್ಯೆ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬ್ಲಾಕ್‌ಮೇಲ್ ಹಾಗೂ ಕಿರುಕುಳ ತಾಳಲಾರದೆ ಯುವ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಕಿಗೆ ಬಂದಿದೆ. ದಿಲೀಪ್ (28) ಮೃತ ಯುವಕನಾಗಿದ್ದು, ಸಾವಿಗೆ ಮುನ್ನ ಮಹಿಳೆಗೆ ವಿಡಿಯೋ ಕಾಲ್ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ತಿಳಿಸಿದ್ದಾನೆ ಎಂಬುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ನೆಲಮಂಗಲ ತಾಲೂಕಿನ ವಾಜರಹಳ್ಳಿ ನಿವಾಸಿಯಾಗಿದ್ದ ದಿಲೀಪ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದರು. ಅವರು ಕೆಲಸ ಮಾಡುತ್ತಿದ್ದ ಜಿಮ್‌ಗೆ ಫಿಟ್ನೆಸ್‌ಗಾಗಿ ಬರುತ್ತಿದ್ದ ಯೋಗಿತಾ ಎಂಬ ವಿವಾಹಿತ ಮಹಿಳೆಯೊಂದಿಗೆ ಪರಿಚಯ ಬೆಳೆದಿತ್ತು. ಈ ಪರಿಚಯ ನಂತರ ಸಲುಗೆಗೆ ತಿರುಗಿ, ಇಬ್ಬರ ಮಧ್ಯೆ ಆತ್ಮೀಯ ಸಂಬಂಧ ರೂಪುಗೊಂಡಿತ್ತು ಎನ್ನಲಾಗಿದೆ.

ಈ ಸಂಬಂಧದ ವಿಚಾರವು ಒಂದು ವರ್ಷ ಹಿಂದೆಯೇ ಪೊಲೀಸ್ ಠಾಣೆ ಮಟ್ಟಿಗೆ ಹೋಗಿ ಬಳಿಕ ರಾಜಿ ಸಮಾಧಾನಗೊಂಡಿತ್ತು. ಆದರೂ ಕೂಡ, ಯೋಗಿತಾ ದಿಲೀಪ್‌ಗೆ ನಿರಂತರವಾಗಿ ಬ್ಲಾಕ್‌ಮೇಲ್ ಮಾಡುತ್ತಾ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.

ಮೃತ ದಿಲೀಪ್ ತಂದೆ ರಮೇಶ್ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಅವರ ಪ್ರಕಾರ, ಯೋಗಿತಾ ತನ್ನ ಮಗನಿಗೆ ಮಾನಸಿಕ ಹಿಂಸೆ ನೀಡುತ್ತಿದ್ದು, ದಿಲೀಪ್ ಹೆಸರಿನಲ್ಲಿದ್ದ ಮನೆಯನ್ನು ತನ್ನ ಮಗನ ಹೆಸರಿಗೆ ಬರೆಸಿಕೊಳ್ಳುವಂತೆ ಒತ್ತಡ ಹಾಕುತ್ತಿದ್ದಳು. ಈ ಕಿರುಕುಳದಿಂದ ಬೇಸತ್ತು ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ದೂರಿದ್ದಾರೆ.

ಸಾವಿಗೆ ಮುನ್ನ ದಿಲೀಪ್ ಯೋಗಿತಾಳಿಗೆ ವಿಡಿಯೋ ಕಾಲ್ ಮಾಡಿದ್ದಾನೆ ಎನ್ನಲಾಗಿದ್ದು, ಈ ವಿಷಯ ತಿಳಿದ ಯೋಗಿತಾ ದಿಲೀಪ್ ಸಹೋದರಿಗೆ ಇನ್‌ಸ್ಟಾಗ್ರಾಮ್ ಮೂಲಕ ಮಾಹಿತಿ ನೀಡಿದ್ದಾಳೆ. ತಕ್ಷಣ ಕುಟುಂಬಸ್ಥರು ಮನೆ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ದಿಲೀಪ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದ ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಿಲೀಪ್ ಮೊಬೈಲ್ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಜಮೀನಿಗೆ ಹೋದ ಮಹಿಳೆ ನಿಗೂಢ ನಾಪತ್ತೆ: ಸ್ಥಳದಲ್ಲಿ ಕೃತಕ ಚಿರತೆ ಹೆಜ್ಜೆ ಗುರುತು ಪತ್ತೆ, ಗ್ರಾಮದಲ್ಲಿ ಆತಂಕ

ನಂಜನಗೂಡು: ಜಮೀನಿಗೆ ತೆರಳಿದ್ದ 63 ವರ್ಷದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ…

10 hours ago

ಭೀಮಾತೀರದಲ್ಲಿ ರಕ್ತದೋಕುಳಿ: ಒಂದೇ ಕುಟುಂಬದ 5 ಮಂದಿ ಸೇರಿ 6 ಜನರ ಹತ್ಯೆ; 10 ಆರೋಪಿಗಳ ಬಂಧನ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಒಂದೇ ಕುಟುಂಬದ ಐದು…

12 hours ago

ಆರ್‌ಸಿಬಿ ಅಭಿಮಾನಿಯ ವಿಕೃತಿ: ಹೈದರಾಬಾದ್ ಬೆಂಬಲಿಸಿದ್ದ ಯುವತಿಗೆ ರೇಪ್ ಬೆದರಿಕೆ, ಸೈಬರ್ ಕ್ರೈಂನಲ್ಲಿ ಪ್ರಕರಣ!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಟೂರ್ನಿ ಅಂತಿಮ ಹಂತ ತಲುಪಿದ್ದು, ನಾಳೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ…

20 hours ago

34 ವರ್ಷಗಳ ಬಳಿಕ ರವಿಚಂದ್ರನ್ ಬಳಿ ಕಣ್ಣೀರಿಟ್ಟು ಕ್ಷಮೆ ಕೇಳಿದ ನಟಿ ಬಿಂದಿಯಾ; “ರವಿ ಸರ್ ಯಾವುದೇ ತಪ್ಪು ಮಾಡಿರಲಿಲ್ಲ”

ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧ ಮೂರು ದಶಕಗಳ ಹಿಂದೆ ಗಂಭೀರ ಆರೋಪ ಮಾಡಿದ್ದ ನಟಿ ಬಿಂದಿಯಾ,…

21 hours ago

ಭೀಮಾತೀರದಲ್ಲಿ ಭೀಕರ ಹತ್ಯಾಕಾಂಡ: 25 ಎಕರೆ ಜಮೀನು ಜಗಳಕ್ಕೆ ಒಂದೇ ಕುಟುಂಬದ 6 ಮಂದಿಯ ಹತ್ಯೆ

ಭೀಮಾತೀರ ಪ್ರದೇಶ ಮತ್ತೆ ರಕ್ತದ ಮಡುವಾಗಿ ಮಾರ್ಪಟ್ಟಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ…

1 day ago

ಡಿಕೆ ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಸಜ್ಜು: ಸೋಮವಾರ ಪ್ರಮಾಣ ವಚನ, ಹೊಸ ಸಚಿವರ ಪಟ್ಟಿ ಫೈನಲ್?

ರಾಜ್ಯದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ…

2 days ago