Latest

ಮಗಳು ಮತ್ತು ತಾಯಿ ಇಬ್ಬರ ಜೊತೆಯು ಸಂಬಂಧ ಹೊಂದಿದ್ದ ಯುವಕನನ್ನು ಕುಟುಂಬಸ್ಥರು ಹೊಡೆದು ಕೊಂದರು.

ಯುವತಿ ಮತ್ತು ಆಕೆಯ ತಾಯಿ ಇಬ್ಬರೊಂದಿಗೂ ಸಂಬಂಧ ಹೊಂದಿದ್ದ 21 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿ, ಮೃತದೇಹ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಅಯಾನ್ ಮಂಡಲ್ ಎಂಬಾತನೇ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಈ ಕೊಲೆ ಸಂಬಂಧ ಯುವತಿ, ಆಕೆಯ ತಾಯಿ, ತಂದೆ, ಸಹೋದರ ಮತ್ತು ಇಬ್ಬರು ಸಹಚರರು ಸೇರಿದಂತೆ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಯಾಬ್ ಚಾಲಕನಾಗಿದ್ದ ಅಯಾನ್ ಮಂಡಲ್ ತನ್ನ ಗೆಳತಿ ಹಾಗೂ ಆಕೆಯ ತಾಯಿಯೊಂದಿಗೂ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ. ವಿಜಯ ದಶಮಿ ನಿಮಿತ್ತ ಬುಧವಾರ ಸಂಜೆ ತನ್ನ ಗೆಳತಿಗೆ ಕರೆ ಮಾಡಿ ಸಂಪರ್ಕ ಸಾಧಿಸಲು ಯತ್ನಿಸಿದ್ದರು. ಆದರೆ, ಗೆಳತಿ ಪದೇ ಪದೆ ಕರೆಗಳನ್ನು ಕಡಿತಗೊಳಿಸಿದ್ದರು. ಇದರಿಂದ ಮಂಡಲ್​ ನಶೆಯಲ್ಲಿ ತನ್ನ ಗೆಳತಿ ಮನೆಗೆ ತೆರಳಿದ್ದ ಎಂದು ತಿಳಿದು ಬಂದಿದೆ.

ಮನೆಗೆ ತಲುಪಿದ ಬಳಿಕ ಗೆಳತಿಯ ತಾಯಿಯೊಂದಿಗೆ ಮಂಡಲ್​ ಜಗಳ ಮಾಡಿದ್ದಾರೆ. ಅಲ್ಲದೇ, ಆಕೆ ಮೇಲೆ ಹಲ್ಲೆ ಕೂಡ ನಡೆಸಿದ್ದಾರೆ. ಆಗ ತಕ್ಷಣವೇ ಗೆಳತಿ ಹಾಗೂ ಆಕೆಯ ಸಹೋದರ ಮತ್ತು ತಂದೆ ಬಂದಿದ್ದಾರೆ. ಇದರಿಂದ ಈ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಮಂಡಲ್​ ತಲೆಗೆ ಸಹೋದರ ಭಾರವಾದ ವಸ್ತುವಿನಿಂದ ಹೊಡೆದಿದ್ದಾರೆ. ಪರಿಣಾಮ ಮಂಡಲ್​ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ ನಾಲ್ವರು ಸೇರಿಕೊಂಡು ಹೇಗಾದರೂ ಮಾಡಿ ಶವವನ್ನು ದೂರ ಎಸೆಯಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಆಕೆಯ ಸಹೋದರ ತನ್ನ ಇಬ್ಬರು ನಿಕಟ ಸಹಚರರನ್ನು ಸಂಪರ್ಕಿಸಿ, ಪಿಕ್ ಅಪ್ ವ್ಯಾನ್ ಬಾಡಿಗೆಗೆ ಪಡೆದು ಶವವನ್ನು ಮಗ್ರಾಹತ್‌ನ ಏಕಾಂತ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಎಸೆದಿದ್ದಾರೆ. ಇತ್ತ, ಗುರುವಾರ ಬೆಳಗ್ಗೆ ಮಂಡಲ್​ ಕುಟುಂಬಸ್ಥರು ನಾಪತ್ತೆ ದೂರು ದಾಖಲಿಸಿದ್ದು, ದೂರಿನ ಬೆನ್ನಟ್ಟಿದಾಗ ಕೊಲೆಯಾಗಿರುವುದು ಬಯಲಿಗೆ ಬಂದಿದೆ. ಶುಕ್ರವಾರ ರಾತ್ರಿ ಅಯಾನ್ ಮಂಡಲ್​ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್​ ಅಧಿಕಾರಿ ವಿವರಿಸಿದ್ದಾರೆ.

ಇದೇ ವೇಳೆ, ಪ್ರಕರಣವು ಪ್ರಮುಖವಾದ ತಿರುವು ಬಂದಿದೆ. ಅಯಾನ್ ಮನೆಗೆ ಬಂದಿದ್ದ ಗೆಳತಿಯು ತಾನು ಗರ್ಭಿಣಿ ಹಾಗೂ ತನ್ನ ಹೊಟ್ಟೆಯಲ್ಲಿ ಮಗುವಿದೆ ಅಂತಾ ಹೇಳಿಕೊಂಡಿರುವುದಾಗಿ ಅಯಾನ್​ನ ತಾಯಿ ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲು ಮುಂದಾಗಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 hour ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 hour ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 hour ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

2 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

2 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

22 hours ago